ಹಳೇಬೀಡು ಹೋಬಳಿಯ ಯಲಹಂಕ ಗ್ರಾಮದಲ್ಲಿ ದೀರ್ಘ ಕಾಲದಿಂದ ಕಲ್ಲುಗಣಿಗಾರಿಕೆಯಲ್ಲಿ ತೊಡಗಿದ್ದ ಚಂದ್ರು ಎಂಬವರು, ತಮ್ಮ ಕಾನೂನುಬದ್ಧ ಗಣಿ ಚಟುವಟಿಕೆಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸೋಮವಾರ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ನಾವು ಪಾರಂಪರಿಕವಾಗಿ ಕಲ್ಲುಗಣಿಗಾರಿಕೆ ಮಾಡುತ್ತಿದ್ದವರೆ. ಯಲಹಂಕ ಗ್ರಾಮದ ಸರ್ವೆ ನಂ.80ರಲ್ಲಿ ಕೆಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕರೊಬ್ಬರಿಗೆ ತಿಂಗಳಿಗೆ ₹7 ಸಾವಿರ ನೀಡುತ್ತಾ ಅಕ್ರಮವಾಗಿ ಗಣಿಕಾರಿಕೆ ಮಾಡುತ್ತಾ ಬಂದಿದ್ದೆವು. ಈಗ ಸರ್ಕಾರ ಈ ಜಾಗದಲ್ಲಿ ಅಧಿಕೃತ ಗಣಿಕಾರಿಕೆಗೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ನಾವು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿದ್ದೇವೆ. 2 ಎಕರೆ ಜಮೀನಿನಲ್ಲಿ ಕಾನೂನಿಗೆ ಅನುಗುಣವಾಗಿ ಕೆಲಸ ಮಾಡಬೇಕೆಂಬ ಉದ್ದೇಶವಿದೆ” ಎಂದು ಹೇಳಿದರು.
ಆದರೆ ಈ ಹಿಂದೆ ಹಣ ಪಡೆದು ಅನುಮತಿಸಿದ್ದ ವ್ಯಕ್ತಿಯೇ ಈಗ ಜಮೀನಿನ ಮೇಲೆ ಹಕ್ಕು ಹುರಿತೊರೆಸಿ ಗಣಿ ಮಂಜೂರಿಗೆ ಅಡ್ಡಿಯಾಗುತ್ತಿದ್ದಾರೆ. “ಈ ತೊಂದರೆಯಿಂದಾಗಿ ಭೋವಿ ಜನಾಂಗದ ನಾವು ಬದುಕು ಸಾಗಿಸಲು ಕಷ್ಟಕ್ಕೆ ಗುರಿಯಾಗುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯದಲ್ಲಿ ನಮ್ಮಗೆ ನ್ಯಾಯ ಒದಗಿಸಬೇಕು” ಎಂದು ಅವರು ಮನವಿ ಮಾಡಿದರು.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…