ಹಳೇಬೀಡು ಹೋಬಳಿಯ ಯಲಹಂಕ ಗ್ರಾಮದಲ್ಲಿ ದೀರ್ಘ ಕಾಲದಿಂದ ಕಲ್ಲುಗಣಿಗಾರಿಕೆಯಲ್ಲಿ ತೊಡಗಿದ್ದ ಚಂದ್ರು ಎಂಬವರು, ತಮ್ಮ ಕಾನೂನುಬದ್ಧ ಗಣಿ ಚಟುವಟಿಕೆಗೆ ಕೆಲವರು ಅಡ್ಡಿಪಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಸೋಮವಾರ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, “ನಾವು ಪಾರಂಪರಿಕವಾಗಿ ಕಲ್ಲುಗಣಿಗಾರಿಕೆ ಮಾಡುತ್ತಿದ್ದವರೆ. ಯಲಹಂಕ ಗ್ರಾಮದ ಸರ್ವೆ ನಂ.80ರಲ್ಲಿ ಕೆಲವು ವರ್ಷಗಳಿಂದ ಪಕ್ಕದ ಜಮೀನಿನ ಮಾಲೀಕರೊಬ್ಬರಿಗೆ ತಿಂಗಳಿಗೆ ₹7 ಸಾವಿರ ನೀಡುತ್ತಾ ಅಕ್ರಮವಾಗಿ ಗಣಿಕಾರಿಕೆ ಮಾಡುತ್ತಾ ಬಂದಿದ್ದೆವು. ಈಗ ಸರ್ಕಾರ ಈ ಜಾಗದಲ್ಲಿ ಅಧಿಕೃತ ಗಣಿಕಾರಿಕೆಗೆ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ನಾವು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಅರ್ಜಿ ಸಲ್ಲಿಸಿದ್ದೇವೆ. 2 ಎಕರೆ ಜಮೀನಿನಲ್ಲಿ ಕಾನೂನಿಗೆ ಅನುಗುಣವಾಗಿ ಕೆಲಸ ಮಾಡಬೇಕೆಂಬ ಉದ್ದೇಶವಿದೆ” ಎಂದು ಹೇಳಿದರು.
ಆದರೆ ಈ ಹಿಂದೆ ಹಣ ಪಡೆದು ಅನುಮತಿಸಿದ್ದ ವ್ಯಕ್ತಿಯೇ ಈಗ ಜಮೀನಿನ ಮೇಲೆ ಹಕ್ಕು ಹುರಿತೊರೆಸಿ ಗಣಿ ಮಂಜೂರಿಗೆ ಅಡ್ಡಿಯಾಗುತ್ತಿದ್ದಾರೆ. “ಈ ತೊಂದರೆಯಿಂದಾಗಿ ಭೋವಿ ಜನಾಂಗದ ನಾವು ಬದುಕು ಸಾಗಿಸಲು ಕಷ್ಟಕ್ಕೆ ಗುರಿಯಾಗುತ್ತಿದ್ದೇವೆ. ಸಂಬಂಧಪಟ್ಟ ಅಧಿಕಾರಿಗಳು ಈ ವಿಷಯದಲ್ಲಿ ನಮ್ಮಗೆ ನ್ಯಾಯ ಒದಗಿಸಬೇಕು” ಎಂದು ಅವರು ಮನವಿ ಮಾಡಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದಿಬ್ಬೂರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮನಕಲುಕುವ ಘಟನೆ ಬೆಳಕಿಗೆ ಬಂದಿದ್ದು, ಮೊರಾರ್ಜಿ ವಸತಿ ಶಾಲೆಯಲ್ಲಿ…
ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಆವರ್ತಿ ಗ್ರಾಮದಲ್ಲಿ ನಿವೃತ್ತ ಶಿಕ್ಷಕರ ಮನೆಯಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಬೈಲುಕೊಪ್ಪ ಪೊಲೀಸರು ಭೇದಿಸಿದ್ದು,…
ತುಮಕೂರು ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆಯ ಪಿಎಸ್ಐ ಸೇರಿದಂತೆ ಮೂವರು ಪೊಲೀಸ್ ಸಿಬ್ಬಂದಿಯನ್ನು ಕರ್ತವ್ಯ ಲೋಪದ ಆರೋಪದಡಿ ಅಮಾನತುಗೊಳಿಸಲಾಗಿದೆ. ವಂಚನೆ…
ಬೆಂಗಳೂರು ನಗರದಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ನಿರ್ವಹಣೆಯ ಕೊರತೆಯಿಂದ ಮತ್ತೊಂದು ಗಂಭೀರ ಅವಘಡ ಸಂಭವಿಸಿದೆ. ರಾಜಾಜಿನಗರದ ರಾಮಮಂದಿರ ರಸ್ತೆಯಲ್ಲಿ…
ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪುಟ್ಟ ಮಗುವಿಗೆ ಮಹಿಳೆಯೊಬ್ಬರು ಕಾಲಿನಿಂದ ಒದ್ದಿರುವ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ವಿಡಿಯೋವನ್ನು…
ರಾಜಸ್ಥಾನದ ಡುಂಗರಪುರ ಜಿಲ್ಲೆಯ ಬಿಚ್ಚಿವಾಡ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೃದ್ಧ ದೂರುದಾರನ…