Latest

ಸರ್ಕಾರಿ ಪಗಾರ ತಿಂದು ಊರು ತಿರುಗುತ್ತಿರುವ ಕೋಲೂರ ಗ್ರಾಮ ಪಂಚಾಯತಿ ಅಧಿಕಾರಿಗಳು.

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಕೋಲೂರ ಗ್ರಾಮ ಪಂಚಾಯತಿ ಪಿಡಿಒ ಮಾಲಾಶ್ರೀ ಬಿ ಕೆಂಚನಗೌಡರ ಮತ್ತು ಕಾರ್ಯದರ್ಶಿ ಹಣಮಂತ ಎಸ್ ಗಾಣಿಗೇರ ಇವರು ಇಬ್ಬರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಕಛೇರಿಗೆ ಬರುತ್ತಿಲ್ಲವೆಂದು ಇಲ್ಲಿಯ ಸ್ಥಳೀಯ ಯುವಕರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ.
ದಿನನಿತ್ಯವೂ ಗ್ರಾಮದ ಜನರು ಒಂದಲ್ಲ ಒಂದು ಕೆಲಸಕ್ಕೆ ಪಂಚಾಯತಿಗೆ ಹೋಗಲೆಬೇಕಾಗುತ್ತದೆ ಆದರೆ ಇಲ್ಲಿ ಅಧಿಕಾರಿಗಳೆ ಇಲ್ಲದಿದ್ದರೆ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರೂ?
ದಿನವಿಡೀ ಕಾದು ಕುಳಿತರು ಸಹ ಪಿಡಿಒ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ.
ಪಿಡಿಒ ಮಾಲಾಶ್ರೀ ಹಾಗೂ ಕಾರ್ಯದರ್ಶಿ ಹಣಮಂತ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ತಮ್ಮ ಮನಸ್ಸಿಗೆ ಬಂದಾಗ ಬರುತ್ತಾರೆ ಸಾಕಾದರೆ ಹೋಗುತ್ತಾರೆ. ಇವರು ಇಬ್ಬರೂ ಮಧ್ಯಾಹ್ನ ಗಂಟೆ 12 ಆದರೂ ಕಛೇರಿಗೆ ಬರುವುದೇ ಇಲ್ಲವೆಂದು ತಿಳಿಸಿದರು.


ಪ್ರತಿನಿತ್ಯವೂ ಇದೆ ಗೋಳು ಅನುಭವಿಸಿ ಸ್ಥಳೀಯ ಯುವಕರೊಬ್ಬರು ಕಾರ್ಯದರ್ಶಿ ಹಣಮಂತನಿಗೆ ಕರೆ ಮಾಡಿ “ಸರ್ ನೀವು ಪಂಚಾಯತಿಗೆ ಎಷ್ಟು ಗಂಟೆಗೆ ಬರುತ್ತಿರಿ” ಎಂದು ಕೇಳಿದಾಗ ಆ ಯುವಕನಿಗೆ ಅದನ್ನು ಕೇಳೋಕೆ “ನೀ ಯಾರು ಲೇ” ಎಂಬ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಒಬ್ಬ ಪ್ರಜೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದರೆ ಈ ಕಾರ್ಯದರ್ಶಿಗೆ ಎಷ್ಟು ಸೊಕ್ಕಿರಬೇಡ? ನೀವೇ ಯೋಚಿಸಿ.
ಈ ವಿಚಾರವಾಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರದಿಯನ್ನು ಗಮನಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

7 days ago