ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಕೋಲೂರ ಗ್ರಾಮ ಪಂಚಾಯತಿ ಪಿಡಿಒ ಮಾಲಾಶ್ರೀ ಬಿ ಕೆಂಚನಗೌಡರ ಮತ್ತು ಕಾರ್ಯದರ್ಶಿ ಹಣಮಂತ ಎಸ್ ಗಾಣಿಗೇರ ಇವರು ಇಬ್ಬರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಕಛೇರಿಗೆ ಬರುತ್ತಿಲ್ಲವೆಂದು ಇಲ್ಲಿಯ ಸ್ಥಳೀಯ ಯುವಕರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ.
ದಿನನಿತ್ಯವೂ ಗ್ರಾಮದ ಜನರು ಒಂದಲ್ಲ ಒಂದು ಕೆಲಸಕ್ಕೆ ಪಂಚಾಯತಿಗೆ ಹೋಗಲೆಬೇಕಾಗುತ್ತದೆ ಆದರೆ ಇಲ್ಲಿ ಅಧಿಕಾರಿಗಳೆ ಇಲ್ಲದಿದ್ದರೆ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರೂ?
ದಿನವಿಡೀ ಕಾದು ಕುಳಿತರು ಸಹ ಪಿಡಿಒ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ.
ಪಿಡಿಒ ಮಾಲಾಶ್ರೀ ಹಾಗೂ ಕಾರ್ಯದರ್ಶಿ ಹಣಮಂತ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ತಮ್ಮ ಮನಸ್ಸಿಗೆ ಬಂದಾಗ ಬರುತ್ತಾರೆ ಸಾಕಾದರೆ ಹೋಗುತ್ತಾರೆ. ಇವರು ಇಬ್ಬರೂ ಮಧ್ಯಾಹ್ನ ಗಂಟೆ 12 ಆದರೂ ಕಛೇರಿಗೆ ಬರುವುದೇ ಇಲ್ಲವೆಂದು ತಿಳಿಸಿದರು.
ಪ್ರತಿನಿತ್ಯವೂ ಇದೆ ಗೋಳು ಅನುಭವಿಸಿ ಸ್ಥಳೀಯ ಯುವಕರೊಬ್ಬರು ಕಾರ್ಯದರ್ಶಿ ಹಣಮಂತನಿಗೆ ಕರೆ ಮಾಡಿ “ಸರ್ ನೀವು ಪಂಚಾಯತಿಗೆ ಎಷ್ಟು ಗಂಟೆಗೆ ಬರುತ್ತಿರಿ” ಎಂದು ಕೇಳಿದಾಗ ಆ ಯುವಕನಿಗೆ ಅದನ್ನು ಕೇಳೋಕೆ “ನೀ ಯಾರು ಲೇ” ಎಂಬ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಒಬ್ಬ ಪ್ರಜೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದರೆ ಈ ಕಾರ್ಯದರ್ಶಿಗೆ ಎಷ್ಟು ಸೊಕ್ಕಿರಬೇಡ? ನೀವೇ ಯೋಚಿಸಿ.
ಈ ವಿಚಾರವಾಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರದಿಯನ್ನು ಗಮನಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ವರದಿ: ವಿಶ್ವನಾಥ ಭಜಂತ್ರಿ
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…