ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಕೋಲೂರ ಗ್ರಾಮ ಪಂಚಾಯತಿ ಪಿಡಿಒ ಮಾಲಾಶ್ರೀ ಬಿ ಕೆಂಚನಗೌಡರ ಮತ್ತು ಕಾರ್ಯದರ್ಶಿ ಹಣಮಂತ ಎಸ್ ಗಾಣಿಗೇರ ಇವರು ಇಬ್ಬರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಕಛೇರಿಗೆ ಬರುತ್ತಿಲ್ಲವೆಂದು ಇಲ್ಲಿಯ ಸ್ಥಳೀಯ ಯುವಕರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ.
ದಿನನಿತ್ಯವೂ ಗ್ರಾಮದ ಜನರು ಒಂದಲ್ಲ ಒಂದು ಕೆಲಸಕ್ಕೆ ಪಂಚಾಯತಿಗೆ ಹೋಗಲೆಬೇಕಾಗುತ್ತದೆ ಆದರೆ ಇಲ್ಲಿ ಅಧಿಕಾರಿಗಳೆ ಇಲ್ಲದಿದ್ದರೆ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರೂ?
ದಿನವಿಡೀ ಕಾದು ಕುಳಿತರು ಸಹ ಪಿಡಿಒ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ.
ಪಿಡಿಒ ಮಾಲಾಶ್ರೀ ಹಾಗೂ ಕಾರ್ಯದರ್ಶಿ ಹಣಮಂತ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ತಮ್ಮ ಮನಸ್ಸಿಗೆ ಬಂದಾಗ ಬರುತ್ತಾರೆ ಸಾಕಾದರೆ ಹೋಗುತ್ತಾರೆ. ಇವರು ಇಬ್ಬರೂ ಮಧ್ಯಾಹ್ನ ಗಂಟೆ 12 ಆದರೂ ಕಛೇರಿಗೆ ಬರುವುದೇ ಇಲ್ಲವೆಂದು ತಿಳಿಸಿದರು.
ಪ್ರತಿನಿತ್ಯವೂ ಇದೆ ಗೋಳು ಅನುಭವಿಸಿ ಸ್ಥಳೀಯ ಯುವಕರೊಬ್ಬರು ಕಾರ್ಯದರ್ಶಿ ಹಣಮಂತನಿಗೆ ಕರೆ ಮಾಡಿ “ಸರ್ ನೀವು ಪಂಚಾಯತಿಗೆ ಎಷ್ಟು ಗಂಟೆಗೆ ಬರುತ್ತಿರಿ” ಎಂದು ಕೇಳಿದಾಗ ಆ ಯುವಕನಿಗೆ ಅದನ್ನು ಕೇಳೋಕೆ “ನೀ ಯಾರು ಲೇ” ಎಂಬ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಒಬ್ಬ ಪ್ರಜೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದರೆ ಈ ಕಾರ್ಯದರ್ಶಿಗೆ ಎಷ್ಟು ಸೊಕ್ಕಿರಬೇಡ? ನೀವೇ ಯೋಚಿಸಿ.
ಈ ವಿಚಾರವಾಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರದಿಯನ್ನು ಗಮನಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ವರದಿ: ವಿಶ್ವನಾಥ ಭಜಂತ್ರಿ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…
ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…
ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…
ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…
ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…