ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಕೋಲೂರ ಗ್ರಾಮ ಪಂಚಾಯತಿ ಪಿಡಿಒ ಮಾಲಾಶ್ರೀ ಬಿ ಕೆಂಚನಗೌಡರ ಮತ್ತು ಕಾರ್ಯದರ್ಶಿ ಹಣಮಂತ ಎಸ್ ಗಾಣಿಗೇರ ಇವರು ಇಬ್ಬರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಕಛೇರಿಗೆ ಬರುತ್ತಿಲ್ಲವೆಂದು ಇಲ್ಲಿಯ ಸ್ಥಳೀಯ ಯುವಕರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ.
ದಿನನಿತ್ಯವೂ ಗ್ರಾಮದ ಜನರು ಒಂದಲ್ಲ ಒಂದು ಕೆಲಸಕ್ಕೆ ಪಂಚಾಯತಿಗೆ ಹೋಗಲೆಬೇಕಾಗುತ್ತದೆ ಆದರೆ ಇಲ್ಲಿ ಅಧಿಕಾರಿಗಳೆ ಇಲ್ಲದಿದ್ದರೆ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರೂ?
ದಿನವಿಡೀ ಕಾದು ಕುಳಿತರು ಸಹ ಪಿಡಿಒ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ.
ಪಿಡಿಒ ಮಾಲಾಶ್ರೀ ಹಾಗೂ ಕಾರ್ಯದರ್ಶಿ ಹಣಮಂತ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ತಮ್ಮ ಮನಸ್ಸಿಗೆ ಬಂದಾಗ ಬರುತ್ತಾರೆ ಸಾಕಾದರೆ ಹೋಗುತ್ತಾರೆ. ಇವರು ಇಬ್ಬರೂ ಮಧ್ಯಾಹ್ನ ಗಂಟೆ 12 ಆದರೂ ಕಛೇರಿಗೆ ಬರುವುದೇ ಇಲ್ಲವೆಂದು ತಿಳಿಸಿದರು.
ಪ್ರತಿನಿತ್ಯವೂ ಇದೆ ಗೋಳು ಅನುಭವಿಸಿ ಸ್ಥಳೀಯ ಯುವಕರೊಬ್ಬರು ಕಾರ್ಯದರ್ಶಿ ಹಣಮಂತನಿಗೆ ಕರೆ ಮಾಡಿ “ಸರ್ ನೀವು ಪಂಚಾಯತಿಗೆ ಎಷ್ಟು ಗಂಟೆಗೆ ಬರುತ್ತಿರಿ” ಎಂದು ಕೇಳಿದಾಗ ಆ ಯುವಕನಿಗೆ ಅದನ್ನು ಕೇಳೋಕೆ “ನೀ ಯಾರು ಲೇ” ಎಂಬ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಒಬ್ಬ ಪ್ರಜೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದರೆ ಈ ಕಾರ್ಯದರ್ಶಿಗೆ ಎಷ್ಟು ಸೊಕ್ಕಿರಬೇಡ? ನೀವೇ ಯೋಚಿಸಿ.
ಈ ವಿಚಾರವಾಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರದಿಯನ್ನು ಗಮನಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.
ವರದಿ: ವಿಶ್ವನಾಥ ಭಜಂತ್ರಿ
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಪಟ್ಟಣದಲ್ಲಿ ಭ್ರೂಣಲಿಂಗ ಪತ್ತೆ ಮತ್ತು ಅಕ್ರಮ ಸ್ಕ್ಯಾನಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ವೈದ್ಯರನ್ನು ಬಂಧಿಸಿರುವ ಘಟನೆ…
ಭೂಸ್ವಾಧೀನ ಸಂಬಂಧಿತ ಬಾಕಿ ಕಂದಾಯ ಪ್ರಕರಣವನ್ನು ಪರಿಹರಿಸಲು ಲಂಚ ಪಡೆಯುತ್ತಿದ್ದ ವೇಳೆ ಕೆಎಎಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದ ಘಟನೆ…
ಇತ್ತೀಚಿನ ದಿನಗಳಲ್ಲಿ ದಾಂಪತ್ಯ ಜೀವನ ಸಣ್ಣಪುಟ್ಟ ವಿಚಾರಗಳಿಗೂ ಕುಸಿಯುತ್ತಿರುವ ಘಟನೆಗಳು ಹೆಚ್ಚಾಗುತ್ತಿವೆ. ಹೊಂದಾಣಿಕೆಯ ಕೊರತೆ, ಅಕ್ರಮ ಸಂಬಂಧಗಳು ಸೇರಿದಂತೆ ಹಲವು…
ಮಾಜಿ ಪ್ರಧಾನಿ Rajiv Gandhi ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ಎ.ಜಿ. ಪೆರಾರಿವಾಲನ್ ಇದೀಗ ವಕೀಲರಾಗಿರುವುದು ಗಮನಸೆಳೆಯುವ ಬೆಳವಣಿಗೆಯಾಗಿದೆ. 2022ರಲ್ಲಿ…
ಶಿವಮೊಗ್ಗ ಜಿಲ್ಲೆಯ ಸೊರಬ ಪಟ್ಟಣದ ಕಾನುಕೇರಿ ಬಡಾವಣೆಯಲ್ಲಿ ದುರಂತ ಘಟನೆ ಸಂಭವಿಸಿದೆ. ಪತಿಯ ಅನೈತಿಕ ಸಂಬಂಧ ಹಾಗೂ ನಿರಂತರ ದೈಹಿಕ-ಮಾನಸಿಕ…
ಹೈದರಾಬಾದ್: ಬಣ್ಣದ ಲೋಕದಲ್ಲಿ ಮತ್ತೆ ವಂಚನೆ ಆರೋಪ ಕೇಳಿಬಂದಿದ್ದು, ತೆಲುಗು ಬಿಗ್ಬಾಸ್ ಮೂಲಕ ಜನಪ್ರಿಯತೆ ಪಡೆದ ನಟಿ ಆಶು ರೆಡ್ಡಿ…