Latest

ಸರ್ಕಾರಿ ಪಗಾರ ತಿಂದು ಊರು ತಿರುಗುತ್ತಿರುವ ಕೋಲೂರ ಗ್ರಾಮ ಪಂಚಾಯತಿ ಅಧಿಕಾರಿಗಳು.

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಕೋಲೂರ ಗ್ರಾಮ ಪಂಚಾಯತಿ ಪಿಡಿಒ ಮಾಲಾಶ್ರೀ ಬಿ ಕೆಂಚನಗೌಡರ ಮತ್ತು ಕಾರ್ಯದರ್ಶಿ ಹಣಮಂತ ಎಸ್ ಗಾಣಿಗೇರ ಇವರು ಇಬ್ಬರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಕಛೇರಿಗೆ ಬರುತ್ತಿಲ್ಲವೆಂದು ಇಲ್ಲಿಯ ಸ್ಥಳೀಯ ಯುವಕರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ.
ದಿನನಿತ್ಯವೂ ಗ್ರಾಮದ ಜನರು ಒಂದಲ್ಲ ಒಂದು ಕೆಲಸಕ್ಕೆ ಪಂಚಾಯತಿಗೆ ಹೋಗಲೆಬೇಕಾಗುತ್ತದೆ ಆದರೆ ಇಲ್ಲಿ ಅಧಿಕಾರಿಗಳೆ ಇಲ್ಲದಿದ್ದರೆ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರೂ?
ದಿನವಿಡೀ ಕಾದು ಕುಳಿತರು ಸಹ ಪಿಡಿಒ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ.
ಪಿಡಿಒ ಮಾಲಾಶ್ರೀ ಹಾಗೂ ಕಾರ್ಯದರ್ಶಿ ಹಣಮಂತ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ತಮ್ಮ ಮನಸ್ಸಿಗೆ ಬಂದಾಗ ಬರುತ್ತಾರೆ ಸಾಕಾದರೆ ಹೋಗುತ್ತಾರೆ. ಇವರು ಇಬ್ಬರೂ ಮಧ್ಯಾಹ್ನ ಗಂಟೆ 12 ಆದರೂ ಕಛೇರಿಗೆ ಬರುವುದೇ ಇಲ್ಲವೆಂದು ತಿಳಿಸಿದರು.


ಪ್ರತಿನಿತ್ಯವೂ ಇದೆ ಗೋಳು ಅನುಭವಿಸಿ ಸ್ಥಳೀಯ ಯುವಕರೊಬ್ಬರು ಕಾರ್ಯದರ್ಶಿ ಹಣಮಂತನಿಗೆ ಕರೆ ಮಾಡಿ “ಸರ್ ನೀವು ಪಂಚಾಯತಿಗೆ ಎಷ್ಟು ಗಂಟೆಗೆ ಬರುತ್ತಿರಿ” ಎಂದು ಕೇಳಿದಾಗ ಆ ಯುವಕನಿಗೆ ಅದನ್ನು ಕೇಳೋಕೆ “ನೀ ಯಾರು ಲೇ” ಎಂಬ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಒಬ್ಬ ಪ್ರಜೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದರೆ ಈ ಕಾರ್ಯದರ್ಶಿಗೆ ಎಷ್ಟು ಸೊಕ್ಕಿರಬೇಡ? ನೀವೇ ಯೋಚಿಸಿ.
ಈ ವಿಚಾರವಾಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರದಿಯನ್ನು ಗಮನಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ವರದಿ: ವಿಶ್ವನಾಥ ಭಜಂತ್ರಿ

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago