Latest

ಮುಂಡಗೋಡ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ಅಧಿಕೃತ ಹಕ್ಕು ಪತ್ರ ವಿತರಿಸಿದ ಸಚಿವ ಶಿವರಾಮ ಹೆಬ್ಬಾರ್

ಮುಂಡಗೋಡ : ಮಾನ್ಯ ಕಾರ್ಮಿಕ ಖಾತೆ ಸಚಿವರಾದ ಶ್ರೀ ಶಿವರಾಮ ಹೆಬ್ಬಾರ್ ಅವರು ಇಂದು ಪಟ್ಟಣ ಟೌನ್ ಹಾಲ್ ನಲ್ಲಿ ಪಟ್ಟಣದ ಕೊಳಗೇರಿ ನಿವಾಸಿಗಳಿಗೆ ” ಅಧಿಕೃತ ಹಕ್ಕು ಪತ್ರ ವಿತರಣಾ ” ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕವಾಗಿ ಉದ್ಘಾಟಿಸಿದರು.

30 ವರ್ಷಗಳ ನಂತರ ಮೊಟ್ಟಮೊದಲ ಬಾರಿಗೆ ಪಟ್ಟಣದ ಗಾಂಧಿ ನಗರ, ಕಂಬಾರಗಟ್ಟಿ, ಲಮಾಣಿ ತಾಂಡ, ಅಂಬೇಡ್ಕರ್ ಬಡಾವಣೆ 250 ಜನ ಅರ್ಹ ಫಲಾನುಭವಿಗಳಿಗೆ ಸಚಿವರು ಅಧಿಕೃತ ಹಕ್ಕು ಪತ್ರವನ್ನು ವಿತರಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಇನ್ನುಳಿದ ಹಲವಾರು ಜನರಿಗೆ ಎರಡು ತಿಂಗಳಲ್ಲಿ ಹಕ್ಕು ಪತ್ರ ವಿತರಿಸಲಾಗುವುದು ಎಂದು ಹೇಳಿದ ಅವರು ಇಂತಹ ಕೆಲಸ ಮಾಡಲು ಅವಕಾಶ ಸಿಕ್ಕಿರುವುದು ನನ್ನ ಪುಣ್ಯ ಎಂದು ಹೇಳಿದರು.ಇಷ್ಟು ದಿನಗಳ ಕಾಲ ಮನೆಗಳನ್ನು ಮಾತ್ರ ನೀಡುತ್ತಿದ್ದೆವು ಇಂದು ನಿಮಗೆ ಹಕ್ಕು ಪತ್ರಗಳನ್ನು ನೀಡುತ್ತಿದ್ದೇವೆ ಎಂದರು‌.
ಈ ಸಂದರ್ಭದಲ್ಲಿ ಮಂಡಲಾಧ್ಯಕ್ಷರಾದ ನಾಗಭೂಷಣ ಹಾವಣಗಿ, ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರವಿಗೌಡ ಪಾಟೀಲ್, ಎಲ್.ಟಿ.ಪಾಟೀಲ್, ಪ.ಪಂ ಅಧ್ಯಕ್ಷರಾದ ಜಯಸುಧಾ ಬೋವಿ, ಉಪಾಧ್ಯಕ್ಷರಾದ ಶ್ರೀಕಾಂತ ಸಾನು, ಪ್ರಮುಖರಾದ ಉಮೇಶ್ ಬಿಜಾಪುರ, ಗುಡ್ಡಪ್ಪ ಕಾತೂರ ಹಾಗೂ ಪಟ್ಟಣ ಪಂಚಾಯತ ಸದಸ್ಯರು, ಸ್ಥಳೀಯ ಮುಖಂಡರು, ಪಕ್ಷದ ವಿವಿಧಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ: ಮಂಜುನಾಥ ಹರಿಜನ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

1 week ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago