Latest

ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳ ದಬ್ಬಾಳಿಕೆ! ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿದ್ಯಾರ್ಥಿಗಳು!

ಬೆಂಗಳೂರು: ಸುಮ್ಮನಹಳ್ಳಿ ಹತ್ತಿರ ಇರುವಂತಹ ಸಜ್ಜೆಪಾಳ್ಯ, ಅಂಜನಗರ, ದಿನ್ನೂರು, ಹೆಬ್ಬಾಳದ ಬಳಿ ಗುಡ್ಡದಹಳ್ಳಿ ಮತ್ತು ಮಾಳಗಳ. ಸೇರಿದಂತೆ ಬೆಂಗಳೂರು ಉತ್ತರದ ಸುಮಾರು 6 ಬಿ.ಸಿ.ಎಂ ಹಾಸ್ಟೆಲ್ ಗಳನ್ನು ಯಲಹಂಕದ ಬಳಿ ಇರುವ ಮುತ್ತುಗದ ಹಳ್ಳಿ, ಶಿವಕೋಟೆ ಗ್ರಾಮ ಪಂಚಾಯಿತಿ, ಹೆಸರಘಟ್ಟ ಹೋಬಳಿ ಹತ್ತಿರ ವರ್ಗಾವಣೆ ಮಾಡುತ್ತಿದ್ದು ಹೊಸ ಹಾಸ್ಟೆಲ್ ಕಾಲೇಜುಗಳಿಗೆ ತುಂಬಾ ದೂರವಿದ್ದು ಸುಮಾರು 40 ರಿಂದ 50 ಕಿಲೋಮೀಟರ್ ಆಗುತ್ತದೆ. ಪ್ರಯಾಣದ ಸಮಯವೇ ದಿನಕ್ಕೆ ೨ ರಿಂದ 3 ತಾಸು ತೆಗೆದುಕೊಳ್ಳುತ್ತದೆ. ಮತ್ತು ಆ ಸ್ಥಳಕ್ಕೆ ಸರಿಯಾದ ರೀತಿಯ ಬಸ್ ವ್ಯವಸ್ಥೆಯು ಸಹ ಇಲ್ಲ.

ಹೊಸದಾಗಿ ಮಾಡಿರುವ ಹಾಸ್ಟೆಲ್ ನಿಂದ ಬಸ್ ಸ್ಟಾಪ್ ಗೆ ಬರಬೇಕೆಂದರೆ ವಿದ್ಯಾರ್ಥಿಗಳು ಸುಮಾರು ೨ ರಿಂದ 3 ಕಿಲೋಮೀಟರ್ ನಷ್ಟು ನಡೆಯಬೇಕು. ಆ ಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಇನ್ನೂ ಕೆಲ ಮೂಲಭೂತ ಸೌಕರ್ಯಗಳು ಸಹ ಇರುವುದಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಇದನ್ನು ಅಧಿಕಾರಿಗಳಲ್ಲಿ ತಿಳಿಸಿದರೆ ಅವರು ಇದನ್ನು ಲೆಕ್ಕಿಸದೆ ನಾವು ವರ್ಗಾಯಿಸ್ತಿದ್ದೇವೆ ನೀವು ನಿಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿ ವರ್ಗಾಯಿಸಲು ಸಿದ್ಧಗೊಂಡಿದ್ದಾರೆ.

ವಿದ್ಯಾರ್ಥಿಗಳು ಶನಿವಾರದಿಂದ ಯಾವುದೇ ಕಾಲೇಜುಗಳಿಗೆ ಹೋಗದೆ ಹಾಸ್ಟೆಲಲ್ಲೇ ಉಳಿದು ವರ್ಗಾವಣೆ ಬೇಡ ಎಂದು ಅಧಿಕಾರಿಗಳ ಬಳಿ ಅಂಗಲಾಚಿ ಬೇಡಿಕೊಂಡಿದ್ದಾರೆ. ಅಧಿಕಾರಿಗಳು ಯಾವುದಕ್ಕೂ ಬಗ್ಗದ ಕಾರಣ ವಿದ್ಯಾರ್ಥಿಗಳು ಸೋಮವಾರದಂದು ಫ್ರೀಡಂ ಪಾರ್ಕ್ ಹತ್ತಿರ ಪ್ರೊಟೆಸ್ಟ್ ಮಾಡಿದ್ದಾರೆ ಆದರೆ ಅದು ಸಹ ಸಫಲವಾಗಿಲ್ಲ. ಮೊದಲೇ ನೋಟಿಸ್ ಕೊಡದೆ ಈಗ ದಿಢೀರನೆ ಖಾಲಿ ಮಾಡಿಕೊಂಡು ಹೊಸ ಹಾಸ್ಟೆಲ್ ಗೆ ಹೋಗಿ ಎಂದು ಹೇಳಿದರು ಕಷ್ಟವಾಗುತ್ತದೆ ಎಂದು ಹೇಳಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ನಿಮಗೆ ನೋಟಿಸ್ ಕೇಳುವ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ ಹಾಗೂ ಪೊಲೀಸರನ್ನು ಸಹ ಕರೆಸಿ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡಿದ್ದಾರೆ. ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಇಷ್ಟೆಲ್ಲಾ ದೌರ್ಜನ್ಯವೆಸಗುತ್ತಿದ್ದರು ಯಾವೊಬ್ಬ ಜನಪ್ರತಿನಿಧಿಯೂ ಇತ್ತ ಗಮನಹರಿಸಿರುವುದಿಲ್ಲ.

ಅಧಿಕಾರಿಗಳಿಂದ ಬೇಸತ್ತ ವಿದ್ಯಾರ್ಥಿಗಳು ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿರುವ ಸಂದರ್ಭದಲ್ಲಿ ವೀಡಿಯೋವನ್ನು ಚಿತ್ರಿಸಲು ಮುಂದಾಗಿದ್ದಾರೆ ಇದನ್ನು ಗಮನಿಸಿದ ಅಧಿಕಾರಿಗಳು ವೀಡಿಯೋ ಚಿತ್ರಿಸಲು ನಿಮಗೆ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ. ನಂತರ ಚಿತ್ರಿಸಿರುವ ವೀಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ನೆರವಾಗಬೇಕಿದೆ.

ಭ್ರಷ್ಟರ ಬೇಟೆ

Recent Posts

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

19 hours ago

ಮೈಸೂರಿನಲ್ಲಿ ಐಷಾರಾಮಿ ಕಾರುಗಳ ಮೇಲೆ ಆರ್‌ಟಿಒ ದಾಳಿ: ₹3 ಕೋಟಿ ದಂಡ, ₹15 ಕೋಟಿ ಮೌಲ್ಯದ ವಾಹನ ವಶ

ಮೈಸೂರು: ನಕಲಿ ದಾಖಲೆಗಳ ಆಧಾರದಲ್ಲಿ ನೋಂದಣಿ ಮಾಡಿಕೊಂಡು ತೆರಿಗೆ ವಂಚನೆ ಮಾಡುತ್ತಿದ್ದ ದುಬಾರಿ ಕಾರುಗಳ ಮೇಲೆ ಸಾರಿಗೆ ಇಲಾಖೆಯ ಅಧಿಕಾರಿಗಳು…

19 hours ago

ಕೆ.ಆರ್.ಪೇಟೆ: ಜಮೀನಿನಲ್ಲಿ ಗಾಂಜಾ ಬೆಳೆಯುತ್ತಿದ ವ್ಯಕ್ತಿ ಬಂಧನ

ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆ ಹೋಬಳಿಯ ಕಾಶಿ ಮುರುಕನಹಳ್ಳಿಯಲ್ಲಿ ಗಾಂಜಾ ಬೆಳೆದಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಜಮೀನಿನಲ್ಲಿ ಸುಮಾರು 17 ಕಿಲೋಗ್ರಾಂ…

20 hours ago

ರ್‍ಯಾಶ್ ಡ್ರೈವಿಂಗ್ ಪ್ರಶ್ನಿಸಿದ ಮಹಿಳೆಗೆ ರ‍್ಯಾಪಿಡೋ ಬೈಕ್ ಚಾಲಕನಿಂದ ಹಲ್ಲೆ: ಪ್ರಕರಣ ದಾಖಲು

ರಾಜ್ಯ ಸರ್ಕಾರ ಓಲಾ, ಉಬರ್ ಹಾಗೂ ರ‍್ಯಾಪಿಡೋ ಸೇರಿದಂತೆ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನು ಬೆಂಗಳೂರಿನಲ್ಲಿ ರ‍್ಯಾಪಿಡೋ ಚಾಲಕನಿಂದ ಮಹಿಳೆಯ…

22 hours ago

ಪುತ್ತೂರಿನಲ್ಲಿ ಆತ್ಮಹತ್ಯೆ ಆಘಾತ: ಏಳು ತಿಂಗಳ ಗರ್ಭಿಣಿ ನೇಣುಬಿಗಿದುಕೊಂಡು ಜೀವವಿಡುವ ದುರ್ಘಟನೆ

ಪುತ್ತೂರು, ಜೂನ್ 16 – ಪುತ್ತೂರು ಹೊರವಲಯದ ಚಿಕ್ಕಪುತ್ತೂರಿನಲ್ಲಿ ಏಳು ತಿಂಗಳ ಗರ್ಭಿಣಿಯಾಗಿದ್ದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾದ ಘಟನೆ ಬೆಳಕಿಗೆ…

22 hours ago

ಕೋಲಾರ್ ಎಸ್‌ಬಿಐ ಎಟಿಎಂ ದರೋಡೆ: ಕಳ್ಳರು ₹27 ಲಕ್ಷ ನಗದು ದೋಚಿ ಪರಾರಿ.!

ಕೋಲಾರ್ (ಜೂನ್ 16): ನಗರದ ಸಹಕಾರ ನಗರದಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಟಿಎಂ ಕೇಂದ್ರವೊಂದರಲ್ಲಿ ಭಾನುವಾರ ರಾತ್ರಿ ಸಂಭವಿಸಿದ…

1 day ago