Latest

ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳ ದಬ್ಬಾಳಿಕೆ! ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿದ್ಯಾರ್ಥಿಗಳು!

ಬೆಂಗಳೂರು: ಸುಮ್ಮನಹಳ್ಳಿ ಹತ್ತಿರ ಇರುವಂತಹ ಸಜ್ಜೆಪಾಳ್ಯ, ಅಂಜನಗರ, ದಿನ್ನೂರು, ಹೆಬ್ಬಾಳದ ಬಳಿ ಗುಡ್ಡದಹಳ್ಳಿ ಮತ್ತು ಮಾಳಗಳ. ಸೇರಿದಂತೆ ಬೆಂಗಳೂರು ಉತ್ತರದ ಸುಮಾರು 6 ಬಿ.ಸಿ.ಎಂ ಹಾಸ್ಟೆಲ್ ಗಳನ್ನು ಯಲಹಂಕದ ಬಳಿ ಇರುವ ಮುತ್ತುಗದ ಹಳ್ಳಿ, ಶಿವಕೋಟೆ ಗ್ರಾಮ ಪಂಚಾಯಿತಿ, ಹೆಸರಘಟ್ಟ ಹೋಬಳಿ ಹತ್ತಿರ ವರ್ಗಾವಣೆ ಮಾಡುತ್ತಿದ್ದು ಹೊಸ ಹಾಸ್ಟೆಲ್ ಕಾಲೇಜುಗಳಿಗೆ ತುಂಬಾ ದೂರವಿದ್ದು ಸುಮಾರು 40 ರಿಂದ 50 ಕಿಲೋಮೀಟರ್ ಆಗುತ್ತದೆ. ಪ್ರಯಾಣದ ಸಮಯವೇ ದಿನಕ್ಕೆ ೨ ರಿಂದ 3 ತಾಸು ತೆಗೆದುಕೊಳ್ಳುತ್ತದೆ. ಮತ್ತು ಆ ಸ್ಥಳಕ್ಕೆ ಸರಿಯಾದ ರೀತಿಯ ಬಸ್ ವ್ಯವಸ್ಥೆಯು ಸಹ ಇಲ್ಲ.

ಹೊಸದಾಗಿ ಮಾಡಿರುವ ಹಾಸ್ಟೆಲ್ ನಿಂದ ಬಸ್ ಸ್ಟಾಪ್ ಗೆ ಬರಬೇಕೆಂದರೆ ವಿದ್ಯಾರ್ಥಿಗಳು ಸುಮಾರು ೨ ರಿಂದ 3 ಕಿಲೋಮೀಟರ್ ನಷ್ಟು ನಡೆಯಬೇಕು. ಆ ಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಇನ್ನೂ ಕೆಲ ಮೂಲಭೂತ ಸೌಕರ್ಯಗಳು ಸಹ ಇರುವುದಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಇದನ್ನು ಅಧಿಕಾರಿಗಳಲ್ಲಿ ತಿಳಿಸಿದರೆ ಅವರು ಇದನ್ನು ಲೆಕ್ಕಿಸದೆ ನಾವು ವರ್ಗಾಯಿಸ್ತಿದ್ದೇವೆ ನೀವು ನಿಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿ ವರ್ಗಾಯಿಸಲು ಸಿದ್ಧಗೊಂಡಿದ್ದಾರೆ.

ವಿದ್ಯಾರ್ಥಿಗಳು ಶನಿವಾರದಿಂದ ಯಾವುದೇ ಕಾಲೇಜುಗಳಿಗೆ ಹೋಗದೆ ಹಾಸ್ಟೆಲಲ್ಲೇ ಉಳಿದು ವರ್ಗಾವಣೆ ಬೇಡ ಎಂದು ಅಧಿಕಾರಿಗಳ ಬಳಿ ಅಂಗಲಾಚಿ ಬೇಡಿಕೊಂಡಿದ್ದಾರೆ. ಅಧಿಕಾರಿಗಳು ಯಾವುದಕ್ಕೂ ಬಗ್ಗದ ಕಾರಣ ವಿದ್ಯಾರ್ಥಿಗಳು ಸೋಮವಾರದಂದು ಫ್ರೀಡಂ ಪಾರ್ಕ್ ಹತ್ತಿರ ಪ್ರೊಟೆಸ್ಟ್ ಮಾಡಿದ್ದಾರೆ ಆದರೆ ಅದು ಸಹ ಸಫಲವಾಗಿಲ್ಲ. ಮೊದಲೇ ನೋಟಿಸ್ ಕೊಡದೆ ಈಗ ದಿಢೀರನೆ ಖಾಲಿ ಮಾಡಿಕೊಂಡು ಹೊಸ ಹಾಸ್ಟೆಲ್ ಗೆ ಹೋಗಿ ಎಂದು ಹೇಳಿದರು ಕಷ್ಟವಾಗುತ್ತದೆ ಎಂದು ಹೇಳಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ನಿಮಗೆ ನೋಟಿಸ್ ಕೇಳುವ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ ಹಾಗೂ ಪೊಲೀಸರನ್ನು ಸಹ ಕರೆಸಿ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡಿದ್ದಾರೆ. ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಇಷ್ಟೆಲ್ಲಾ ದೌರ್ಜನ್ಯವೆಸಗುತ್ತಿದ್ದರು ಯಾವೊಬ್ಬ ಜನಪ್ರತಿನಿಧಿಯೂ ಇತ್ತ ಗಮನಹರಿಸಿರುವುದಿಲ್ಲ.

ಅಧಿಕಾರಿಗಳಿಂದ ಬೇಸತ್ತ ವಿದ್ಯಾರ್ಥಿಗಳು ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿರುವ ಸಂದರ್ಭದಲ್ಲಿ ವೀಡಿಯೋವನ್ನು ಚಿತ್ರಿಸಲು ಮುಂದಾಗಿದ್ದಾರೆ ಇದನ್ನು ಗಮನಿಸಿದ ಅಧಿಕಾರಿಗಳು ವೀಡಿಯೋ ಚಿತ್ರಿಸಲು ನಿಮಗೆ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ. ನಂತರ ಚಿತ್ರಿಸಿರುವ ವೀಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ನೆರವಾಗಬೇಕಿದೆ.

ಭ್ರಷ್ಟರ ಬೇಟೆ

Recent Posts

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ಕಳ್ಳರ ಕೈಚಳಕ ಕತ್ತಿನಲ್ಲಿದ್ದ 50 ಗ್ರಾಂ ಚಿನ್ನದ ಸರ ಕಸಿದು ಪರಾರಿ

ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…

2 months ago