Latest

ಹಾಸ್ಟೆಲ್ ವಿದ್ಯಾರ್ಥಿಗಳ ಮೇಲೆ ಅಧಿಕಾರಿಗಳ ದಬ್ಬಾಳಿಕೆ! ವಿಡಿಯೋ ಚಿತ್ರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ವಿದ್ಯಾರ್ಥಿಗಳು!

ಬೆಂಗಳೂರು: ಸುಮ್ಮನಹಳ್ಳಿ ಹತ್ತಿರ ಇರುವಂತಹ ಸಜ್ಜೆಪಾಳ್ಯ, ಅಂಜನಗರ, ದಿನ್ನೂರು, ಹೆಬ್ಬಾಳದ ಬಳಿ ಗುಡ್ಡದಹಳ್ಳಿ ಮತ್ತು ಮಾಳಗಳ. ಸೇರಿದಂತೆ ಬೆಂಗಳೂರು ಉತ್ತರದ ಸುಮಾರು 6 ಬಿ.ಸಿ.ಎಂ ಹಾಸ್ಟೆಲ್ ಗಳನ್ನು ಯಲಹಂಕದ ಬಳಿ ಇರುವ ಮುತ್ತುಗದ ಹಳ್ಳಿ, ಶಿವಕೋಟೆ ಗ್ರಾಮ ಪಂಚಾಯಿತಿ, ಹೆಸರಘಟ್ಟ ಹೋಬಳಿ ಹತ್ತಿರ ವರ್ಗಾವಣೆ ಮಾಡುತ್ತಿದ್ದು ಹೊಸ ಹಾಸ್ಟೆಲ್ ಕಾಲೇಜುಗಳಿಗೆ ತುಂಬಾ ದೂರವಿದ್ದು ಸುಮಾರು 40 ರಿಂದ 50 ಕಿಲೋಮೀಟರ್ ಆಗುತ್ತದೆ. ಪ್ರಯಾಣದ ಸಮಯವೇ ದಿನಕ್ಕೆ ೨ ರಿಂದ 3 ತಾಸು ತೆಗೆದುಕೊಳ್ಳುತ್ತದೆ. ಮತ್ತು ಆ ಸ್ಥಳಕ್ಕೆ ಸರಿಯಾದ ರೀತಿಯ ಬಸ್ ವ್ಯವಸ್ಥೆಯು ಸಹ ಇಲ್ಲ.

ಹೊಸದಾಗಿ ಮಾಡಿರುವ ಹಾಸ್ಟೆಲ್ ನಿಂದ ಬಸ್ ಸ್ಟಾಪ್ ಗೆ ಬರಬೇಕೆಂದರೆ ವಿದ್ಯಾರ್ಥಿಗಳು ಸುಮಾರು ೨ ರಿಂದ 3 ಕಿಲೋಮೀಟರ್ ನಷ್ಟು ನಡೆಯಬೇಕು. ಆ ಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಇನ್ನೂ ಕೆಲ ಮೂಲಭೂತ ಸೌಕರ್ಯಗಳು ಸಹ ಇರುವುದಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಇದನ್ನು ಅಧಿಕಾರಿಗಳಲ್ಲಿ ತಿಳಿಸಿದರೆ ಅವರು ಇದನ್ನು ಲೆಕ್ಕಿಸದೆ ನಾವು ವರ್ಗಾಯಿಸ್ತಿದ್ದೇವೆ ನೀವು ನಿಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿ ವರ್ಗಾಯಿಸಲು ಸಿದ್ಧಗೊಂಡಿದ್ದಾರೆ.

ವಿದ್ಯಾರ್ಥಿಗಳು ಶನಿವಾರದಿಂದ ಯಾವುದೇ ಕಾಲೇಜುಗಳಿಗೆ ಹೋಗದೆ ಹಾಸ್ಟೆಲಲ್ಲೇ ಉಳಿದು ವರ್ಗಾವಣೆ ಬೇಡ ಎಂದು ಅಧಿಕಾರಿಗಳ ಬಳಿ ಅಂಗಲಾಚಿ ಬೇಡಿಕೊಂಡಿದ್ದಾರೆ. ಅಧಿಕಾರಿಗಳು ಯಾವುದಕ್ಕೂ ಬಗ್ಗದ ಕಾರಣ ವಿದ್ಯಾರ್ಥಿಗಳು ಸೋಮವಾರದಂದು ಫ್ರೀಡಂ ಪಾರ್ಕ್ ಹತ್ತಿರ ಪ್ರೊಟೆಸ್ಟ್ ಮಾಡಿದ್ದಾರೆ ಆದರೆ ಅದು ಸಹ ಸಫಲವಾಗಿಲ್ಲ. ಮೊದಲೇ ನೋಟಿಸ್ ಕೊಡದೆ ಈಗ ದಿಢೀರನೆ ಖಾಲಿ ಮಾಡಿಕೊಂಡು ಹೊಸ ಹಾಸ್ಟೆಲ್ ಗೆ ಹೋಗಿ ಎಂದು ಹೇಳಿದರು ಕಷ್ಟವಾಗುತ್ತದೆ ಎಂದು ಹೇಳಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ನಿಮಗೆ ನೋಟಿಸ್ ಕೇಳುವ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ ಹಾಗೂ ಪೊಲೀಸರನ್ನು ಸಹ ಕರೆಸಿ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡಿದ್ದಾರೆ. ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಇಷ್ಟೆಲ್ಲಾ ದೌರ್ಜನ್ಯವೆಸಗುತ್ತಿದ್ದರು ಯಾವೊಬ್ಬ ಜನಪ್ರತಿನಿಧಿಯೂ ಇತ್ತ ಗಮನಹರಿಸಿರುವುದಿಲ್ಲ.

ಅಧಿಕಾರಿಗಳಿಂದ ಬೇಸತ್ತ ವಿದ್ಯಾರ್ಥಿಗಳು ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿರುವ ಸಂದರ್ಭದಲ್ಲಿ ವೀಡಿಯೋವನ್ನು ಚಿತ್ರಿಸಲು ಮುಂದಾಗಿದ್ದಾರೆ ಇದನ್ನು ಗಮನಿಸಿದ ಅಧಿಕಾರಿಗಳು ವೀಡಿಯೋ ಚಿತ್ರಿಸಲು ನಿಮಗೆ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ. ನಂತರ ಚಿತ್ರಿಸಿರುವ ವೀಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ನೆರವಾಗಬೇಕಿದೆ.

ಭ್ರಷ್ಟರ ಬೇಟೆ

Recent Posts

ಶಿಕ್ಷಕಿಯ ಪ್ರೀತಿ ನಿರಾಕರಣೆ: ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದಾರುಣ ಘಟನೆ

ಭೋಪಾಲ್ : ಪ್ರೀತಿಯನ್ನು ನಿರಾಕರಿಸಿದ ಶಿಕ್ಷಕಿಯ ಮೇಲೆ ಹದಿಹರೆಯದ ವಿದ್ಯಾರ್ಥಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ನರಸಿಂಹಪುರದಲ್ಲಿ…

6 days ago

ರೈಲಿನ ಶೌಚಾಲಯದಲ್ಲಿ ರೋಮ್ಯಾನ್ಸ್! ಯುವಕ ಯುವತಿಯ ವಿಡಿಯೋ ವೈರಲ್

ರೈಲಿನ ಶೌಚಾಲಯದಲ್ಲಿ ಚಿತ್ರೀಕರಿಸಲ್ಪಟ್ಟಿರುವ ಒಂದು ವಿಡಿಯೊ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ. ವಿಡಿಯೊದಲ್ಲಿ ಮೊದಲು ಮಾಸ್ಕ್ ಧರಿಸಿರುವ ವ್ಯಕ್ತಿಯೊಬ್ಬ ಶೌಚಾಲಯದಿಂದ…

6 days ago

ಚಿತ್ರದಲ್ಲಿ ಡ್ರಗ್ ಪೆಡ್ಲರ್ ಪಾತ್ರ, ವಾಸ್ತವದಲ್ಲೂ ಮಾದಕ ದಂಧೆ – ವಿದೇಶಿ ನಟನ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಮಾದಕ ವಸ್ತು ದಂಧೆಯ ಮೇಲೆ ಪೊಲೀಸರು ಬಿಗಿ ನಿಗಾವಹಿಸುತ್ತಿರುವಾಗ, ಅಚ್ಚರಿಯ ಸಂಗತಿ ಬಹಿರಂಗವಾಗಿದೆ. ಡ್ರಗ್ ಪೆಡ್ಲರ್ ಪಾತ್ರ…

6 days ago

ಅಫ್ಘಾನಿಸ್ತಾನದಲ್ಲಿ ಬಸ್ ಅಪಘಾತ: 71 ಸಾವು, 17 ಮಕ್ಕಳು ಬಲಿಯಾದ ದುರಂತ

ಹೆರಾತ್ (ಅಫ್ಘಾನಿಸ್ತಾನ), ಆಗಸ್ಟ್ 20 – ಅಫ್ಘಾನಿಸ್ತಾನದ ಪಶ್ಚಿಮ ಭಾಗದ ಹೆರಾತ್ ಪ್ರಾಂತ್ಯದಲ್ಲಿ ಮಂಗಳವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…

6 days ago

ಇನ್‌ಸ್ಟಾಗ್ರಾಂ ಪರಿಚಯ ದುರಂತ: ಬಿಜ್ನೋರ್‌ನಲ್ಲಿ ಯುವಕನ ಮೇಲೆ ಹಲ್ಲೆ ನಡೆಸಿದ ಮಹಿಳೆ!

ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಮುಖಕ್ಕೆ ದುಪಟ್ಟಾ ಹೊದ್ದ ಮಹಿಳೆಯೊಬ್ಬಳು ಯುವಕನನ್ನು ಕಾಲಿಟ್ಟು, ಕೋಲಿನಿಂದ ನಿರ್ದಯವಾಗಿ ಹೊಡೆಯುತ್ತಿರುವುದು ದೃಶ್ಯಗೊಂಡಿದೆ.…

6 days ago

“ಸುಪ್ರೀಂ ತೀರ್ಪಿಗೆ ಬೇಸರಗೊಂಡ ಪ್ರಾಣಿ ಪ್ರೇಮಿ, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ದಾಳಿ”

ಬೆಂಗಳೂರು: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಮೇಲೆ ನಡೆದಿದ್ದ ದಾಳಿಯ ಹಿಂದೆ ಗುಜರಾತ್‌ನ ರಾಜ್‌ಕೋಟ್ ಮೂಲದ ರಾಜೇಶ್ ಸಕ್ರಿಯಾ…

6 days ago