ಬೆಂಗಳೂರು: ಸುಮ್ಮನಹಳ್ಳಿ ಹತ್ತಿರ ಇರುವಂತಹ ಸಜ್ಜೆಪಾಳ್ಯ, ಅಂಜನಗರ, ದಿನ್ನೂರು, ಹೆಬ್ಬಾಳದ ಬಳಿ ಗುಡ್ಡದಹಳ್ಳಿ ಮತ್ತು ಮಾಳಗಳ. ಸೇರಿದಂತೆ ಬೆಂಗಳೂರು ಉತ್ತರದ ಸುಮಾರು 6 ಬಿ.ಸಿ.ಎಂ ಹಾಸ್ಟೆಲ್ ಗಳನ್ನು ಯಲಹಂಕದ ಬಳಿ ಇರುವ ಮುತ್ತುಗದ ಹಳ್ಳಿ, ಶಿವಕೋಟೆ ಗ್ರಾಮ ಪಂಚಾಯಿತಿ, ಹೆಸರಘಟ್ಟ ಹೋಬಳಿ ಹತ್ತಿರ ವರ್ಗಾವಣೆ ಮಾಡುತ್ತಿದ್ದು ಹೊಸ ಹಾಸ್ಟೆಲ್ ಕಾಲೇಜುಗಳಿಗೆ ತುಂಬಾ ದೂರವಿದ್ದು ಸುಮಾರು 40 ರಿಂದ 50 ಕಿಲೋಮೀಟರ್ ಆಗುತ್ತದೆ. ಪ್ರಯಾಣದ ಸಮಯವೇ ದಿನಕ್ಕೆ ೨ ರಿಂದ 3 ತಾಸು ತೆಗೆದುಕೊಳ್ಳುತ್ತದೆ. ಮತ್ತು ಆ ಸ್ಥಳಕ್ಕೆ ಸರಿಯಾದ ರೀತಿಯ ಬಸ್ ವ್ಯವಸ್ಥೆಯು ಸಹ ಇಲ್ಲ.
ಹೊಸದಾಗಿ ಮಾಡಿರುವ ಹಾಸ್ಟೆಲ್ ನಿಂದ ಬಸ್ ಸ್ಟಾಪ್ ಗೆ ಬರಬೇಕೆಂದರೆ ವಿದ್ಯಾರ್ಥಿಗಳು ಸುಮಾರು ೨ ರಿಂದ 3 ಕಿಲೋಮೀಟರ್ ನಷ್ಟು ನಡೆಯಬೇಕು. ಆ ಸ್ಥಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವುದರಿಂದ ಇನ್ನೂ ಕೆಲ ಮೂಲಭೂತ ಸೌಕರ್ಯಗಳು ಸಹ ಇರುವುದಿಲ್ಲ. ಅದಕ್ಕಾಗಿ ವಿದ್ಯಾರ್ಥಿಗಳು ಇದನ್ನು ಅಧಿಕಾರಿಗಳಲ್ಲಿ ತಿಳಿಸಿದರೆ ಅವರು ಇದನ್ನು ಲೆಕ್ಕಿಸದೆ ನಾವು ವರ್ಗಾಯಿಸ್ತಿದ್ದೇವೆ ನೀವು ನಿಮ್ಮ ಲಗೇಜ್ ಗಳನ್ನು ತೆಗೆದುಕೊಂಡು ಬನ್ನಿ ಎಂದು ವಿದ್ಯಾರ್ಥಿಗಳ ಮೇಲೆ ದೌರ್ಜನ್ಯ ಮಾಡಿ ವರ್ಗಾಯಿಸಲು ಸಿದ್ಧಗೊಂಡಿದ್ದಾರೆ.
ವಿದ್ಯಾರ್ಥಿಗಳು ಶನಿವಾರದಿಂದ ಯಾವುದೇ ಕಾಲೇಜುಗಳಿಗೆ ಹೋಗದೆ ಹಾಸ್ಟೆಲಲ್ಲೇ ಉಳಿದು ವರ್ಗಾವಣೆ ಬೇಡ ಎಂದು ಅಧಿಕಾರಿಗಳ ಬಳಿ ಅಂಗಲಾಚಿ ಬೇಡಿಕೊಂಡಿದ್ದಾರೆ. ಅಧಿಕಾರಿಗಳು ಯಾವುದಕ್ಕೂ ಬಗ್ಗದ ಕಾರಣ ವಿದ್ಯಾರ್ಥಿಗಳು ಸೋಮವಾರದಂದು ಫ್ರೀಡಂ ಪಾರ್ಕ್ ಹತ್ತಿರ ಪ್ರೊಟೆಸ್ಟ್ ಮಾಡಿದ್ದಾರೆ ಆದರೆ ಅದು ಸಹ ಸಫಲವಾಗಿಲ್ಲ. ಮೊದಲೇ ನೋಟಿಸ್ ಕೊಡದೆ ಈಗ ದಿಢೀರನೆ ಖಾಲಿ ಮಾಡಿಕೊಂಡು ಹೊಸ ಹಾಸ್ಟೆಲ್ ಗೆ ಹೋಗಿ ಎಂದು ಹೇಳಿದರು ಕಷ್ಟವಾಗುತ್ತದೆ ಎಂದು ಹೇಳಿದ ವಿದ್ಯಾರ್ಥಿಗಳಿಗೆ ಅಧಿಕಾರಿಗಳು ನಿಮಗೆ ನೋಟಿಸ್ ಕೇಳುವ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ ಹಾಗೂ ಪೊಲೀಸರನ್ನು ಸಹ ಕರೆಸಿ ವಿದ್ಯಾರ್ಥಿಗಳನ್ನು ಬೆದರಿಸುವ ಕೆಲಸ ಮಾಡಿದ್ದಾರೆ. ಅಧಿಕಾರಿಗಳು ವಿದ್ಯಾರ್ಥಿಗಳ ಮೇಲೆ ಇಷ್ಟೆಲ್ಲಾ ದೌರ್ಜನ್ಯವೆಸಗುತ್ತಿದ್ದರು ಯಾವೊಬ್ಬ ಜನಪ್ರತಿನಿಧಿಯೂ ಇತ್ತ ಗಮನಹರಿಸಿರುವುದಿಲ್ಲ.
ಅಧಿಕಾರಿಗಳಿಂದ ಬೇಸತ್ತ ವಿದ್ಯಾರ್ಥಿಗಳು ಅಧಿಕಾರಿಗಳು ದಬ್ಬಾಳಿಕೆ ಮಾಡುತ್ತಿರುವ ಸಂದರ್ಭದಲ್ಲಿ ವೀಡಿಯೋವನ್ನು ಚಿತ್ರಿಸಲು ಮುಂದಾಗಿದ್ದಾರೆ ಇದನ್ನು ಗಮನಿಸಿದ ಅಧಿಕಾರಿಗಳು ವೀಡಿಯೋ ಚಿತ್ರಿಸಲು ನಿಮಗೆ ಅಧಿಕಾರವಿಲ್ಲ ಎಂದು ದಬಾಯಿಸಿದ್ದಾರೆ. ನಂತರ ಚಿತ್ರಿಸಿರುವ ವೀಡಿಯೋವನ್ನು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು ಸಹಾಯಕ್ಕಾಗಿ ಅಂಗಲಾಚಿದ್ದಾರೆ. ಜನಪ್ರತಿನಿಧಿಗಳು ಈಗಲಾದರೂ ಎಚ್ಚೆತ್ತುಕೊಂಡು ವಿದ್ಯಾರ್ಥಿಗಳಿಗೆ ನೆರವಾಗಬೇಕಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…