ಕಲಬುರಗಿ-ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರಿನ ಅಪರ ನಿರ್ದೇಶಕಿ ಪಿ.ಕೆ.ಸೆಲ್ವಿ ನೇತೃತ್ವದ ಅಧಿಕಾರಿಗಳ ತಂಡವು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿರುವ ರಾಮದೇವ ಟ್ರೇಡರ್ಸ್, ವಿಕಾಸ ಟ್ರೇಡರ್ಸ್ , ಮಹಾದೇವಿ ಟ್ರೇಡರ್ಸ್ ಹಾಗೂ ಬಸ್ ಸ್ಟ್ಯಾಂಡ್ ಹತ್ತಿರದ ಬನಶಂಕರಿ ಟ್ರೇಡರ್ಸ್ ಹಾಗೂ ಸ್ವಾಮಿ ಅಂಗಡಿ ಮೇಲೆ ದಾಳಿ ನಡೆಸಿ ಸುಮಾರು 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿಯೇ ರಸೀದಿ ನೀಡಿ ದಂಡ ಪಡೆದಿದಲ್ಲದೆ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಣೆ, ಮಾರಾಟ, ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಆದಮ್ ಸಾಬ್ ಪಟೇಲ್, ಸುಧಾರಾಣಿ, ಶಾರದಾ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಕೆ. ಎಸ್.ಪಾಟೀಲ್, ಸಿದ್ದಲಿಂಗ, ದೀಪಕ್ ಚೌಹಾಣ್ ಹಾಗೂ ಧನರಾಜ್ ಇದ್ದರು.
ಅಮೃತಸರ: ಉನ್ನತ ಶಿಕ್ಷಣಕ್ಕಾಗಿ ದೂರದ ನಗರಕ್ಕೆ ಮಕ್ಕಳನ್ನು ಕಳುಹಿಸುವ ಪೋಷಕರು ಅವರ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿರುತ್ತಾರೆ. ಆದರೆ ಕೆಲವೊಮ್ಮೆ…
ಹೆತ್ತ ಮಕ್ಕಳ ಸುಖ-ಸಂತೋಷಕ್ಕಾಗಿ ತಮ್ಮ ಇಡೀ ಜೀವನವನ್ನೇ ತ್ಯಾಗ ಮಾಡುವ ತಂದೆ-ತಾಯಿಯರಿಗೆ ವೃದ್ಧಾಪ್ಯದಲ್ಲಿ ಸಿಗುವ ಪ್ರತಿಫಲ ಕೆಲವೊಮ್ಮೆ ಎಷ್ಟು ನೋವಿನದ್ದಾಗಿರುತ್ತದೆ…
ಮಂಡ್ಯದಲ್ಲಿ ರಸ್ತೆ ಅಪಘಾತವೆಂದು ಆರಂಭದಲ್ಲಿ ದಾಖಲಾಗಿದ್ದ ಯುವತಿಯ ಸಾವಿನ ಪ್ರಕರಣ ಇದೀಗ ಮಹತ್ವದ ತಿರುವು ಪಡೆದುಕೊಂಡಿದೆ. ಆರಂಭದಲ್ಲಿ ಸಾಮಾನ್ಯ ಅಪಘಾತ…
ಕನ್ನೌಜ್ (ಉತ್ತರ ಪ್ರದೇಶ): ಶಿಕ್ಷಣ ಕ್ಷೇತ್ರದ ಗೌರವಕ್ಕೆ ಧಕ್ಕೆ ತರುವಂತಹ ಘಟನೆಯೊಂದು ಉತ್ತರ ಪ್ರದೇಶದ ಕನ್ನೌಜ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.…
ಬೆಂಗಳೂರು: ನಗರದ ಅಪಾರ್ಟ್ಮೆಂಟ್ನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಯುವತಿಗೆ ಪಾರ್ಸಲ್ ಡೆಲಿವರಿ ವೇಳೆ ಆತಂಕಕಾರಿ ಅನುಭವ ಎದುರಾಗಿರುವ ಘಟನೆ ಬೆಳಕಿಗೆ ಬಂದಿದೆ.…
ಬೆಂಗಳೂರು: ಮನೆದಲ್ಲೇ ಕುಳಿತು ಬೂದುಬತ್ತಿ, ಮೆಣದಬತ್ತಿ ಹಾಗೂ ಪೇಪರ್ ಪ್ಲೇಟ್ ಪ್ಯಾಕಿಂಗ್ ಕೆಲಸ ನೀಡಿ ಹೆಚ್ಚಿನ ಆದಾಯ ಗಳಿಸಬಹುದು ಎಂದು…