ಕಲಬುರಗಿ-ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಅಧಿಕಾರಿಗಳನ್ನೊಳಗೊಂಡ ತಂಡ ಗುರುವಾರ ಮತ್ತು ಶುಕ್ರವಾರ ಕಲಬುರಗಿ ನಗರದ ವಿವಿಧ ಪ್ಲಾಸ್ಟಿಕ್ ಅಂಗಡಿಗಳ ಮೇಲೆ ದಾಳಿ ಮಾಡಿ 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದಲ್ಲದೆ ಅಂಗಡಿ ಮಾಲೀಕರಿಗೆ 27 ಸಾವಿರ ರೂ. ದಂಡ ಸಹ ವಿಧಿಸಿದ್ದಾರೆ.
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಂಗಳೂರಿನ ಅಪರ ನಿರ್ದೇಶಕಿ ಪಿ.ಕೆ.ಸೆಲ್ವಿ ನೇತೃತ್ವದ ಅಧಿಕಾರಿಗಳ ತಂಡವು ಕಲಬುರಗಿ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿರುವ ರಾಮದೇವ ಟ್ರೇಡರ್ಸ್, ವಿಕಾಸ ಟ್ರೇಡರ್ಸ್ , ಮಹಾದೇವಿ ಟ್ರೇಡರ್ಸ್ ಹಾಗೂ ಬಸ್ ಸ್ಟ್ಯಾಂಡ್ ಹತ್ತಿರದ ಬನಶಂಕರಿ ಟ್ರೇಡರ್ಸ್ ಹಾಗೂ ಸ್ವಾಮಿ ಅಂಗಡಿ ಮೇಲೆ ದಾಳಿ ನಡೆಸಿ ಸುಮಾರು 1.6 ಟನ್ ನಿಷೇಧಿತ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಸ್ಥಳದಲ್ಲಿಯೇ ರಸೀದಿ ನೀಡಿ ದಂಡ ಪಡೆದಿದಲ್ಲದೆ ನಿಷೇಧಿತ ಪ್ಲಾಸ್ಟಿಕ್ ಸಂಗ್ರಹಣೆ, ಮಾರಾಟ, ಬಳಕೆ ಮಾಡದಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಉಪ ಪರಿಸರ ಅಧಿಕಾರಿ ಆದಮ್ ಸಾಬ್ ಪಟೇಲ್, ಸುಧಾರಾಣಿ, ಶಾರದಾ ಹಾಗೂ ಕಲಬುರಗಿ ಮಹಾನಗರ ಪಾಲಿಕೆಯ ಕೆ. ಎಸ್.ಪಾಟೀಲ್, ಸಿದ್ದಲಿಂಗ, ದೀಪಕ್ ಚೌಹಾಣ್ ಹಾಗೂ ಧನರಾಜ್ ಇದ್ದರು.
ಬೆಂಗಳೂರು ನಗರದಲ್ಲಿ ಕೆಲಸದ ಒತ್ತಡದಿಂದ ಬೇಸತ್ತ ಅನೇಕರು ಉದ್ಯೋಗ ತೊರೆದು ಸ್ವಂತ ಊರಿಗೆ ಮರಳುವ ಅಥವಾ ಹೊಸ ಜೀವನವನ್ನು ಆರಿಸುವ…
ಇಂದಿನ ತಂತ್ರಜ್ಞಾನ ಯುಗದಲ್ಲಿ ಸಂಬಂಧಗಳಲ್ಲಿನ ನಂಬಿಕೆ ಕುಸಿತದ ಘಟನೆಗಳು ಹೆಚ್ಚುತ್ತಿವೆ. ದಾಂಪತ್ಯ ಜೀವನದಲ್ಲೇ ಅಲ್ಲ, ಪ್ರೇಮ ಸಂಬಂಧಗಳಲ್ಲಿಯೂ ಮೋಸ, ಅಕ್ರಮ…
ರಾಜ್ಯದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಯುವಕರಿಗೆ ಸುವರ್ಣಾವಕಾಶ ಒದಗಿಬಂದಿದೆ. Karnataka State Fire and Emergency Services (KSFES) ಇಲಾಖೆಯು…
ಮಾಜಿ ಪ್ರಧಾನಿ ಹಾಗೂ ರಾಜ್ಯಸಭಾ ಸದಸ್ಯ H. D. Deve Gowda ಅವರಿಗೆ ರಾಜ್ಯ ಸರ್ಕಾರ ಐಷಾರಾಮಿ ಕಾರು ಖರೀದಿಸಲು…
ದಾವಣಗೆರೆ ನಗರದ ದೇವರಾಜ ಅರಸು ಬಡಾವಣೆಯ ರೈಲ್ವೆ ಕ್ವಾರ್ಟರ್ಸ್ನಲ್ಲಿ ವಿವಾಹಿತೆಯೊಬ್ಬರ ನಿಗೂಢ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮೃತರನ್ನು 26…
ಶಿರಸಿ: ನಗರದ ಕೆಎಚ್ಬಿ ಕಾಲೋನಿ ಪ್ರದೇಶದಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಖ್ಯಾತ ಆಯುರ್ವೇದ ವೈದ್ಯರಾದ ಡಾ. ರಮೇಶ್…