Categories: Latest

ಕಾಂಕ್ರೀಟ್ ರಸ್ತೆ ಯಾವಾಗ ಮಾಡ್ತೀರಿ ಅಧಿಕಾರಿಗಳೇ..?

ಕುಂದಗೋಳ; ತಾಲೂಕಿನ ಗುರುವಿನ ಹಳ್ಳಿ ಗ್ರಾಮದ ಶಿವಳ್ಳಿ ನಗರ ಓಣಿಯ ಸಾರ್ವಜನಿಕರು ಕಾಂಕ್ರೀಟ್ ರಸ್ತೆ ಇಲ್ಲದೇ ಕಷ್ಟ ಅನುಭವಿಸುತ್ತಿದ್ದು, ಮಳೆಗಾಲದ ಸಂದರ್ಭದಲ್ಲಿ ಕೆಸರಲ್ಲಿ ಓಡಾಡಬೇಕಾದ ಪರಿಸ್ಥಿತಿ ಎದುರಿಸಬೇಕಾಗುತ್ತದೆ.

ಕಳೆದ ಹಲವಾರು ವರ್ಷಗಳಿಂದ ಸಿಸಿ ರಸ್ತೆ ಇಲ್ಲದೆ ಪರದಾಟ ಮಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆಗಾಲದಲ್ಲಿ ಕೆಲಸ ಕಾರ್ಯಗಳಿಗೆ ಹೊರಡಬೇಕಾದ ಅನಿವಾರ್ಯತೆಯಲ್ಲಿ, ಕೆಸರಲ್ಲಿ ನಡೆದುಕೊಂಡು ಹೋಗಬೇಕಾದ ಸ್ಥಿತಿ ಬಂದೊದಗಿದೆ, ಈ ಕುರಿತು ಇಲ್ಲಿನ ನಿವಾಸಿಗಳು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಎಷ್ಟೋ ಬಾರಿ ಮೌಖಿಕವಾಗಿ ಮನವಿ ಸಲ್ಲಿಸಿದರು ಇಲ್ಲಿನ ಅಧಿಕಾರಿಗಳು ನಮಗೂ ಇದಕ್ಕೂ ಏನು ಸಂಬಂಧವೆ ಇಲ್ಲ ಎನ್ನುವ ಹಾಗೆ ವರ್ತಿಸುವುದು ಎಷ್ಟರಮಟ್ಟಿಗೆ ಸರಿ ಹೇಳಿ?

ಇನ್ನೂ ರಸ್ತೆ ಪಕ್ಕ ಚರಂಡಿ ಕೂಡ ನಿರ್ಮಾಣವಾಗಿಲ್ಲ ಮಳೆಗಾಲದಲ್ಲಿ ನೀರು ಮನೆಗಳಿಗೆ ನುಗ್ಗಿ ಇಲ್ಲಿನ ನಿವಾಸಗಳು ತ್ರೀವ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದರು. ಇದ್ಯಾವುದೂ ಅಧಿಕಾರಿಗಳ ಗಮನಕ್ಕೆ ಬಂದಿಲವ್ವಾ? ವಿಠಲಾಪೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೊರವಲಯದಲ್ಲಿ ಇರುವುದರಿಂದ ಇಲ್ಲಿ ಯಾವುದೇ ಸಮಸ್ಯೆ ಇಲ್ಲ ಅಂತ ಸುಮ್ಮನೆ ಕೊತ ಬಿಟ್ಟಾರಾ?

ಕೂಡಲೇ ಗ್ರಾಮ ಪಂಚಾಯಿತಿ ಅಧಿಕಾರಿಗಳು ಎಚ್ಚರಗೊಂಡು ಇಲ್ಲಿನ ನಿವಾಸಿಗಳ ಕಷ್ಟ ಅರಿತು ಸಮರ್ಪಕ ರಸ್ತೆ ಕಲ್ಪಿಸಬೇಕೆಂದು ಇಲ್ಲಿನ ನಿವಾಸಿಗಳ ಅಗ್ರಹವಾಗಿದೆ.

 

ಈ ವರ್ಷದ ಕ್ರಿಯಾ ಯೋಜನೆಯಲ್ಲಿ ಶಿವಳ್ಳಿ ನಗರ ಇಲ್ಲ. ಆದ್ಯತೆ ಇರುವುದನ್ನು ಮಾತ್ರ ಆಯ್ಕೆ ಮಾಡಿಕೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಅಧ್ಯಕ್ಷರು ಸರ್ವಸದಸ್ಯರು ಗಮನಕ್ಕೆ ತೆಗೆದುಕೊಂಡು. ಕಾಂಕ್ರೀಟ್ ರಸ್ತೆ ಕಲ್ಪಸುತ್ತೇವೆ. – ಕವಿತಾ ಕೂಡ್ಲಿವಾಡ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ

ವರದಿ;ಶಾನು ಯಲಿಗಾರ

ಭ್ರಷ್ಟರ ಬೇಟೆ

Recent Posts

ಸಚಿವ ಡಿ. ಸುಧಾಕರ್ ಆರೋಗ್ಯ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ.!

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ…

2 hours ago

ನಿಶ್ಚಿತಾರ್ಥದ ಬಳಿಕ ನಿಜ ಮುಖ ಬಯಲು: ಭಾವಿ ಪತಿಯ ಅವಮಾನಕ್ಕೆ ಮನನೊಂದು ಎಂ.ಎಸ್ಸಿ ಪದವೀಧರೆ ಆತ್ಮಹತ್ಯೆ

ಆಂಧ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಮದುವೆಯ ಕನಸು ಕಂಡಿದ್ದ ಯುವತಿಯೊಬ್ಬಳು, ಭಾವಿ ಪತಿಯ ವರ್ತನೆಯಿಂದ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ…

2 hours ago

ಲೆನ್ಸ್ಕಾರ್ಟ್ ಡ್ರೆಸ್ ಕೋಡ್ ವಿವಾದ: ತಿಲಕ-ಕುಂಕುಮ ನಿಷೇಧ ಆರೋಪ, ನಾಯಕಿ ನಾಜಿಯಾ ಖಾನ್ ಪ್ರತಿಭಟನೆ

ನಾಸಿಕ್‌ನ Tata Consultancy Services ನಲ್ಲಿ ಬಲವಂತದ ಮತಾಂತರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ಚರ್ಚೆಗೆ ಗ್ರಾಸವಾಗಿರುವ ನಡುವೆಯೇ, Lenskart…

20 hours ago

ರೌಡಿಶೀಟರ್ ಸೈಲೆಂಟ್ ಸುನಿಲ್‌ಗೆ ಭರ್ಜರಿ ಸ್ವಾಗತ: ಹಾಸನದಲ್ಲಿ ವಿಡಿಯೋ ವೈರಲ್

ಹಾಸನ ತಾಲೂಕಿನ ಶಾಂತಿಗ್ರಾಮ ಟೋಲ್ ಬಳಿಯಲ್ಲಿ ನಟೋರಿಯಸ್ ರೌಡಿಶೀಟರ್ ಸೈಲೆಂಟ್ ಸುನಿಲ್ ಆಗಮಿಸುತ್ತಿದ್ದಂತೆಯೇ ಯುವಕರ ಗುಂಪೊಂದು ಅದ್ದೂರಿ ಸ್ವಾಗತ ಕೋರಿರುವ…

20 hours ago

ಲಂಚ ಸ್ವೀಕರಿಸುತ್ತಿದ್ದ ಪಿಎಸ್ಐ ಲೋಕಾಯುಕ್ತ ಬಲೆಗೆ: ಠಾಣೆ ಮುಂದೆ ಪಟಾಕಿ ಸಿಡಿಸಿ ಜನರ ಸಂಭ್ರಮ

ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೀಮಪ್ಪ ರಬಕವಿ ಹಾಗೂ ಕಾನ್ಸ್ಟೇಬಲ್ ಸಂತೋಷ್…

20 hours ago

ಡಿಎನ್‌ಎ ಸತ್ಯ ಹೇಳಿತು: ಬಿಜೆಪಿ ಮುಖಂಡನ ಪುತ್ರನೇ ಮಗುವಿನ ತಂದೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸಂಚಲನ ಸೃಷ್ಟಿಸಿದ್ದ ಅತ್ಯಾಚಾರ ಮತ್ತು ವಂಚನೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಪುತ್ತೂರು…

1 day ago