ಕುಂದಗೋಳ: ತಾಲೂಕಿನ ಯರಗುಪ್ಪಿ ಮಾರ್ಗವಾಗಿ ಮುಳಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಟಾಚಾರಕ್ಕೆ ಮಣ್ಣು ಹಾಕಿ ರಸ್ತೆ ದುರಸ್ತಿ ಪಡಿಸಿದ್ದಾರೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.
ಅಕ್ಟೋಬರ್ 5 ರಂದು ರಸ್ತೆ ದುರಸ್ತಿ ಯಾವಾಗ? ಎಂಬ ಶೀರ್ಷಿಕೆ ಸುದ್ದಿ ಬಿತ್ತಿರಸಿದ ಹಿನ್ನೆಲೆ ಎಚ್ಚತ್ತು ಅಧಿಕಾರಿಗಳು ಕಲ್ಲಿನ ಗೊರಸು ಹಾಕಿ ರಸ್ತೆ ದುರಸ್ತಿ ಭಾಗ್ಯ ಒದಗಿಸಿದರೂ ಅದು ಪೂರ್ಣವಾಗಿ ಸುರಕ್ಷಿತ ರಸ್ತೆ ಮಟ್ಟ ತಲುಪಿಲ್ಲ.
ಹೇಳಿಕೊಳ್ಳುವಂತ ಕೆಲಸ ಕಾರ್ಯ ಆಗದೇ ಇರುವುದು ಸಾರ್ವಜನಿಕರಿಗೆ ಮತ್ತೆ ನಿರಾಸೆ ಉಂಟು ಮಾಡಿದೆ.
ಪ್ರವಾಹದಿಂದ ಹಾಳಾದ ರಸ್ತೆಗಳು ದುರಸ್ತಿ ಭಾಗ್ಯ ಕಂಡುಕೊಳ್ಳಲು ಸಫಲತೆ ಕಾಣ್ತಾ ಇದ್ದವೆ. ದೊಡ್ಡ ದೊಡ್ಡ ಗುಂಡಿಗಳು ಬಿದ್ದರು ಸಹ ಎರಡು ಲೋಡ್ ಗೊರಸು ಮಣ್ಣು ಹಾಕಿ ಕಾಮಗಾರಿ ಮಾಡಿದ್ದಾರೆ. ಒಟ್ಟಿನಲ್ಲಿ ಅಧಿಕಾರಿಗಳು ವರದಿಗೆ ಎಚ್ಚೆತ್ತು ದುರಸ್ತಿ ಭಾಗ್ಯ ಒದಗಿಸಿದ್ದಾರೆ. ಇದು ಸಂಪೂರ್ಣವಾಗುವ ವಿಶ್ವಾಸ ಜನರಲ್ಲಿ ಮೂಡುವ ತರ ಕೆಲಸ ಸಾಗಲಿ ಎನ್ನುವುದು ಸಾರ್ವಜನಿಕರ ಬಯಕೆಯಾಗಿದೆ.
ವರದಿ: ಶಾನು ಯಲಿಗಾರ
ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದ…
ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…
ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…