Latest

ವರದಿಗೆ ಎಚ್ಚೆತ್ತು ಗುಂಡಿ ಮುಚ್ಚಿದ ಅಧಿಕಾರಿಗಳು.

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೋಕು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ನಮ್ಮ ಪತ್ರಿಕಾ ವರದಿಗೆ ಎಚ್ಚೆತ್ತು ಬೂಕನಕೆರೆ ಹೋಬಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ಗುಂಡಿಗಳನ್ನು ಮುಚ್ಚಿದ್ದಾರೆ.
ಬೂಕನಕೆರೆ ಗ್ರಾಮವೂ ಹೋಬಳಿಯ ಕೇಂದ್ರ ವಾಗಿರುವುದರಿಂದ ಇಲ್ಲಿನ ಸ್ಥಳೀಯ ವಾಗಿ ಸಂಪರ್ಕ ಕಲ್ಪಿಸುವ ಕೃಷ್ಣರಾಜಪೇಟೆ ಇಂದ ಮೊದೂರು ಮಾರ್ಗವಾಗಿ ಬೂಕನಕೆರೆಯಿಂದ ಕೆ ಆರ್ ಎಸ್ ಹಾಗು ಮೈಸೂರಿಗೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿ ನೂರಾರು ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸುವ ಕಾರ್ಯವನ್ನು ತಾಲೂಕಿನ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮಾಡಿರುವುದರಿಂದ ಸಾರ್ವಜನಿಕರಿಗೆ ಹಾಗು ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲ ವಾಹನ ಸವಾರರಿಗೆ ಸಂತೋಷ ವಾಗಿರುತ್ತದೆ. ಈ ರಸ್ತೆಯಲ್ಲಿ ನೋರ್ರಾರು ಗುಂಡಿಗಳಿದ್ದರು ಇಲ್ಲಿವರೆಗೆ ಯಾವ ಅಧಿಕಾರಿಗಳು ಗಮನ ಹರಿಸದೆ ಕಾಲ ಹರಣ ಮಾಡುತ್ತಿದ್ದರು ಇದರಿಂದ ಈ ಮಾರ್ಗದಲ್ಲಿ ಸಂಚಾರಿಸುವ ಎಲ್ಲರೂ ಅಧಿಕಾರಿಗಳಿಗೆ ಹಾಗು ತಾಲೋಕು ಜನಪ್ರದಿನಿದಿಗಳಿಗೆ ಶಾಪ ಹಾಕುತ್ತ ಕಾಲ ದೂಡುತ್ತಿದ್ದರು. ಬೂಕನಕೆರೆ ಗ್ರಾಮವೂ ಮಾನ್ಯ ಮಾಜಿ ಸಿ ಎಮ್ ಯಡಿಯೂರಪ್ಪ ನವರತವರು ಗ್ರಾಮವಾದರೂ,ಹಾಗು ಇಲ್ಲಿನ ಸುತ್ತ ಮುತ್ತಲಿನ ಸ್ಥಳೀಯ ಗ್ರಾಮದ ಜನರ ಹೋಬಳಿ ಕೇಂದ್ರವಾಗಿದೆ ನಿತ್ಯ ನೂರಾರು ಜನರು ಇಲ್ಲಿ ಓಡಾಡುವುದು ಸಾಮಾನ್ಯವಾಗಿದೆ , ಹಾಗು ಇಲ್ಲಿಗೆ ಸಂಪರ್ಕ ಕಲ್ಪಿಸುವ ಬಹುತೇಕ ರಸ್ತೆಗಳು ಹಾಳಾಗಿರುತ್ತವೆ,ಆದ್ದರಿಂದ ಇದನ್ನು ಗಮನಿಸಿ ವರದಿ ಮಾಡಿದ ಎರಡು ತಿಂಗಳ ನಂತರ ತಾಲೋಕಿನ ಶಾಸಕಾರದ ಮಂಜಣ್ಣ ನವರ ಗಮನಕ್ಕೆ ಬಂದು ಇದರ ಬಗ್ಗೆ ಅಧಿಕಾರಿಗಳಿಗೆ ತಿಳಿಸಿ ರಸ್ತೆ ಗುಂಡಿ ಮುಚ್ಚಲು ಲೋಕೋಪಯೋಗಿ ಅಧಿಕಾರಿಗಳಿಗೆ ತಿಳಿಸಿದ ನಂತರ ಅಧಿಕಾರಿಗಳು ಈ ರಸ್ತೆಯಲ್ಲಿನ ಗುಂಡಿಗಳ್ಳನ್ನು ಮುಚ್ಚಿ ಸರಿಪಡಿಸಿದ್ದಾರೆ.. ನಮ್ಮ ವರದಿಗೆ ಸ್ವಂದಿಸಿದ ಮಾನ್ಯ ಶಾಸಕರು ಹಾಗು ಅಧಿಕಾರಿಗಳ್ಳನ್ನು ಈ ಮಾರ್ಗದಲ್ಲಿ ಸಂಚಾರಿಸುವ ಜನರು ದಿನವು ನೆನೆಯುತ್ತಾರೆ ಹಾಗು ಮುಂದಿನ ದಿನಗಳಲ್ಲಿ ಈ ರಸ್ತೆಯನ್ನು ಸಂಪೂರ್ಣವಾಗಿ ಢಾoಬರಿಕರಣ ಮಾಡುವುದಾಗಿ ಶಾಸಕರಾದ ಮಂಜಣ್ಣ ರವರು ಭರವಸೆ ನೀಡಿರುತ್ತಾರೆ. ಹಾಗು ಬೂಕನಕೆರೆ ಗ್ರಾಮವನ್ನು ಮಾದರಿಯಾಗಿ ಹಂತ ಹಂತವಾಗಿ ಅಭಿರುದ್ದಿ ಗೊಳಿಸಲಾಗುವುದು ಎಂದು ತಿಳಿಸಿರುಸುತ್ತಾರೆ.

ವರದಿ: ಎಲ್.ಎನ್ ಮೂರ್ತಿ

ಭ್ರಷ್ಟರ ಬೇಟೆ

Recent Posts

ಖಾರದ ಪುಡಿ ಎರಚಿ ಒಡವೆ ಕದ್ದಿದ್ದ ಖದೀಮ ಪೊಲೀಸರ ಬಲೆಗೆ..!

ದಿನಾಂಕ 18.10.2025 ರಂದು ಸೌಮ್ಯ ಎಂಬವರು ಮೈಸೂರಿನ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಲಲಿತಾದ್ರಿಪುರದ ಕಡೆಯಿಂದ ಗಿರಿ ದರ್ಶನಿ…

1 month ago

ನಿವೇಶನದ ಅಳತೆ ಸರ್ವೆಯರ್ ಸಹಾಯಕ ಲೋಕಾಯುಕ್ತ ಬಲೆಗೆ; 65 ಸಾವಿರ ಮೌಲ್ಯದ ನಿವೇಶನ ಅಳತೆಗೆ ₹ 23 ಸಾವಿರ ಲಂಚ..!

ಗೌರಿಬಿದನೂರು: ನಿವೇಶನ ಅಳತೆ ಮಾಡಿಕೊಡಲು ₹ 20 ಸಾವಿರ ಲಂಚ ಪಡೆಯುತ್ತಿದ್ದ ಇಲ್ಲಿನ ಭೂಮಾಪನ ಇಲಾಖೆಯ ಸರ್ವೆಯರ್ ಹರೀಶ್ ರೆಡ್ಡಿ ಮತ್ತು ಅವರ…

1 month ago

ಅಲಿಗಢದಲ್ಲಿ ವರದಕ್ಷಿಣೆ ಕಿರುಕುಳ ದುರಂತ: ಅತ್ತೆ-ಮಾವ ಒತ್ತಾಯಕ್ಕೆ ತತ್ತರಿಸಿದ ಸೊಸೆ ಟೆರೇಸ್ ಯಿಂದ ಹಾರಾಟ.!

ಅಲಿಗಢ, ಸೆಪ್ಟೆಂಬರ್ 04: ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯಲ್ಲಿ ವರದಕ್ಷಿಣೆ ಕಿರುಕುಳ ಮತ್ತೊಮ್ಮೆ ದಾರುಣ ಘಟನೆಯಲ್ಲಿ ಅಂತ್ಯಗೊಂಡಿದೆ. ದಮ್ಕೌಲಿ ಗ್ರಾಮದಲ್ಲಿ…

3 months ago

4 ಕೋಟಿ ವರದಕ್ಷಿಣೆಗಾಗಿ ಪತ್ನಿಯ ಖಾಸಗಿ ಫೋಟೋ ವೈರಲ್ ಮಾಡಿದ ಪತಿ!!

ಬೆಂಗಳೂರು: ಪತ್ನಿಗೆ 4 ಕೋಟಿ ವರದಕ್ಷಿಣೆ ಒತ್ತಾಯ – ಕೊಟ್ಟಿಲ್ಲವೆಂದು ಖಾಸಗಿ ಫೋಟೋ ವೈರಲ್ ಮಾಡಿದ ಪತಿ ವಿರುದ್ಧ ಎಫ್‌ಐಆರ್…

3 months ago

ವಿದ್ಯಾರ್ಥಿಗಳಿಂದ ಕಾಲು ಒತ್ತಿಸಿಕೊಂಡ ಮುಖ್ಯೋಪಾಧ್ಯಾಯಿನಿ.!!

ತಮಿಳುನಾಡಿನ ಧರ್ಮಪುರಿ ಜಿಲ್ಲೆ ಮತ್ತೊಮ್ಮೆ ವಿವಾದಕ್ಕೆ ತುತ್ತಾಗಿದೆ. ಹರೂರು ತಾಲೂಕಿನ ಮಾವೇರಿಪಟ್ಟಿ ಪ್ರಾಥಮಿಕ ಶಾಲೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದ ವಿಡಿಯೋ…

3 months ago

ಪ್ರೇಯಸಿ ಫೋನ್‌ ಎತ್ತಿಲ್ಲ: ಕೋಪದಲ್ಲಿ ಯುವಕ ಇಡೀ ಹಳ್ಳಿಯ ಕರೆಂಟ್ ಕಟ್!

ಪ್ರೇಯಸಿ ಫೋನ್‌ ಕರೆ ಸ್ವೀಕರಿಸದೇ, ಆಕೆ ಮೊಬೈಲ್‌ನಲ್ಲಿ ಬ್ಯುಸಿಯಾಗಿದ್ದಾಳೆ ಎಂಬ ಅಸಹನೆಯಿಂದ ಯುವಕನೊಬ್ಬ ಅಚ್ಚರಿಯ ಕೆಲಸ ಮಾಡಿದ ಘಟನೆ ವೈರಲ್…

3 months ago