Latest

ಓಲಾ ಉಬರ್ ಆಟೋಗಳು ಬ್ಯಾನ್

ಓಲಾ ಹಾಗು ಊಬರ್ ಆಟೋಗಳನ್ನು ಸ್ಥಗಿತಗೊಳಿಸಲಾಗಿದ್ದು, ರಸ್ತೆಗಿಳಿಸಿದ್ರೆ 5 ಸಾವಿರ ದಂಡ ಹಾಕೋದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಹಲವು ವರ್ಷಗಳಿಂದ ಅನಧಿಕೃತವಾಗಿ ಸೇವೆ ನೀಡ್ತಿದ್ದ ಓಲಾ ಊಬರ್ ಆಟೋಗಳ ಹಗಲು ದರೋಡೆಗೆ ಪ್ರತಿಯೊಬ್ಬರೂ ಹೈರಾಣಾಗಿದ್ದಾರೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಆಪ್ ಆಧಾರಿತ ಆಟೋಗಳನ್ನು ಬ್ಯಾನ್ ಮಾಡಬೇಕು ಅಂತ ತೀವ್ರ ಪ್ರಮಾಣದ ಹೋರಾಟ‌ ನಡೆದ ಬೆನ್ನಲ್ಲೇ ಓಲಾ ಉಬರ್ ಕಂಪನಿಗಳಿಗೆ ನೊಟೀಸ್ ಕೊಟ್ಟು ಸೂಕ್ತ ಉತ್ತರ ನೀಡುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿತ್ತು. ಐದು ದಿನಗಳ ಬಳಿಕ ಅಗ್ರಿಗೇಟರ್ಸ್ ಕಂಪೆನಿಗಳು ಉತ್ತರ ಕೊಟ್ಟಿದ್ರೂ ಸಾರಿಗೆ ಇಲಾಖೆ ಕೋರ್ಟ್ ಮೊರೆ ಹೋಗಲು ನಿರ್ಧರಿಸಿತ್ತು. ಆದ್ರೆ ಇಂದು ಓಲಾ ಉಬರ್ ಕಂಪೆನಿಗಳ ಜೊತೆ ಸಾರಿಗೆ ಇಲಾಖೆ ಸಭೆ ನಡೆಸಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಸಭೆಯಲ್ಲಿ ಓಲಾ ಉಬರ್ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಯ್ತು. ಸುಮಾರು ಒಂದು ಗಂಟೆಗಳ ಕಾಲ ನಡೆದ ಸಭೆ ಬಳಿಕ ನಾಳೆಯಿಂದ ಆಯಪ್ ಆಧಾರಿತ ಆಟೋಗಳು ರಸ್ತೆಗಿಳಿಯದಂತೆ ಎರಡು ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ರಸ್ತೆಗಿಳಿದ್ರೆ, ಕಂಪನಿಗೆ ದಂಡ ವಿಧಿಸಲಾಗುತ್ತೆ. ಪದೇ ಪದೇ ಉಲ್ಲಂಘನೆ ಮಾಡಿದ್ರೆ, ಆಯಪ್ ಬ್ಯಾನ್ ಮಾಡಲು ಕೂಡ ಸೈಬರ್ ವಿಭಾಗಕ್ಕೆ ದೂರು ನೀಡಲು ನಿರ್ಧಾರ ಮಾಡಲಾಗಿದೆ.
ಇನ್ನು ಸಾರ್ವಜನಿಕರಿಗೂ ನಾಳೆಯಿಂದ ಓಲಾ, ಉಬರ್ ಆಯಪ್ ನಲ್ಲಿ ಬುಕ್ ಮಾಡಬೇಡಿ ಎಂದು ಸಾರಿಗೆ ಆಯುಕ್ತರು ಮನವಿ ಮಾಡಿದ್ದಾರೆ. ಸಾರ್ವಜನಿಕರು ತಾವೇ ಸ್ವತಃ ನಿರ್ಧಾರಕ್ಕೆ ಬಂದು ಆಪ್ ಬಳಕೆ ಮಾಡ್ಬೇಡಿ. ಒಂದುವೇಳೆ ಓಲಾ ಆಟೋ ಸೇವೆ ಬಗ್ಗೆ ಗೊತ್ತಾದ್ರೆ ಸಾರಿಗೆ ಇಲಾಖೆ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಸಹಾಯವಾಣಿ 9449863426, 9449863429 ನಂಬರ್ಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಭ್ರಷ್ಟರ ಬೇಟೆ

Recent Posts

ವಿವಾಹ ಭರವಸೆ ನೀಡಿ ಖಾಸಗಿ ವಿಡಿಯೋದಿಂದ ಬ್ಲ್ಯಾಕ್‌ಮೇಲ್‌: ಯುವಕನ ಬಂಧನ

ಬೆಂಗಳೂರು: ವಿವಾಹವಾಗುವ ಭರವಸೆ ನೀಡಿ ಖಾಸಗಿ ಸಂಬಂಧ ಬೆಳೆಸಿದ ಬಳಿಕ, ಆ ಸಂಬಂಧದ ವಿಡಿಯೋ ಬಳಸಿ ಹಣಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ…

4 hours ago

10 ಲಕ್ಷ ಲಂಚದ ಹಣದೊಂದಿಗೆ ಬಿಬಿಎಂಪಿ ಇಂಜಿನಿಯರ್ ಲೋಕಾಯುಕ್ತ ಬಲೆಗೆ”

ಬೆಂಗಳೂರು: ನಗರದಲ್ಲಿ ಮತ್ತೊಂದು ಲಂಚದ ಬಿರುಕು ಬಿಟ್ಟಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಕಾರ್ಯಪಾಲಕ ಅಭಿಯಂತರನು 10 ಲಕ್ಷ…

4 hours ago

ಗೋವಾ ಪ್ರವಾಸ ದುರಂತ: ಮದುವೆ ಗೊಂದಲದಿಂದ ಪ್ರೇಮಿಯ ಕೈಯಲ್ಲಿ ಪ್ರೇಯಸಿ ಹತ್ಯೆ

ಗೋವಾ: ಮದುವೆಯಾಗುವ ಉದ್ದೇಶದಿಂದ ಬೆಂಗಳೂರಿನಿಂದ ಗೋವಾಕ್ಕೆ ಪ್ರಯಾಣಿಸಿದ್ದ ಜೋಡಿಯ ಕನಸು ಕೊಲೆಯ ಹಿನ್ನಲೆಯಲ್ಲಿ ದುರಂತವಾಗಿ ಕೊನೆಗೊಂಡ ಘಟನೆ ದಕ್ಷಿಣ ಗೋವಾದ…

4 hours ago

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

1 day ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

1 day ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

1 day ago