Latest

ಓಲಾ ಉಬರ್ ಆಟೋಗಳು ಬ್ಯಾನ್

ಓಲಾ ಹಾಗು ಊಬರ್ ಆಟೋಗಳನ್ನು ಸ್ಥಗಿತಗೊಳಿಸಲಾಗಿದ್ದು, ರಸ್ತೆಗಿಳಿಸಿದ್ರೆ 5 ಸಾವಿರ ದಂಡ ಹಾಕೋದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಹಲವು ವರ್ಷಗಳಿಂದ ಅನಧಿಕೃತವಾಗಿ ಸೇವೆ ನೀಡ್ತಿದ್ದ ಓಲಾ ಊಬರ್ ಆಟೋಗಳ ಹಗಲು ದರೋಡೆಗೆ ಪ್ರತಿಯೊಬ್ಬರೂ ಹೈರಾಣಾಗಿದ್ದಾರೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಆಪ್ ಆಧಾರಿತ ಆಟೋಗಳನ್ನು ಬ್ಯಾನ್ ಮಾಡಬೇಕು ಅಂತ ತೀವ್ರ ಪ್ರಮಾಣದ ಹೋರಾಟ‌ ನಡೆದ ಬೆನ್ನಲ್ಲೇ ಓಲಾ ಉಬರ್ ಕಂಪನಿಗಳಿಗೆ ನೊಟೀಸ್ ಕೊಟ್ಟು ಸೂಕ್ತ ಉತ್ತರ ನೀಡುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿತ್ತು. ಐದು ದಿನಗಳ ಬಳಿಕ ಅಗ್ರಿಗೇಟರ್ಸ್ ಕಂಪೆನಿಗಳು ಉತ್ತರ ಕೊಟ್ಟಿದ್ರೂ ಸಾರಿಗೆ ಇಲಾಖೆ ಕೋರ್ಟ್ ಮೊರೆ ಹೋಗಲು ನಿರ್ಧರಿಸಿತ್ತು. ಆದ್ರೆ ಇಂದು ಓಲಾ ಉಬರ್ ಕಂಪೆನಿಗಳ ಜೊತೆ ಸಾರಿಗೆ ಇಲಾಖೆ ಸಭೆ ನಡೆಸಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಸಭೆಯಲ್ಲಿ ಓಲಾ ಉಬರ್ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಯ್ತು. ಸುಮಾರು ಒಂದು ಗಂಟೆಗಳ ಕಾಲ ನಡೆದ ಸಭೆ ಬಳಿಕ ನಾಳೆಯಿಂದ ಆಯಪ್ ಆಧಾರಿತ ಆಟೋಗಳು ರಸ್ತೆಗಿಳಿಯದಂತೆ ಎರಡು ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ರಸ್ತೆಗಿಳಿದ್ರೆ, ಕಂಪನಿಗೆ ದಂಡ ವಿಧಿಸಲಾಗುತ್ತೆ. ಪದೇ ಪದೇ ಉಲ್ಲಂಘನೆ ಮಾಡಿದ್ರೆ, ಆಯಪ್ ಬ್ಯಾನ್ ಮಾಡಲು ಕೂಡ ಸೈಬರ್ ವಿಭಾಗಕ್ಕೆ ದೂರು ನೀಡಲು ನಿರ್ಧಾರ ಮಾಡಲಾಗಿದೆ.
ಇನ್ನು ಸಾರ್ವಜನಿಕರಿಗೂ ನಾಳೆಯಿಂದ ಓಲಾ, ಉಬರ್ ಆಯಪ್ ನಲ್ಲಿ ಬುಕ್ ಮಾಡಬೇಡಿ ಎಂದು ಸಾರಿಗೆ ಆಯುಕ್ತರು ಮನವಿ ಮಾಡಿದ್ದಾರೆ. ಸಾರ್ವಜನಿಕರು ತಾವೇ ಸ್ವತಃ ನಿರ್ಧಾರಕ್ಕೆ ಬಂದು ಆಪ್ ಬಳಕೆ ಮಾಡ್ಬೇಡಿ. ಒಂದುವೇಳೆ ಓಲಾ ಆಟೋ ಸೇವೆ ಬಗ್ಗೆ ಗೊತ್ತಾದ್ರೆ ಸಾರಿಗೆ ಇಲಾಖೆ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಸಹಾಯವಾಣಿ 9449863426, 9449863429 ನಂಬರ್ಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಭ್ರಷ್ಟರ ಬೇಟೆ

Recent Posts

2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ ಪದಕ ಘೋಷಣೆ: ರಾಜ್ಯದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಗೌರವ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ 200 ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ 2025-26ನೇ ಸಾಲಿನ ಪ್ರತಿಷ್ಠಿತ…

17 hours ago

ಗೆಳತಿಯ ಲವ್ ಮ್ಯಾರೇಜ್ ಎಡವಟ್ಟು: ಮಾಡದ ತಪ್ಪಿಗೆ ಯುವಕ ಆತ್ಮಹತ್ಯೆ

ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಕುಡ್ಲೂರು ಗ್ರಾಮದಲ್ಲಿ ಮನಕಲಕುವ ಘಟನೆ ನಡೆದಿದ್ದು, ಸ್ನೇಹಿತೆಯೊಬ್ಬಳ ಪ್ರೇಮ ವಿವಾದದ ನಡುವೆ ಅಮಾಯಕ ಯುವಕನೊಬ್ಬ…

21 hours ago

ಮದುವೆಯಾಗಿ ನಾಲ್ಕೇ ತಿಂಗಳಲ್ಲಿ ನವವಿವಾಹಿತೆಯ ಸಾವು: ಪತಿ ವಿರುದ್ಧ ಕೊಲೆ, ವರದಕ್ಷಿಣೆ ಕಿರುಕುಳ ಆರೋಪ

ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಗುಳೇದಹಟ್ಟಿ ತಾಂಡದಲ್ಲಿ ನವವಿವಾಹಿತೆಯೊಬ್ಬರ ಅನುಮಾನಾಸ್ಪದ ಸಾವು ಹಲವು ಅನುಮಾನಗಳಿಗೆ ಕಾರಣವಾಗಿದೆ. ಮದುವೆಯಾಗಿ ಕೇವಲ ನಾಲ್ಕು…

21 hours ago

ಪೊಲೀಸರ ಎದುರೇ ರಂಪಾಟ ನಡೆಸಿದ್ದ ‘ಮಚ್ ಮಂಜ’ ಬಂಧನ; ಮಹಾರಾಷ್ಟ್ರದಲ್ಲಿ ಸೆರೆ, ನ್ಯಾಯಾಂಗ ಬಂಧನಕ್ಕೆ ಒಪ್ಪಿಗೆ

ಹಳಿಯಾಳ: ಪಟ್ಟಣದ ಮೌರ್ಯ ಹೋಟೆಲ್ ಸಮೀಪ ಸಾರ್ವಜನಿಕರಿಗೆ ತೊಂದರೆ ಉಂಟುಮಾಡಿ, ಕರ್ತವ್ಯ ನಿರ್ವಹಣೆಗೆ ಬಂದಿದ್ದ ಪೊಲೀಸರ ಎದುರೇ ರಂಪಾಟ ನಡೆಸಿ…

21 hours ago

ಕಾನಸೂರು ವಸತಿ ಶಾಲೆ ವಿದ್ಯಾರ್ಥಿ ಗೋಕುಲ ಗೌಡ ಸಾವು ಪ್ರಕರಣ: ಇಬ್ಬರು ಸಿಬ್ಬಂದಿ ಅಮಾನತು

ಸಿದ್ದಾಪುರ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಕಾನಸೂರಿನ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿ ಗೋಕುಲ ಗೌಡ ಸಾವನ್ನಪ್ಪಿದ ಪ್ರಕರಣಕ್ಕೆ…

21 hours ago

ಮನೆಯಲ್ಲೇ ಸಂಗ್ರಹಿಸಿದ್ದ ನಾಡಬಾಂಬ್ ಸ್ಫೋಟ; ಹಳಿಯಾಳದ ಕಾಳಗಿನಕೊಪ್ಪ ಗ್ರಾಮದಲ್ಲಿ ಆತಂಕ

ಹಳಿಯಾಳ: ತಾಲೂಕಿನ ಕಾಳಗಿನಕೊಪ್ಪ ಗ್ರಾಮದಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ನಾಡಬಾಂಬ್‌ಗಳು ಸೋಮವಾರ ಮುಂಜಾನೆ ಭಾರೀ ಸ್ಫೋಟಗೊಂಡ ಪರಿಣಾಮ ಹಲವು ಮನೆಗಳಿಗೆ…

21 hours ago