Latest

ಓಲಾ ಉಬರ್ ಆಟೋಗಳು ಬ್ಯಾನ್

ಓಲಾ ಹಾಗು ಊಬರ್ ಆಟೋಗಳನ್ನು ಸ್ಥಗಿತಗೊಳಿಸಲಾಗಿದ್ದು, ರಸ್ತೆಗಿಳಿಸಿದ್ರೆ 5 ಸಾವಿರ ದಂಡ ಹಾಕೋದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ.
ಕಳೆದ ಹಲವು ವರ್ಷಗಳಿಂದ ಅನಧಿಕೃತವಾಗಿ ಸೇವೆ ನೀಡ್ತಿದ್ದ ಓಲಾ ಊಬರ್ ಆಟೋಗಳ ಹಗಲು ದರೋಡೆಗೆ ಪ್ರತಿಯೊಬ್ಬರೂ ಹೈರಾಣಾಗಿದ್ದಾರೆ. ಹೀಗಾಗಿ ಕಳೆದ ಕೆಲ ದಿನಗಳಿಂದ ಆಪ್ ಆಧಾರಿತ ಆಟೋಗಳನ್ನು ಬ್ಯಾನ್ ಮಾಡಬೇಕು ಅಂತ ತೀವ್ರ ಪ್ರಮಾಣದ ಹೋರಾಟ‌ ನಡೆದ ಬೆನ್ನಲ್ಲೇ ಓಲಾ ಉಬರ್ ಕಂಪನಿಗಳಿಗೆ ನೊಟೀಸ್ ಕೊಟ್ಟು ಸೂಕ್ತ ಉತ್ತರ ನೀಡುವಂತೆ ಸಾರಿಗೆ ಇಲಾಖೆ ಸೂಚನೆ ನೀಡಿತ್ತು. ಐದು ದಿನಗಳ ಬಳಿಕ ಅಗ್ರಿಗೇಟರ್ಸ್ ಕಂಪೆನಿಗಳು ಉತ್ತರ ಕೊಟ್ಟಿದ್ರೂ ಸಾರಿಗೆ ಇಲಾಖೆ ಕೋರ್ಟ್ ಮೊರೆ ಹೋಗಲು ನಿರ್ಧರಿಸಿತ್ತು. ಆದ್ರೆ ಇಂದು ಓಲಾ ಉಬರ್ ಕಂಪೆನಿಗಳ ಜೊತೆ ಸಾರಿಗೆ ಇಲಾಖೆ ಸಭೆ ನಡೆಸಿ ಮಹತ್ವದ ನಿರ್ಧಾರಕ್ಕೆ ಬಂದಿದೆ. ಸಭೆಯಲ್ಲಿ ಓಲಾ ಉಬರ್ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಯ್ತು. ಸುಮಾರು ಒಂದು ಗಂಟೆಗಳ ಕಾಲ ನಡೆದ ಸಭೆ ಬಳಿಕ ನಾಳೆಯಿಂದ ಆಯಪ್ ಆಧಾರಿತ ಆಟೋಗಳು ರಸ್ತೆಗಿಳಿಯದಂತೆ ಎರಡು ಕಂಪನಿಗಳಿಗೆ ಸೂಚನೆ ನೀಡಲಾಗಿದೆ. ಒಂದೊಮ್ಮೆ ರಸ್ತೆಗಿಳಿದ್ರೆ, ಕಂಪನಿಗೆ ದಂಡ ವಿಧಿಸಲಾಗುತ್ತೆ. ಪದೇ ಪದೇ ಉಲ್ಲಂಘನೆ ಮಾಡಿದ್ರೆ, ಆಯಪ್ ಬ್ಯಾನ್ ಮಾಡಲು ಕೂಡ ಸೈಬರ್ ವಿಭಾಗಕ್ಕೆ ದೂರು ನೀಡಲು ನಿರ್ಧಾರ ಮಾಡಲಾಗಿದೆ.
ಇನ್ನು ಸಾರ್ವಜನಿಕರಿಗೂ ನಾಳೆಯಿಂದ ಓಲಾ, ಉಬರ್ ಆಯಪ್ ನಲ್ಲಿ ಬುಕ್ ಮಾಡಬೇಡಿ ಎಂದು ಸಾರಿಗೆ ಆಯುಕ್ತರು ಮನವಿ ಮಾಡಿದ್ದಾರೆ. ಸಾರ್ವಜನಿಕರು ತಾವೇ ಸ್ವತಃ ನಿರ್ಧಾರಕ್ಕೆ ಬಂದು ಆಪ್ ಬಳಕೆ ಮಾಡ್ಬೇಡಿ. ಒಂದುವೇಳೆ ಓಲಾ ಆಟೋ ಸೇವೆ ಬಗ್ಗೆ ಗೊತ್ತಾದ್ರೆ ಸಾರಿಗೆ ಇಲಾಖೆ ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಸಹಾಯವಾಣಿ 9449863426, 9449863429 ನಂಬರ್ಗೆ ಕರೆ ಮಾಡಿ ದೂರು ಸಲ್ಲಿಸಬಹುದು.

ಭ್ರಷ್ಟರ ಬೇಟೆ

Recent Posts

‍ರೀಲ್ಸ್ ಮಾಡುವ ಹುಚ್ಚು, ಕರೆದಾಗ ಬಂದು ಜೊತೆಗೆ ಮಲಗುತ್ತಿರಲಿಲ್ಲ ಎಂದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…

2 days ago

ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27ರ ಯುವತಿ ಸಾವು; ಉಡುಪಿಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ, ತನಿಖೆ ಚುರುಕು

ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…

2 days ago

‘ಅಂದು ನನ್ನೊಂದಿಗೆ ಮಲಗಲು ಕೇಳಿದ್ದು ನೀವೇ ತಾನೇ?’ ನಿರ್ಮಾಪಕನಿಗೆ ನಟಿ ಚಾಂದಿನಿ ಚೌಧರಿ ಶಾಕ್!

ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…

2 days ago

ಮದುವೆಯಾಗಿ 4 ದಿನಕ್ಕೆ ಮಾಜಿ ಪ್ರೇಮಿಯೊಂದಿಗೆ ಹೋಟೆಲ್ ನಲ್ಲಿ ಪತ್ನಿ; ಪತಿಯ ಕೈಗೆ ವಿಡಿಯೋ…!

ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…

2 days ago

ಪತ್ನಿಯನ್ನು ಕೊಂದು ಶವ ವಿಲೇವಾರಿಗೆ ಸ್ನೇಹಿತನ ನೆರವು ಕೇಳಿದ ಪತಿ; ಜಾಣತನದಿಂದ ಪೊಲೀಸರಿಗೆ ಒಪ್ಪಿಸಿದ ಗೆಳೆಯ!

ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…

2 days ago

ಹಂಪಿಯಲ್ಲಿ ಅಕ್ರಮ ಹೋಂಸ್ಟೇ, ವಾಣಿಜ್ಯ ಚಟುವಟಿಕೆ ಆರೋಪ: 54 ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಸ್ವಯಂಪ್ರೇರಿತ ದೂರು

ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…

2 days ago