ಮಂಗಳೂರು: ಲೈಂಗಿಕವಾಗಿ ಬಳಸಿಕೊಂಡು 300 ರೂಪಾಯಿ ಹಣ ನೀಡದೇ ನಿರಾಕರಿಸಿದ್ದಕ್ಕಾಗಿ ವೃದ್ಧನನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.
ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಕೊಲೆ ಆರೋಪಿ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿನ ಕಿಯೋನಿಕ್ಸ್ಗೆ ಸೇರಿದ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಕೊಲೆಯಾದ ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟದ ದಾಸರಾಗಿದ್ದ ಇವರು ಯುವಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿ ರಾಜೇಶ್ ಪೂಜಾರಿ ನಗರದ ಲಾಲ್ಬಾಗ್ನಲ್ಲಿರುವ ಬಾರ್ನಲ್ಲಿ ಕೆಲಸಗಾರನಾಗಿದ್ದ. ಈತನನ್ನು ವೃದ್ಧ ಜಯಾನಂದ ಆಚಾರ್ಯ ಸಲಿಂಗಕಾಮದ ಉದ್ದೇಶಕ್ಕೆಂದು ಅಕ್ಟೋಬರ್ 7, 8 ರಂದು ಬಳಸಿಕೊಂಡಿದ್ದರು. ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದರಂತೆ.
ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…