ಮಂಗಳೂರು: ಲೈಂಗಿಕವಾಗಿ ಬಳಸಿಕೊಂಡು 300 ರೂಪಾಯಿ ಹಣ ನೀಡದೇ ನಿರಾಕರಿಸಿದ್ದಕ್ಕಾಗಿ ವೃದ್ಧನನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.
ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.
ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಕೊಲೆ ಆರೋಪಿ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿನ ಕಿಯೋನಿಕ್ಸ್ಗೆ ಸೇರಿದ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.
ಕೊಲೆಯಾದ ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟದ ದಾಸರಾಗಿದ್ದ ಇವರು ಯುವಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಬಂಧಿತ ಆರೋಪಿ ರಾಜೇಶ್ ಪೂಜಾರಿ ನಗರದ ಲಾಲ್ಬಾಗ್ನಲ್ಲಿರುವ ಬಾರ್ನಲ್ಲಿ ಕೆಲಸಗಾರನಾಗಿದ್ದ. ಈತನನ್ನು ವೃದ್ಧ ಜಯಾನಂದ ಆಚಾರ್ಯ ಸಲಿಂಗಕಾಮದ ಉದ್ದೇಶಕ್ಕೆಂದು ಅಕ್ಟೋಬರ್ 7, 8 ರಂದು ಬಳಸಿಕೊಂಡಿದ್ದರು. ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದರಂತೆ.
ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…