Latest

ವೃದ್ಧ-ಯುವಕನ ಸಲಿಂಗ ಕಾಮ ಕೊಲೆಯಲ್ಲಿ ಅಂತ್ಯ.

ಮಂಗಳೂರು: ಲೈಂಗಿಕವಾಗಿ ಬಳಸಿಕೊಂಡು 300 ರೂಪಾಯಿ ಹಣ ನೀಡದೇ ನಿರಾಕರಿಸಿದ್ದಕ್ಕಾಗಿ ವೃದ್ಧನನ್ನು ಯುವಕನೊಬ್ಬ ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ.

ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿ ಜೈಲಿಗಟ್ಟಲಾಗಿದೆ.

ನಗರದ ಮಂದಾರಬೈಲು ಜಯಾನಂದ ಆಚಾರ್ಯ(65) ಮೃತ ವ್ಯಕ್ತಿ. ಕುಂಜತ್ ಬೈಲ್ ಪ್ರದೇಶದ ದೇವಿನಗರ ನಿವಾಸಿ ರಾಜೇಶ್ ಪೂಜಾರಿ(31) ಕೊಲೆ ಆರೋಪಿ. ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪದವು ಎಂಬಲ್ಲಿನ ಕಿಯೋನಿಕ್ಸ್​ಗೆ ಸೇರಿದ ಪ್ರದೇಶದಲ್ಲಿ ಈ ಪ್ರಕರಣ ನಡೆದಿದೆ.

ಕೊಲೆಯಾದ ಜಯಾನಂದ ಆಚಾರ್ಯ ಕೂಲಿ ಕೆಲಸ ಮಾಡುತ್ತಿದ್ದು, ದಸರಾ ಸಂದರ್ಭದಲ್ಲಿ ಹೆಣ್ಣು ವೇಷ ಹಾಕುತ್ತಿದ್ದರು. ವಿಪರೀತ ಮದ್ಯದ ಚಟದ ದಾಸರಾಗಿದ್ದ ಇವರು ಯುವಕನೊಬ್ಬನನ್ನು ಲೈಂಗಿಕವಾಗಿ ಬಳಸಿಕೊಂಡು ಕೊಲೆಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಬಂಧಿತ ಆರೋಪಿ ರಾಜೇಶ್ ಪೂಜಾರಿ ನಗರದ ಲಾಲ್​ಬಾಗ್​ನಲ್ಲಿರುವ ಬಾರ್​ನಲ್ಲಿ ಕೆಲಸಗಾರನಾಗಿದ್ದ. ಈತನನ್ನು ವೃದ್ಧ ಜಯಾನಂದ ಆಚಾರ್ಯ ಸಲಿಂಗಕಾಮದ ಉದ್ದೇಶಕ್ಕೆಂದು ಅಕ್ಟೋಬರ್​ 7, 8 ರಂದು ಬಳಸಿಕೊಂಡಿದ್ದರು. ಬಳಿಕ ಹಣ ನೀಡುವುದಾಗಿ ಹೇಳಿದ್ದರಂತೆ. ಆದರೆ, ಸಲಿಂಗಕಾಮದ ಬಳಿಕ 300 ರೂ. ಕೊಡಲು ಜಯಾನಂದ ಆಚಾರ್ಯ ಸತಾಯಿಸಿದ್ದರಂತೆ.

ಇದರಿಂದ ಕೋಪಗೊಂಡ ಯುವಕ ರಾಜೇಶ್ ಪೂಜಾರಿ ಹಗ್ಗವೊಂದರಿಂದ ಜಯಾನಂದ ಆಚಾರ್ಯ ಅವರ ಕತ್ತು ಬಿಗಿದು ಕೊಲೆಗೈದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಕಾವೂರು ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

ಚಲಿಸುವ ರೈಲು ಕೆಳಗೆ ಸಿಲುಕಿದ ತಂದೆ-ಮಗು: ಅದಮ್ಯ ಧೈರ್ಯದಿಂದ ಪಾರಾದ ಜೀವಗಳು!

ಬಾಂಗ್ಲಾದೇಶದ ಕಿಶೋರ್‌ಗಂಜ್ ಜಿಲ್ಲೆಯ ಭೈರಬ್ ರೈಲು ನಿಲ್ದಾಣದಲ್ಲಿ ನಡೆದ ಹೃದಯ ಕಲುಕುವ ಘಟನೆ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ…

1 hour ago

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಗೃಹಿಣಿ ಆತ್ಮಹತ್ಯೆ: ಅಥಣಿಯಲ್ಲಿ ಹೃದಯವಿದ್ರಾವಕ ಘಟನೆ

ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಶಂಕರಮಠ ಗಲ್ಲಿಯಲ್ಲಿ 15 ವರ್ಷಗಳ ದಾಂಪತ್ಯ ಜೀವನ ನಡೆಸಿದ್ದ ಮಹಿಳೆಯೊಬ್ಬಳು ಗಂಡನ ವರದಕ್ಷಿಣೆ ಕಿರುಕುಳಕ್ಕೆ…

1 hour ago

ಬಿಜೆಪಿ ಯುವ ಮೋರ್ಚಾ ನಾಯಕ ವೆಂಕಟೇಶ್ ಕೊಲೆ ಪ್ರಕರಣ: ಆರು ಅಪರಾಧಿಗಳಿಗೆ ಗಲ್ಲು ಶಿಕ್ಷೆ

ಬಿಜೆಪಿ ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವೆಂಕಟೇಶ ಕುರುಬರ್ ಅಲಿಯಾಸ್ ಜೆಎನ್‌ಎನ್ ವೆಂಕಿ ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರು…

1 hour ago

66ರ ವೃದ್ಧನಿಗೆ 35ರ ಯುವತಿಯೊಂದಿಗೆ ಮದುವೆ! ವಯಸ್ಸು ಕೇವಲ ಸಂಖ್ಯೆ ಮಾತ್ರವೇ?

66 ವರ್ಷದ ಸೋಮ್ ದೇವ್ ಮತ್ತು 35 ವರ್ಷದ ಯುವತಿಯ ವಿವಾಹ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.…

2 hours ago

ವಿಮೆ-ಆಸ್ತಿ ಲಾಭಕ್ಕಾಗಿ ಗಂಡನ ಕೊಲೆ: ಹರಿಯಾಣದಲ್ಲಿ ಪ್ರಿಯಕರ ನೊಂದಿಗೆ ಪತ್ನಿ ರಚಿಸಿದ್ದ ಸಂಚು ಬಯಲು.!

ಹರಿಯಾಣದ ಚರ್ಕಿ ದಾದ್ರಿ ಜಿಲ್ಲೆಯಲ್ಲಿ ನಡೆದ ಭೀಕರ ಘಟನೆಯೊಂದು ಮಾನವ ಸಂಬಂಧಗಳನ್ನೇ ಪ್ರಶ್ನಿಸುವಂತೆ ಮಾಡಿದೆ. ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ,…

2 hours ago

ಬೆಂಗಳೂರು ಡ್ರಗ್ಸ್ ಜಾಲದ ಮೇಲೆ ಭಾರೀ ದಾಳಿ: ₹36 ಕೋಟಿ ಮೌಲ್ಯದ ಮಾದಕ ವಸ್ತು ಜಪ್ತಿ, 16 ಮಂದಿ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಮಾಫಿಯಾ ವಿರುದ್ಧ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, ನಾಲ್ವರು ವಿದೇಶಿಯರು ಸೇರಿದಂತೆ ಒಟ್ಟು 16 ಮಂದಿಯನ್ನು…

7 hours ago