Latest

ಯುಗಾದಿ ಅಮಾವಾಸ್ಯೆ ಯಂದು ಜವರಾಯನ ಅಟ್ಟಹಾಸ, ಕಾಮಹಳ್ಳಿಯಲ್ಲಿ ಮೂವರು ಜಲಸಮಾಧಿ

ಯುಗಾದಿ ಅಮಾವಾಸ್ಯೆ ದಿನವಾದ ಇಂದು ಜವರಾಯನ ಅಟ್ಟಹಾಸಕ್ಕೆ ಮೂರು ಮಂದಿ ಜಲಸಮಾಧಿಯಾಗಿರುವ ಘಟನೆ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕಾಮಹಳ್ಳಿಯಲ್ಲಿ ನಡೆದಿದೆ ಇದರಿಂದಾಗಿ ಇಡೀ ಗ್ರಾಮದಲ್ಲಿ ಯುಗಾದಿ ಸಂಭ್ರಮಕ್ಕೆ ಬರಸಿಡಿಲು ಬಡಿದಂತಾಗಿದೆ .
ಸಂಪ್ರದಾಯದಂತೆ ಯುಗಾದಿ ಅಮಾವಾಸ್ಯೆಯಂದು ಮನೆಯಲ್ಲಿರುವ ದನ ಕರುಗಳನ್ನು ತೊಳೆದು ಶುಚಿಗೊಳಿಸುವುದು ವಾಡಿಕೆ ಅದರಂತೆ ದನ ಕರುಗಳನ್ನು ತೊಳೆಯಲು ಹೋದ ಮೂವರು ಜಲ ಸಮಾಧಿಯಾಗಿದ್ದಾರೆ
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಮೃತ ದೇಹಗಳ ಹುಡುಕಾಟ ನಡೆಸಿ ಮೂರು ಮೃತ ದೇಹಗಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ
ಇದರಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು . ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಕಾಮಹಳ್ಳಿಯಲ್ಲಿ ಘಟನೆ ನಡೆದಿದ್ದು ಇಂದು ಅಮವಾಸ್ಯೆ, ನಾಳೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹಸುಗಳನ್ನು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ೧೭ ವರ್ಷದ ವಿನೋದ್, ೪೫ ವರ್ಷದ ಬಸವೇಗೌಡ, ೪೮ ವರ್ಷದ ಮುದ್ದೇಗೌಡ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ . ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದ ಸಿದ್ದತೆ ಭರದಿಂದ ಸಾಗಿತ್ತು. ಇವತ್ತು ಅಮಾವಾಸ್ಯೆ ಹಿನ್ನೆಲೆಯಲ್ಲಿ ದನ ಕರುಗಳನ್ನು ತೊಳೆದು, ಶುಚಿ ಮಾಡಲು ತೆರಳಿದ್ದ ವೇಳೆ ಈ ಅವಘಢ ಸಂಭವಿಸಿದೆ. ಬೆಳಿಗ್ಗೆ ೮.೩೦ರ ಸರಿ ಸುಮಾರಿಗೆ ಮನೆಯಿಂದ ಕೆರೆಯತ್ತ ತೆರಳಿ, ಜಾನುವಾರುಗಳನ್ನು ತೊಳೆಯಲು ಮುಂದಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ರೇ, ನಾಳೆ ಯುಗಾದಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡುತ್ತಿತ್ತು. ಆದರೆ ಕೆರೆಯಲ್ಲಿ ಜವರಾಯ ಹೊಂಚು ಹಾಕಿ ಕುಳಿತಿದ್ದು, ಹಸು ತೊಳೆಯಲು ಹೋಗಿದ್ದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ೧೭ ವರ್ಷದ ವಿನೋದ್‌ ಆಯಾ ತಪ್ಪಿ ನೀರಿಗೆ ಬಿದ್ದಿದ್ದಾನೆ. ನೀರು ಪಾಲಾಗಿ ಮುಳುಗುತ್ತಿದ್ದ ವಿನೋದ್‌ ರಕ್ಷಣೆಗೆ ಪಕ್ಕದಲ್ಲೆ ಇದ್ದ ಬಸವೇಗೌಡ ಹಾಗೂ ಮುದ್ದೇಗೌಡ ಮುಂದಾಗಿದ್ದಾರೆ ಕೊನೆಗೆ ಒಬ್ಬರನ್ನೊಬ್ಬರು ರಕ್ಷಿಸಿಕೊಳ್ಳಲಾಗದೆ ಕೊನೆಗೆ ಮೂವರು ಕೂಡ ಜಲಸಮಾಧಿಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ, ನೀರು ಪಾಲಾದವರ ಪತ್ತೆ ಕಾರ್ಯಕ್ಕೆ ಮುಂದಾಗಿ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ ಕೃತ ದೇಹಗಳನ್ನು ಹೊರ ತೆಗೆಯುತ್ತಿದ್ದಂತೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತರ ಕುಟುಂಬಸ್ಥರ ಪಾಲಿಗೆ, ಇಂದಿನ ಅಮವಾಸ್ಯೆ ತನ್ನ ಕರಾಳತೆಯನ್ನ ಅನಾವರಣಪಡಿಸಿ, ಯುಗಾದಿ ಸಂಭ್ರಮ ಹೋಗಿ ಸೂತಕದ ಛಾಯೆ ಆವರಿಸುವಂತೆ ಮಾಡಿದ್ದು, ದುರಂತವೇ ಸರಿ ಅನ್ನುವಂತೆ ಮಾಡಿದೆ.

ಭ್ರಷ್ಟರ ಬೇಟೆ

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago