Latest

ಯುಗಾದಿ ಅಮಾವಾಸ್ಯೆ ಯಂದು ಜವರಾಯನ ಅಟ್ಟಹಾಸ, ಕಾಮಹಳ್ಳಿಯಲ್ಲಿ ಮೂವರು ಜಲಸಮಾಧಿ

ಯುಗಾದಿ ಅಮಾವಾಸ್ಯೆ ದಿನವಾದ ಇಂದು ಜವರಾಯನ ಅಟ್ಟಹಾಸಕ್ಕೆ ಮೂರು ಮಂದಿ ಜಲಸಮಾಧಿಯಾಗಿರುವ ಘಟನೆ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಕಾಮಹಳ್ಳಿಯಲ್ಲಿ ನಡೆದಿದೆ ಇದರಿಂದಾಗಿ ಇಡೀ ಗ್ರಾಮದಲ್ಲಿ ಯುಗಾದಿ ಸಂಭ್ರಮಕ್ಕೆ ಬರಸಿಡಿಲು ಬಡಿದಂತಾಗಿದೆ .
ಸಂಪ್ರದಾಯದಂತೆ ಯುಗಾದಿ ಅಮಾವಾಸ್ಯೆಯಂದು ಮನೆಯಲ್ಲಿರುವ ದನ ಕರುಗಳನ್ನು ತೊಳೆದು ಶುಚಿಗೊಳಿಸುವುದು ವಾಡಿಕೆ ಅದರಂತೆ ದನ ಕರುಗಳನ್ನು ತೊಳೆಯಲು ಹೋದ ಮೂವರು ಜಲ ಸಮಾಧಿಯಾಗಿದ್ದಾರೆ
ವಿಷಯ ತಿಳಿದು ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕೆರೆಯಲ್ಲಿ ಮೃತ ದೇಹಗಳ ಹುಡುಕಾಟ ನಡೆಸಿ ಮೂರು ಮೃತ ದೇಹಗಳನ್ನು ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ
ಇದರಿಂದಾಗಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟುವಂತಿತ್ತು . ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದ ಕಾಮಹಳ್ಳಿಯಲ್ಲಿ ಘಟನೆ ನಡೆದಿದ್ದು ಇಂದು ಅಮವಾಸ್ಯೆ, ನಾಳೆ ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಹಸುಗಳನ್ನು ತೊಳೆಯಲು ಕೆರೆಗೆ ಹೋಗಿದ್ದ ಮೂವರು ನೀರು ಪಾಲಾಗಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳಕಿಗೆ ಬಂದಿದೆ. ೧೭ ವರ್ಷದ ವಿನೋದ್, ೪೫ ವರ್ಷದ ಬಸವೇಗೌಡ, ೪೮ ವರ್ಷದ ಮುದ್ದೇಗೌಡ ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ . ಪ್ರತಿ ವರ್ಷದಂತೆ ಈ ವರ್ಷವೂ ಯುಗಾದಿ ಹಬ್ಬದ ಸಿದ್ದತೆ ಭರದಿಂದ ಸಾಗಿತ್ತು. ಇವತ್ತು ಅಮಾವಾಸ್ಯೆ ಹಿನ್ನೆಲೆಯಲ್ಲಿ ದನ ಕರುಗಳನ್ನು ತೊಳೆದು, ಶುಚಿ ಮಾಡಲು ತೆರಳಿದ್ದ ವೇಳೆ ಈ ಅವಘಢ ಸಂಭವಿಸಿದೆ. ಬೆಳಿಗ್ಗೆ ೮.೩೦ರ ಸರಿ ಸುಮಾರಿಗೆ ಮನೆಯಿಂದ ಕೆರೆಯತ್ತ ತೆರಳಿ, ಜಾನುವಾರುಗಳನ್ನು ತೊಳೆಯಲು ಮುಂದಾಗಿದ್ದಾರೆ. ಎಲ್ಲವೂ ಅಂದುಕೊಂಡಂತೆ ಆಗಿದ್ರೇ, ನಾಳೆ ಯುಗಾದಿ ಹಬ್ಬದ ಸಂಭ್ರಮ ಸಡಗರ ಮನೆ ಮಾಡುತ್ತಿತ್ತು. ಆದರೆ ಕೆರೆಯಲ್ಲಿ ಜವರಾಯ ಹೊಂಚು ಹಾಕಿ ಕುಳಿತಿದ್ದು, ಹಸು ತೊಳೆಯಲು ಹೋಗಿದ್ದ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ೧೭ ವರ್ಷದ ವಿನೋದ್‌ ಆಯಾ ತಪ್ಪಿ ನೀರಿಗೆ ಬಿದ್ದಿದ್ದಾನೆ. ನೀರು ಪಾಲಾಗಿ ಮುಳುಗುತ್ತಿದ್ದ ವಿನೋದ್‌ ರಕ್ಷಣೆಗೆ ಪಕ್ಕದಲ್ಲೆ ಇದ್ದ ಬಸವೇಗೌಡ ಹಾಗೂ ಮುದ್ದೇಗೌಡ ಮುಂದಾಗಿದ್ದಾರೆ ಕೊನೆಗೆ ಒಬ್ಬರನ್ನೊಬ್ಬರು ರಕ್ಷಿಸಿಕೊಳ್ಳಲಾಗದೆ ಕೊನೆಗೆ ಮೂವರು ಕೂಡ ಜಲಸಮಾಧಿಯಾಗಿದ್ದಾರೆ. ವಿಚಾರ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ, ನೀರು ಪಾಲಾದವರ ಪತ್ತೆ ಕಾರ್ಯಕ್ಕೆ ಮುಂದಾಗಿ ಮೃತ ದೇಹಗಳನ್ನು ಹೊರ ತೆಗೆದಿದ್ದಾರೆ ಕೃತ ದೇಹಗಳನ್ನು ಹೊರ ತೆಗೆಯುತ್ತಿದ್ದಂತೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಮೃತರ ಕುಟುಂಬಸ್ಥರ ಪಾಲಿಗೆ, ಇಂದಿನ ಅಮವಾಸ್ಯೆ ತನ್ನ ಕರಾಳತೆಯನ್ನ ಅನಾವರಣಪಡಿಸಿ, ಯುಗಾದಿ ಸಂಭ್ರಮ ಹೋಗಿ ಸೂತಕದ ಛಾಯೆ ಆವರಿಸುವಂತೆ ಮಾಡಿದ್ದು, ದುರಂತವೇ ಸರಿ ಅನ್ನುವಂತೆ ಮಾಡಿದೆ.

ಭ್ರಷ್ಟರ ಬೇಟೆ

Recent Posts

ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಬಂಧನಕ್ಕೆ ಲಂಚ ಬೇಡಿಕೆ: ಸಿಪಿಐ ಲೋಕಾಯುಕ್ತ ಬಲೆಗೆ

ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…

11 hours ago

ಕರ್ಕಶ ಶಬ್ದದ ಬೈಕ್ ವಿಚಾರಕ್ಕೆ ಪೊಲೀಸರ ಮೇಲೆಯೇ ವಿದ್ಯಾರ್ಥಿಗಳ ಹಲ್ಲೆ

ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್‌ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…

18 hours ago

ಕ್ಯಾಂಟಿನ್‌ನಲ್ಲಿ ವೇಶ್ಯಾವಾಟಿಕೆ ದಂಧೆ: ಬೆಳ್ತಂಗಡಿಯಲ್ಲಿ ಪೊಲೀಸರ ದಾಳಿ, ಮೂವರು ಬಂಧನ

ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್‌ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…

18 hours ago

ಒಂದು ವರ್ಷದ ನಿರೀಕ್ಷೆಗೆ ತೆರೆ: ಭಟ್ಕಳಕ್ಕೆ ಖಾಯಂ ಎಸಿ, ಜೆ. ಮಹೇಶ್ ಅಧಿಕಾರ ಸ್ವೀಕಾರ

ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…

2 days ago

ಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ. ಸುಧಾಕರ್ ನಿಧನ; ರಾಜಕೀಯ ವಲಯದಲ್ಲಿ ಶೋಕದ ಛಾಯೆ

ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…

2 days ago

ಆಂಟಿ ಹಿಂದೆ ಹೋದವನ ದುರಂತ ಅಂತ್ಯ: ಲಿವ್-ಇನ್ ಸಂಗಾತಿಯ ಕಿರುಕುಳಕ್ಕೆ ಯುವಕ ಆತ್ಮಹತ್ಯೆ!

ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…

2 days ago