ಚಿಕ್ಕಬಳ್ಳಾಪುರ, ಏಪ್ರಿಲ್ 23: ರಸ್ತೆ ನಿರ್ಮಾಣ ವಿರೋಧಿಸಿ ನಡೆಯುತ್ತಿದ್ದ ಶಾಂತಿಯಾದ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡ ಘಟನೆ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ನಡೆದಿದೆ. ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಅವರ ಸಂಬಂಧಿ ಸಕಲೇಶಕುಮಾರ್, ಪ್ರತಿಭಟನಾಕಾರರ ಮೇಲೆ ಬೆದರಿಕೆ ಗೊಳಿಸಲು ಗುಂಡು ಹಾರಿಸಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯವಾಗಿದೆ.
ಸ್ಥಳೀಯರು ಕಲ್ಲು ಕ್ವಾರಿ ಕ್ರಷರ್ಗೆ ರಸ್ತೆ ನಿರ್ಮಾಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಹಿತಕರವಾಗಿ ಸ್ಥಳಕ್ಕೆ ಧಾಜಿಸಿದ ಸಕಲೇಶಕುಮಾರ್, ಸಿನಿಮಾ ಶೈಲಿಯಲ್ಲಿ ಜನರ ಮಧ್ಯೆ ನುಗ್ಗಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಚಿಕನ್ ರವಿ ಎಂಬ ವ್ಯಕ್ತಿಗೆ ಒಂದು ಗುಂಡು ತಗುಲಿದ್ದು, ಅವರನ್ನು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಘಟನೆಯ ಬಳಿಕ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಮತ್ತು ಹಿರಿಯ ಅಧಿಕಾರಿಯಾದ ದೀಪ್ತಿ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಕಲೇಶಕುಮಾರ್ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ.
ಇದೇ ಸಂದರ್ಭದಲ್ಲಿ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಚೇನಹಳ್ಳಿ ಠಾಣೆಯ ಮುಂದೆ ಸ್ಥಳೀಯರು ಮತ್ತೊಂದು ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿಯನ್ನುಂಟುಮಾಡಿದ್ದು, ಸಾರ್ವಜನಿಕ ಭದ್ರತೆಗೆ ಹೆಚ್ಚಿನ ಪೊಲೀಸ್ ಬಲ ನಿಯೋಜಿಸಲಾಗಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…