Latest

ರಸ್ತೆ ನಿರ್ಮಾಣ ವಿರೋಧದ ನಡುವೆ ಗುಂಡು ದಾಳಿ, ಓರ್ವನಿಗೆ ಗಂಭೀರ ಗಾಯ

ಚಿಕ್ಕಬಳ್ಳಾಪುರ, ಏಪ್ರಿಲ್ 23: ರಸ್ತೆ ನಿರ್ಮಾಣ ವಿರೋಧಿಸಿ ನಡೆಯುತ್ತಿದ್ದ ಶಾಂತಿಯಾದ ಪ್ರತಿಭಟನೆ ಹಿಂಸಾತ್ಮಕ ತಿರುವು ಪಡೆದುಕೊಂಡ ಘಟನೆ ಮಂಗಳವಾರ ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ನಡೆದಿದೆ. ಮಾಜಿ ಎಂಎಲ್ಸಿ ವೈ.ಎ.ನಾರಾಯಣಸ್ವಾಮಿ ಅವರ ಸಂಬಂಧಿ ಸಕಲೇಶಕುಮಾರ್, ಪ್ರತಿಭಟನಾಕಾರರ ಮೇಲೆ ಬೆದರಿಕೆ ಗೊಳಿಸಲು ಗುಂಡು ಹಾರಿಸಿದ್ದು, ಈ ಘಟನೆಯಲ್ಲಿ ಓರ್ವ ವ್ಯಕ್ತಿಗೆ ಗಂಭೀರವಾಗಿ ಗಾಯವಾಗಿದೆ.

ಸ್ಥಳೀಯರು ಕಲ್ಲು ಕ್ವಾರಿ ಕ್ರಷರ್‌ಗೆ ರಸ್ತೆ ನಿರ್ಮಾಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಅಹಿತಕರವಾಗಿ ಸ್ಥಳಕ್ಕೆ ಧಾಜಿಸಿದ ಸಕಲೇಶಕುಮಾರ್, ಸಿನಿಮಾ ಶೈಲಿಯಲ್ಲಿ ಜನರ ಮಧ್ಯೆ ನುಗ್ಗಿ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಚಿಕನ್ ರವಿ ಎಂಬ ವ್ಯಕ್ತಿಗೆ ಒಂದು ಗುಂಡು ತಗುಲಿದ್ದು, ಅವರನ್ನು ತಕ್ಷಣ ಚಿಕ್ಕಬಳ್ಳಾಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಅವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ಬಳಿಕ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಮತ್ತು ಹಿರಿಯ ಅಧಿಕಾರಿಯಾದ ದೀಪ್ತಿ ಎನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಕಲೇಶಕುಮಾರ್ನನ್ನು ಮಂಚೇನಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದು, ಮುಂದಿನ ತನಿಖೆ ಪ್ರಗತಿಯಲ್ಲಿದೆ.

ಇದೇ ಸಂದರ್ಭದಲ್ಲಿ, ಆರೋಪಿಗೆ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಚೇನಹಳ್ಳಿ ಠಾಣೆಯ ಮುಂದೆ ಸ್ಥಳೀಯರು ಮತ್ತೊಂದು ಪ್ರತಿಭಟನೆ ನಡೆಸಿದ್ದಾರೆ. ಘಟನೆಯು ಜಿಲ್ಲೆಯಲ್ಲಿ ಆತಂಕದ ಪರಿಸ್ಥಿತಿಯನ್ನುಂಟುಮಾಡಿದ್ದು, ಸಾರ್ವಜನಿಕ ಭದ್ರತೆಗೆ ಹೆಚ್ಚಿನ ಪೊಲೀಸ್ ಬಲ ನಿಯೋಜಿಸಲಾಗಿದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

2 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

2 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

2 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

2 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

2 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

2 hours ago