ಸೂರತ್ (ಗುಜರಾತ್): ಒಂದು ಸಣ್ಣ ಅನುಮಾನ ಹೇಗೆ ವರ್ಷಗಳ ಕಾಲ ಸುಖವಾಗಿದ್ದ ಸಂಸಾರವನ್ನೇ ನಾಶಮಾಡಬಹುದು ಎಂಬುದಕ್ಕೆ ಗುಜರಾತ್ನ ಸೂರತ್ನಲ್ಲಿ ನಡೆದ ಭೀಕರ ಘಟನೆ ಉದಾಹರಣೆಯಾಗಿದೆ. ಖ್ಯಾತ ಆಹಾರ ತಜ್ಞೆಯಾಗಿದ್ದ ಶಿಲ್ಪಾ ಸಾಲ್ಪಿ ಅವರ ಅನುಮಾನಾಸ್ಪದ ನಾಪತ್ತೆ ಪ್ರಕರಣವು ಇದೀಗ ಹತ್ಯೆ ಪ್ರಕರಣವಾಗಿ ತಿರುಗಿದ್ದು, ಪತಿಯ ಕ್ರೂರ ಕೃತ್ಯ ಬೆಳಕಿಗೆ ಬಂದಿದೆ.
ಶಿಲ್ಪಾ ಹಾಗೂ ಅವರ ಪತಿ ವಿಶಾಲ್ ಇಬ್ಬರೂ ಸಮಾಜದಲ್ಲಿ ಹೆಸರಾಂತ ದಂಪತಿಯಾಗಿದ್ದರು. ಇವರಿಗೆ ಒಬ್ಬ ಮುದ್ದಾದ ಮಗನೂ ಇದ್ದ. ಎಲ್ಲವೂ ಸುಖವಾಗಿದ್ದರೂ, ವಿಶಾಲ್ಗೆ ಪತ್ನಿಯ ಮೇಲೆ ಹುಟ್ಟಿದ ಅನುಮಾನ ದಿನದಿಂದ ದಿನಕ್ಕೆ ಗಂಭೀರವಾಗುತ್ತಿತ್ತು. ಇದೇ ಕಾರಣಕ್ಕೆ ದಂಪತಿಗಳ ನಡುವೆ ಆಗಾಗ ಜಗಳಗಳು ನಡೆಯುತ್ತಿದವು.
ಘಟನೆಯ ದಿನವೂ ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆದಿದ್ದು, ಆರೋಪಿಯು ಪೂರ್ವಯೋಜಿತವಾಗಿ ಪತ್ನಿಯನ್ನು ಕೊಲೆ ಮಾಡಿದ್ದಾನೆ ಎಂಬ ಅನುಮಾನ ವ್ಯಕ್ತವಾಗಿದೆ. ನಂತರ ಶಿಲ್ಪಾ ನಾಪತ್ತೆಯಾಗಿದ್ದಾಳೆ ಎಂದು ಪೊಲೀಸರಿಗೆ ದೂರು ನೀಡುವ ಮೂಲಕ ಪ್ರಕರಣವನ್ನು ಬೇರೆ ದಿಕ್ಕಿಗೆ ತಳ್ಳಲು ಯತ್ನಿಸಿದ್ದಾನೆ.
ತನಿಖೆ ಆರಂಭಿಸಿದ ಪೊಲೀಸರಿಗೆ ವಿಶಾಲ್ನ ವರ್ತನೆ ಮೇಲೆಯೇ ಮೊದಲಿನಿಂದಲೇ ಅನುಮಾನ ಹುಟ್ಟಿತ್ತು. ಬಳಿಕ ಆತ ತನ್ನ ಮಗನಿಗೆ ಬರೆದ ಪತ್ರದಲ್ಲಿ ಕೃತ್ಯದ ಸುಳಿವು ಸಿಕ್ಕಿದ್ದು, ತನಿಖೆ ಮತ್ತಷ್ಟು ಗಂಭೀರಗೊಂಡಿತು. ಪೊಲೀಸರ ತಂಡ ಆರೋಪಿಯನ್ನು ಬೆನ್ನಟ್ಟಿ ಪಾಳುಬಿದ್ದ ಮನೆಯನ್ನು ತಲುಪಿದಾಗ ಅಲ್ಲಿ ದುರ್ವಾಸನೆ ಕಾಣಿಸಿಕೊಂಡಿತು.
ಮನೆಯಲ್ಲಿ ಇದ್ದ ಮರದ ಪೆಟ್ಟಿಗೆ ಪೊಲೀಸರ ಗಮನ ಸೆಳೆದಿದ್ದು, ಅದನ್ನು ತೆರೆಯುತ್ತಿದ್ದಂತೆ ಬೆಚ್ಚಿಬೀಳಿಸುವ ದೃಶ್ಯ ಎದುರಾಯಿತು. ಪೆಟ್ಟಿಗೆಯೊಳಗೆ ಶಿಲ್ಪಾ ಅವರ ಶವವನ್ನು ಇಟ್ಟು, ಅದರ ಮೇಲೆ ಸಿಮೆಂಟ್ ಸುರಿದು ಮರೆಮಾಚಲಾಗಿತ್ತು.
ಪ್ರಸ್ತುತ ಆರೋಪಿ ವಿಶಾಲ್ ತಲೆಮರೆಸಿಕೊಂಡಿದ್ದು, ಪೊಲೀಸರು ಅವನ ಪತ್ತೆಗೆ ಬಲೆ ಬೀಸಿದ್ದಾರೆ. ಈ ಘಟನೆ ಕುಟುಂಬದಲ್ಲಿ ನಂಬಿಕೆ ಕುಸಿದಾಗ ಅದರ ಪರಿಣಾಮ ಎಷ್ಟು ಭೀಕರವಾಗಿರಬಹುದು ಎಂಬುದನ್ನು ಮತ್ತೊಮ್ಮೆ ಮನಗಾಣಿಸಿದೆ.
ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿದ್ದ ಆರೋಪದ ಮೇರೆಗೆ ಆರು ವಿದೇಶಿ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ನೊಳಗಿನ ನಾಯಕತ್ವದ ಗೊಂದಲ ಮತ್ತು ಅಸಮಾಧಾನದ ನಡುವೆಯೇ ಅಹಿಂದ ಸಂಘಟನೆ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಪಕ್ಷವು ಅಹಿಂದ…
ಒಡಿಶಾ: ರಾಜ್ಯದ ಗ್ರಾಮೀಣ ಬ್ಯಾಂಕ್ನಲ್ಲಿ ನಡೆದ ವಿಚಿತ್ರ ಹಾಗೂ ಹೃದಯವಿದ್ರಾವಕ ಘಟನೆ ದೇಶದ ಬಡತನದ ವಾಸ್ತವಿಕತೆಯನ್ನು ಮತ್ತೆ ಬೆಳಕಿಗೆ ತಂದಿದೆ.…
ಮುಂಬೈ: ಮಹಾರಾಷ್ಟ್ರದ ಬಾಂದ್ರಾ ಪೂರ್ವದಲ್ಲಿ ಒಂದೇ ಕುಟುಂಬದ ನಾಲ್ವರು ಸದಸ್ಯರು ಅನಿರೀಕ್ಷಿತವಾಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ತಾಯಿ…
ಹೈದರಾಬಾದ್: ನಗರದಲ್ಲಿ ಮಹಿಳೆಯರ ಭದ್ರತೆ ಪ್ರಶ್ನೆಯಾಗಿ ಮತ್ತೊಮ್ಮೆ ಚರ್ಚೆಗೆ ಬಂದಿದೆ. ಜನನಿಬಿಡ ಪ್ರದೇಶದಲ್ಲೇ ಜಾಗಿಂಗ್ ಮಾಡುತ್ತಿದ್ದ ಯುವತಿಗೆ ವ್ಯಕ್ತಿಯೊಬ್ಬ ಸಾರ್ವಜನಿಕವಾಗಿ…
ಹಾಸನ: ತಿಂಡಿ ಖರೀದಿಸಿ ಹಣ ನೀಡದೆ ತೆರಳುತ್ತಿದ್ದವರನ್ನು ಪ್ರಶ್ನಿಸಿದ ಕಾರಣಕ್ಕೆ ಬೇಕರಿ ಮಾಲೀಕನ ಮೇಲೆ ದಾಳಿಯ ಘಟನೆ ಹಾಸನ ಜಿಲ್ಲೆಯ…