ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿಯಲ್ಲಿ ಈರುಳ್ಳಿ ಬೆಳೆಗಾರರು ರಸ್ತೆ ಮೇಲೆ ಈರುಳ್ಳಿ ಸುರಿದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೂಡ ಕ್ವಿಂಟಾಲಿಗೆ ಕೇವಲ ₹200ಕ್ಕೆ ಹರಾಜಾಗುತ್ತಿರುವುದನ್ನು ವಿರೋಧಿಸಿ ಅವರು ಈ ರೀತಿಯ ಕ್ರಮ ಕೈಗೊಂಡಿದ್ದಾರೆ.
ತೋಟಗಾರಿಕೆ ಎಫ್ಪಿಒ ಆವರಣದಲ್ಲಿಯೂ ರೈತರು ಈರುಳ್ಳಿ ಸುರಿದು ಪ್ರತಿಭಟನೆ ನಡೆಸಿದ್ದು, ದುಡಿದು ಬೆಳೆದ ಬೆಳೆಗೆ ನ್ಯಾಯ ಸಿಗದಿರುವುದರ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೂ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ ದೃಶ್ಯಗಳು ಗಮನಸೆಳೆದಿವೆ.
“ಬಾಗಲಕೋಟೆಯಲ್ಲಿ ಈರುಳ್ಳಿ ಕ್ವಿಂಟಾಲಿಗೆ ₹1000ಕ್ಕೆ ಮಾರಾಟವಾಗುತ್ತಿದೆ. ಆದರೆ ಇಲ್ಲಿ ₹200ಗೂ ಹೆಚ್ಚು ಸಿಗುತ್ತಿಲ್ಲ. ನಾವು ಇಷ್ಟೊಂದು ಶ್ರಮವಹಿಸಿ ಬೆಳೆದ ಬೆಳೆಗೆ ಈ ರೀತಿ ನಿರ್ಲಕ್ಷ್ಯವಾಯಿತೆ?” ಎಂದು ಅಸಹನೆಗೊಂಡ ರೈತರು ಬೇಸರ ವ್ಯಕ್ತಪಡಿಸಿದರು.
ಈ ಬೆಳೆಗೆ ಖಾಯಂ ದರ ನಿರ್ಧರಿಸಿ, ರೈತರ ಆರ್ಥಿಕ ನಷ್ಟ ತಪ್ಪಿಸಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂಬುದು ರೈತರ ಮುಖ್ಯ ಬೇಡಿಕೆ. ಬೆಲೆ ಕುಸಿತದ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ರೈತ ಸಮುದಾಯ ಒತ್ತಾಯಿಸುತ್ತಿದೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…