ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಕುಪಕಡ್ಡಿ ಕ್ರಾಸ್ ಬಳಿಯಲ್ಲಿ ಈರುಳ್ಳಿ ಬೆಳೆಗಾರರು ರಸ್ತೆ ಮೇಲೆ ಈರುಳ್ಳಿ ಸುರಿದು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಗುಣಮಟ್ಟದ ಈರುಳ್ಳಿ ಕೂಡ ಕ್ವಿಂಟಾಲಿಗೆ ಕೇವಲ ₹200ಕ್ಕೆ ಹರಾಜಾಗುತ್ತಿರುವುದನ್ನು ವಿರೋಧಿಸಿ ಅವರು ಈ ರೀತಿಯ ಕ್ರಮ ಕೈಗೊಂಡಿದ್ದಾರೆ.
ತೋಟಗಾರಿಕೆ ಎಫ್ಪಿಒ ಆವರಣದಲ್ಲಿಯೂ ರೈತರು ಈರುಳ್ಳಿ ಸುರಿದು ಪ್ರತಿಭಟನೆ ನಡೆಸಿದ್ದು, ದುಡಿದು ಬೆಳೆದ ಬೆಳೆಗೆ ನ್ಯಾಯ ಸಿಗದಿರುವುದರ ಬಗ್ಗೆ ಗಂಭೀರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮೇಲೂ ರೈತರು ತಮ್ಮ ಪ್ರತಿಭಟನೆ ಮುಂದುವರೆಸಿದ ದೃಶ್ಯಗಳು ಗಮನಸೆಳೆದಿವೆ.
“ಬಾಗಲಕೋಟೆಯಲ್ಲಿ ಈರುಳ್ಳಿ ಕ್ವಿಂಟಾಲಿಗೆ ₹1000ಕ್ಕೆ ಮಾರಾಟವಾಗುತ್ತಿದೆ. ಆದರೆ ಇಲ್ಲಿ ₹200ಗೂ ಹೆಚ್ಚು ಸಿಗುತ್ತಿಲ್ಲ. ನಾವು ಇಷ್ಟೊಂದು ಶ್ರಮವಹಿಸಿ ಬೆಳೆದ ಬೆಳೆಗೆ ಈ ರೀತಿ ನಿರ್ಲಕ್ಷ್ಯವಾಯಿತೆ?” ಎಂದು ಅಸಹನೆಗೊಂಡ ರೈತರು ಬೇಸರ ವ್ಯಕ್ತಪಡಿಸಿದರು.
ಈ ಬೆಳೆಗೆ ಖಾಯಂ ದರ ನಿರ್ಧರಿಸಿ, ರೈತರ ಆರ್ಥಿಕ ನಷ್ಟ ತಪ್ಪಿಸಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಬೇಕು ಎಂಬುದು ರೈತರ ಮುಖ್ಯ ಬೇಡಿಕೆ. ಬೆಲೆ ಕುಸಿತದ ಸಮಸ್ಯೆಗೆ ಶಾಶ್ವತ ಪರಿಹಾರ ಬೇಕು ಎಂದು ರೈತ ಸಮುದಾಯ ಒತ್ತಾಯಿಸುತ್ತಿದೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…