ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೆಳಗುಲಿ ಗ್ರಾಮಕ್ಕೆ ಸೇರಿದ ವ್ಯಾಆರ್ ಧನಂಜಯ ಆನ್ಲೈನ್ ಲಾಭದ ಆಸೆಗೆ ₹5 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಧನಂಜಯಗೆ ವಾಟ್ಸಪ್ ಮೂಲಕ ಪರಿಚಯವಾದ ಸೈಬರ್ ಮೋಸಗಾರರು, ವೆಬ್ಸೈಟ್ಗಳಲ್ಲಿ ಮಾರಾಟವಾಗುವ ಉತ್ಪನ್ನಗಳಿಗೆ ರಿವ್ಯೂ ನೀಡಿ ಕಮಿಷನ್ ಸಂಪಾದಿಸಬಹುದು ಎಂದು ಭರವಸೆ ನೀಡಿದ್ದರು. ಪ್ರಾರಂಭದಲ್ಲಿ ಒಂದು ಉತ್ಪನ್ನಕ್ಕೆ ರಿವ್ಯೂ ನೀಡಿದ ನಂತರ ಅವರ ಖಾತೆಗೆ ₹839 ಜಮೆಯಾಗಿದ್ದು, ಇದು ಅವರ ನಂಬಿಕೆಯನ್ನು ಗೆದ್ದಿತು.
ಮುಂದೆ, ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂಬ ವಾಗ್ದಾನದೊಂದಿಗೆ ಟೆಲಿಗ್ರಾಮ್ ಅ್ಯಪ್ ಮೂಲಕ ಸಂಪರ್ಕ ಸಾಧಿಸಿ ₹10 ಸಾವಿರ ಹೂಡಿಕೆ ಮಾಡುವಂತೆ ಕೇಳಲಾಗಿದೆ. ಇದರ ನಂತರ ಅವರ ಖಾತೆಗೆ ₹15,343 ಜಮೆಯಾಗಿತ್ತು. ಇದರಿಂದ ಮತ್ತಷ್ಟು ನಂಬಿಕೆ ಬಂದ ಧನಂಜಯ, ಹಂತ ಹಂತವಾಗಿ ಒಟ್ಟು ₹5,59,951 ಮೊತ್ತವನ್ನು ವರ್ಗಾಯಿಸಿದರು.
ಆದರೆ, ಈ ಎಲ್ಲಾ ಹೂಡಿಕೆಗಳ ವಿರುದ್ಧ ಅವರಿಗೆ ಕೇವಲ ₹55,182 ಮಾತ್ರ ವಾಪಸ್ ಬಂದಿದೆ. ಉಳಿದ ಮೊತ್ತ ವಾಪಸ್ ಪಡೆಯಲು ಮತ್ತಷ್ಟು ಹಣ ಪಾವತಿಸುವಂತೆ ನಿರಂತರ ಒತ್ತಡ ಬಂದಿದ್ದು, ಅನುಮಾನಗೊಂಡ ಧನಂಜಯ ಕೊನೆಗೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆಯ ಕುರಿತು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿಯ ಆನ್ಲೈನ್ ಆಮಿಷಗಳಿಂದ ಎಚ್ಚರಿಕೆ ವಹಿಸಲು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…