ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೆಳಗುಲಿ ಗ್ರಾಮಕ್ಕೆ ಸೇರಿದ ವ್ಯಾಆರ್ ಧನಂಜಯ ಆನ್ಲೈನ್ ಲಾಭದ ಆಸೆಗೆ ₹5 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಧನಂಜಯಗೆ ವಾಟ್ಸಪ್ ಮೂಲಕ ಪರಿಚಯವಾದ ಸೈಬರ್ ಮೋಸಗಾರರು, ವೆಬ್ಸೈಟ್ಗಳಲ್ಲಿ ಮಾರಾಟವಾಗುವ ಉತ್ಪನ್ನಗಳಿಗೆ ರಿವ್ಯೂ ನೀಡಿ ಕಮಿಷನ್ ಸಂಪಾದಿಸಬಹುದು ಎಂದು ಭರವಸೆ ನೀಡಿದ್ದರು. ಪ್ರಾರಂಭದಲ್ಲಿ ಒಂದು ಉತ್ಪನ್ನಕ್ಕೆ ರಿವ್ಯೂ ನೀಡಿದ ನಂತರ ಅವರ ಖಾತೆಗೆ ₹839 ಜಮೆಯಾಗಿದ್ದು, ಇದು ಅವರ ನಂಬಿಕೆಯನ್ನು ಗೆದ್ದಿತು.
ಮುಂದೆ, ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂಬ ವಾಗ್ದಾನದೊಂದಿಗೆ ಟೆಲಿಗ್ರಾಮ್ ಅ್ಯಪ್ ಮೂಲಕ ಸಂಪರ್ಕ ಸಾಧಿಸಿ ₹10 ಸಾವಿರ ಹೂಡಿಕೆ ಮಾಡುವಂತೆ ಕೇಳಲಾಗಿದೆ. ಇದರ ನಂತರ ಅವರ ಖಾತೆಗೆ ₹15,343 ಜಮೆಯಾಗಿತ್ತು. ಇದರಿಂದ ಮತ್ತಷ್ಟು ನಂಬಿಕೆ ಬಂದ ಧನಂಜಯ, ಹಂತ ಹಂತವಾಗಿ ಒಟ್ಟು ₹5,59,951 ಮೊತ್ತವನ್ನು ವರ್ಗಾಯಿಸಿದರು.
ಆದರೆ, ಈ ಎಲ್ಲಾ ಹೂಡಿಕೆಗಳ ವಿರುದ್ಧ ಅವರಿಗೆ ಕೇವಲ ₹55,182 ಮಾತ್ರ ವಾಪಸ್ ಬಂದಿದೆ. ಉಳಿದ ಮೊತ್ತ ವಾಪಸ್ ಪಡೆಯಲು ಮತ್ತಷ್ಟು ಹಣ ಪಾವತಿಸುವಂತೆ ನಿರಂತರ ಒತ್ತಡ ಬಂದಿದ್ದು, ಅನುಮಾನಗೊಂಡ ಧನಂಜಯ ಕೊನೆಗೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆಯ ಕುರಿತು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿಯ ಆನ್ಲೈನ್ ಆಮಿಷಗಳಿಂದ ಎಚ್ಚರಿಕೆ ವಹಿಸಲು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಅಟ್ರಾಸಿಟಿ ಪ್ರಕರಣದ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವ ವಿಚಾರದಲ್ಲಿ ಲಂಚ ಸ್ವೀಕರಿಸಿದ ಆರೋಪದಡಿ ಗುರುಮಠಕಲ್ ಪೊಲೀಸ್ ಠಾಣೆಯ ಸಿಪಿಐ ವೀರಣ್ಣ…
ಚಿಕ್ಕಬಳ್ಳಾಪುರ ನಗರ ಹೊರವಲಯದ ಬೀಡಗಾನಹಳ್ಳಿ ಸಮೀಪದ ನಾಗಾರ್ಜುನ ಕಾಲೇಜು ಬಳಿ ಕರ್ತವ್ಯದಲ್ಲಿದ್ದ ಎಎಸ್ಐ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಮೇಲೆ ಕಾಲೇಜು…
ಬೆಳ್ತಂಗಡಿ ಪಟ್ಟಣದಲ್ಲಿ ಅಕ್ರಮವಾಗಿ ನಿರ್ಮಾಣಗೊಂಡಿದ್ದ ಕ್ಯಾಂಟಿನ್ನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿ ಮೂವರನ್ನು ಬಂಧಿಸಿರುವ ಘಟನೆ…
ಭಟ್ಕಳ: ಸುಮಾರು ಒಂದು ವರ್ಷದಿನಿಂದ ಖಾಲಿಯಾಗಿದ್ದ ಭಟ್ಕಳ ಉಪ ವಿಭಾಗಾಧಿಕಾರಿ (ಎಸಿ) ಹುದ್ದೆಗೆ ಕೊನೆಗೂ ಸರ್ಕಾರ ಅಧಿಕಾರಿಯನ್ನು ನೇಮಕ ಮಾಡಿದ್ದು,…
ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರಾಗಿದ್ದ ಡಿ. ಸುಧಾಕರ್ (65) ಅವರು ಅನಾರೋಗ್ಯದಿಂದ ಇಂದು ಮುಂಜಾನೆ ನಿಧನರಾಗಿದ್ದಾರೆ. ಕಳೆದ…
ಸೋಶಿಯಲ್ ಮೀಡಿಯಾದಲ್ಲಿ ಆರಂಭವಾದ ಪ್ರೇಮಕಥೆಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಮಹಿಳೆಯೊಂದಿಗೆ ಲಿವ್-ಇನ್…