ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೆಳಗುಲಿ ಗ್ರಾಮಕ್ಕೆ ಸೇರಿದ ವ್ಯಾಆರ್ ಧನಂಜಯ ಆನ್ಲೈನ್ ಲಾಭದ ಆಸೆಗೆ ₹5 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಕಳೆದುಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.
ಧನಂಜಯಗೆ ವಾಟ್ಸಪ್ ಮೂಲಕ ಪರಿಚಯವಾದ ಸೈಬರ್ ಮೋಸಗಾರರು, ವೆಬ್ಸೈಟ್ಗಳಲ್ಲಿ ಮಾರಾಟವಾಗುವ ಉತ್ಪನ್ನಗಳಿಗೆ ರಿವ್ಯೂ ನೀಡಿ ಕಮಿಷನ್ ಸಂಪಾದಿಸಬಹುದು ಎಂದು ಭರವಸೆ ನೀಡಿದ್ದರು. ಪ್ರಾರಂಭದಲ್ಲಿ ಒಂದು ಉತ್ಪನ್ನಕ್ಕೆ ರಿವ್ಯೂ ನೀಡಿದ ನಂತರ ಅವರ ಖಾತೆಗೆ ₹839 ಜಮೆಯಾಗಿದ್ದು, ಇದು ಅವರ ನಂಬಿಕೆಯನ್ನು ಗೆದ್ದಿತು.
ಮುಂದೆ, ಹೆಚ್ಚಿನ ಲಾಭಾಂಶ ದೊರೆಯುತ್ತದೆ ಎಂಬ ವಾಗ್ದಾನದೊಂದಿಗೆ ಟೆಲಿಗ್ರಾಮ್ ಅ್ಯಪ್ ಮೂಲಕ ಸಂಪರ್ಕ ಸಾಧಿಸಿ ₹10 ಸಾವಿರ ಹೂಡಿಕೆ ಮಾಡುವಂತೆ ಕೇಳಲಾಗಿದೆ. ಇದರ ನಂತರ ಅವರ ಖಾತೆಗೆ ₹15,343 ಜಮೆಯಾಗಿತ್ತು. ಇದರಿಂದ ಮತ್ತಷ್ಟು ನಂಬಿಕೆ ಬಂದ ಧನಂಜಯ, ಹಂತ ಹಂತವಾಗಿ ಒಟ್ಟು ₹5,59,951 ಮೊತ್ತವನ್ನು ವರ್ಗಾಯಿಸಿದರು.
ಆದರೆ, ಈ ಎಲ್ಲಾ ಹೂಡಿಕೆಗಳ ವಿರುದ್ಧ ಅವರಿಗೆ ಕೇವಲ ₹55,182 ಮಾತ್ರ ವಾಪಸ್ ಬಂದಿದೆ. ಉಳಿದ ಮೊತ್ತ ವಾಪಸ್ ಪಡೆಯಲು ಮತ್ತಷ್ಟು ಹಣ ಪಾವತಿಸುವಂತೆ ನಿರಂತರ ಒತ್ತಡ ಬಂದಿದ್ದು, ಅನುಮಾನಗೊಂಡ ಧನಂಜಯ ಕೊನೆಗೆ ಸೈಬರ್ ಪೊಲೀಸರಿಗೆ ದೂರು ನೀಡಿದ್ದಾರೆ.
ಘಟನೆಯ ಕುರಿತು ಸೈಬರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ. ಸಾರ್ವಜನಿಕರು ಈ ರೀತಿಯ ಆನ್ಲೈನ್ ಆಮಿಷಗಳಿಂದ ಎಚ್ಚರಿಕೆ ವಹಿಸಲು ಅಧಿಕಾರಿಗಳು ಎಚ್ಚರಿಸಿದ್ದಾರೆ.
ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…
ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…
ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…
ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…
ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…
ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…