Latest

ಯೋಧರ ಜೊತೆ ಮಲಗಿದರೆ ಮಾತ್ರವೇ ಆದೇಶದ ಮಹಿಳೆಯರಿಗೆ ಆಹಾರ ಸಿಗುತ್ತಂತೆ!

ಅಲ್ಲಿನ ಮಹಿಳೆಯರು ತಮ್ಮ ಕುಟುಂಬಗಳಿಗೆ ಆಹಾರವನ್ನು ಪಡೆಯಲು ಸೈನಿಕರೊಂದಿಗೆ ಮಲಗಬೇಕು ಎಂದು ಒತ್ತಾಯಿಸಲಾಗುತ್ತಿದೆ. ಗಾರ್ಡಿಯನ್‌ನೊಂದಿಗೆ ಮಾತನಾಡಿದ ಮಹಿಳೆಯೊಬ್ಬರು, ಆಹಾರ ಸಂಗ್ರಹವಾಗಿರುವ ನಗರದಾದ್ಯಂತ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ ಎಂದು ಹೇಳಿದರು. “ನನ್ನ ಹೆತ್ತವರಿಬ್ಬರೂ ತುಂಬಾ ವಯಸ್ಸಾದವರು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇನ್ನು ನನ್ನ ಮಗಳನ್ನು ನಾನು ಆಹಾರಕ್ಕಾಗಿ ಹೊರಗೆ ಹೋಗಲು ಬಿಡಲಿಲ್ಲ. ನಾನು ಸೈನಿಕರ ಬಳಿಗೆ ಹೋದೆ, ಆಹಾರವನ್ನು ಪಡೆಯುವ ಏಕೈಕ ಮಾರ್ಗ ಅದೊಂದೇ ಆಗಿತ್ತು ಎಂದು ತಮ್ಮ ಸಂಕಷ್ಟವನ್ನು ವಿವರಿಸಿದ್ದಾರೆ.
ಕಳೆದ ವರ್ಷ ಏಪ್ರಿಲ್ 15 ರಂದು ಪ್ರಾರಂಭವಾದ ಸಂಘರ್ಷದ ಕೆಲವೇ ದಿನಗಳಲ್ಲಿ ಆಯುಧಗಳನ್ನು ಹೊಂದಿರುವ ಪುರುಷರು ಅತ್ಯಾಚಾರಗಳನ್ನು ಮಾಡುತ್ತಿದ್ದಾರೆ ಎಂದು ವರದಿಗಳಾಯಿತು. ಸುಡಾನ್‌ನಲ್ಲಿನ ಯುದ್ಧವು ಹತ್ತಾರು ಸಾವಿರ ಜನರನ್ನು ಬಲಿ ಪಡೆದಿದೆ. ಕೆಲವು ಅಂದಾಜಿನ ಪ್ರಕಾರ ಸಾವಿನ ಸಂಖ್ಯೆ 150,000 ವರೆಗೆ ಇದೆ. ಯುದ್ಧವು ವಿಶ್ವದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಸೃಷ್ಟಿಸಿದ್ದು, ದೇಶವನ್ನು ಬರಗಾಲದ ಅಂಚಿಗೆ ತಂದಿತು.
ಆರ್‌ಎಸ್‌ಎಫ್ ಯೋಧರು ತಮ್ಮ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಭಯಾನಕ ಕಥೆಗಳನ್ನು ಹಂಚಿಕೊಳ್ಳಲು ಹಲವಾರು ಮಹಿಳೆಯರು ಮುಂದೆ ಬಂದಿದ್ದಾರೆ. ಸೈನಿಕರೊಂದಿಗೆ ಮಲಗಿದ ನಂತರ ಖಾಲಿ ಮನೆಗಳಿಂದ ಆಹಾರ, ಅಡುಗೆ ಸಲಕರಣೆಗಳು ಮತ್ತು ಸುಗಂಧ ದ್ರವ್ಯಗಳನ್ನು ತೆಗೆದುಕೊಳ್ಳಲು ಅನುಮತಿ ನೀಡಲಾಯಿತು ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. “ನಾನು ಏನು ಅನುಭವಿಸಿದೆ ಎಂಬುದನ್ನು ಪದಗಳಲ್ಲಿ ಹೇಳಲು ಅಸಾಧ್ಯ, ನಾನು ಅದನ್ನು ನನ್ನ ಶತ್ರುಗಳಿಗೂ ಬಯಸುವುದಿಲ್ಲ,. ನನ್ನ ಮಕ್ಕಳಿಗೆ ಆಹಾರವನ್ನು ನೀಡಲು ನಾನು ಅದನ್ನು ಮಾಡಿದ್ದೇನೆ” ಎಂದು ಅವರು ಹೇಳಿದರು.
ಯುದ್ಧ ಪೀಡಿತ ಸುಡಾನ್‌ ಭೂಲೋಕದ ನರಕವಾಗಿ ಸೃಷ್ಟಿಯಾಗಿದೆ.

ಭ್ರಷ್ಟರ ಬೇಟೆ

Recent Posts

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಮತ್ತೊಂದು ಆರೋಪ: 2018 ರಿಂದ 2023 ರವರೆಗೆ ಮುಖ್ಯ ಶಿಕ್ಷಕಿಯ ಮೇಲೆ ಲೈಂಗಿಕ ದೌರ್ಜನ್ಯ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಭೀರ ಪ್ರಕರಣ ಬೆಳಕಿಗೆ ಬಂದಿದೆ. ಮೂಡಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆಗಿದ್ದ ಸಂದೇಶ್…

8 hours ago

ರಾಜ್ಯದಲ್ಲಿ ಪಾರ್ಲೆ-ಜಿ ಉತ್ಪಾದನೆ ಸ್ಥಗಿತ, ಬಿಸ್ಕೆಟ್ ಅಭಾವದ ಆತಂಕ

Iran-Israel ಸಂಘರ್ಷದ ಪರೋಕ್ಷ ಪರಿಣಾಮವಾಗಿ ರಾಜ್ಯದಲ್ಲಿ ಬಿಸ್ಕೆಟ್ ಅಭಾವದ ಭೀತಿ ಎದುರಾಗಿದೆ. ವಿಶೇಷವಾಗಿ ಮಕ್ಕಳಿಗೆ ಹೆಚ್ಚು ಬಳಸುವ Parle-G ಬಿಸ್ಕೆಟ್‌ಗಳ…

9 hours ago

ನವಲಗುಂದದಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ: ಮುಖ್ಯಶಿಕ್ಷಕ ಬಂಧನ

ಧಾರವಾಡ ಜಿಲ್ಲೆಯ Navalgund ತಾಲೂಕಿನ ಒಂದು ಗ್ರಾಮದಲ್ಲಿ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಶಾಲೆಯ ಮುಖ್ಯಶಿಕ್ಷಕನ ವಿರುದ್ಧ 10 ವರ್ಷದ…

21 hours ago

ಮೇಲಾಧಿಕಾರಿ ಕಿರುಕುಳ ಆರೋಪ: ಪಾವಗಡದಲ್ಲಿ ಸಮಾಜ ಕಲ್ಯಾಣ ಅಧಿಕಾರಿ ಆತ್ಮಹತ್ಯೆ

ತುಮಕೂರು ಜಿಲ್ಲೆಯ Pavagada ಪಟ್ಟಣದಲ್ಲಿ ಹೃದಯ ಕಲುಕುವ ಘಟನೆ ನಡೆದಿದೆ. ಮೇಲಾಧಿಕಾರಿಗಳ ಕಿರುಕುಳದಿಂದ ಮನನೊಂದು ಅಧಿಕಾರಿಯೊಬ್ಬರು ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು…

21 hours ago

14ರ ಬಾಲಕನಿಂದ ಇಬ್ಬರು ಅಪ್ರಾಪ್ತ ಬಾಲಕಿಯರು ಗರ್ಭಿಣಿ? ವೈರಲ್ ವಿಡಿಯೋಗೆ ಆಕ್ರೋಶ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ವಿಡಿಯೋ ಇದೀಗ ಭಾರೀ ಚರ್ಚೆಗೆ ಕಾರಣವಾಗಿದೆ. X ನಲ್ಲಿ ವೈರಲ್ ಆಗಿರುವ ಈ ವಿಡಿಯೋ…

21 hours ago

ಕೊನೆಗೂ 21 ದಿನಗಳ ಬಳಿಕ ಅಣುಸ್ಥಾವರದ ಮೇಲೆ ಅಮೆರಿಕ ದಾಳಿ! ಇರಾನ್ ಅಣು ಕೇಂದ್ರ ವಿಕಿರಣ ಸೋರಿಕೆ ಭೀತಿ ಹೆಚ್ಚಳ?

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರಿರುವ ಬೆನ್ನಲ್ಲೇ United States ಮತ್ತು Israel ಪಡೆಗಳು Iranನ ಅತ್ಯಂತ ಪ್ರಮುಖ ಪರಮಾಣು ಕೇಂದ್ರವಾದ Natanz…

21 hours ago