Latest

ಯೋಧರ ಜೊತೆ ಮಲಗಿದರೆ ಮಾತ್ರವೇ ಆದೇಶದ ಮಹಿಳೆಯರಿಗೆ ಆಹಾರ ಸಿಗುತ್ತಂತೆ!

ಅಲ್ಲಿನ ಮಹಿಳೆಯರು ತಮ್ಮ ಕುಟುಂಬಗಳಿಗೆ ಆಹಾರವನ್ನು ಪಡೆಯಲು ಸೈನಿಕರೊಂದಿಗೆ ಮಲಗಬೇಕು ಎಂದು ಒತ್ತಾಯಿಸಲಾಗುತ್ತಿದೆ. ಗಾರ್ಡಿಯನ್‌ನೊಂದಿಗೆ ಮಾತನಾಡಿದ ಮಹಿಳೆಯೊಬ್ಬರು, ಆಹಾರ ಸಂಗ್ರಹವಾಗಿರುವ ನಗರದಾದ್ಯಂತ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ ಎಂದು ಹೇಳಿದರು. “ನನ್ನ ಹೆತ್ತವರಿಬ್ಬರೂ ತುಂಬಾ ವಯಸ್ಸಾದವರು ಮತ್ತು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಇನ್ನು ನನ್ನ ಮಗಳನ್ನು ನಾನು ಆಹಾರಕ್ಕಾಗಿ ಹೊರಗೆ ಹೋಗಲು ಬಿಡಲಿಲ್ಲ. ನಾನು ಸೈನಿಕರ ಬಳಿಗೆ ಹೋದೆ, ಆಹಾರವನ್ನು ಪಡೆಯುವ ಏಕೈಕ ಮಾರ್ಗ ಅದೊಂದೇ ಆಗಿತ್ತು ಎಂದು ತಮ್ಮ ಸಂಕಷ್ಟವನ್ನು ವಿವರಿಸಿದ್ದಾರೆ.
ಕಳೆದ ವರ್ಷ ಏಪ್ರಿಲ್ 15 ರಂದು ಪ್ರಾರಂಭವಾದ ಸಂಘರ್ಷದ ಕೆಲವೇ ದಿನಗಳಲ್ಲಿ ಆಯುಧಗಳನ್ನು ಹೊಂದಿರುವ ಪುರುಷರು ಅತ್ಯಾಚಾರಗಳನ್ನು ಮಾಡುತ್ತಿದ್ದಾರೆ ಎಂದು ವರದಿಗಳಾಯಿತು. ಸುಡಾನ್‌ನಲ್ಲಿನ ಯುದ್ಧವು ಹತ್ತಾರು ಸಾವಿರ ಜನರನ್ನು ಬಲಿ ಪಡೆದಿದೆ. ಕೆಲವು ಅಂದಾಜಿನ ಪ್ರಕಾರ ಸಾವಿನ ಸಂಖ್ಯೆ 150,000 ವರೆಗೆ ಇದೆ. ಯುದ್ಧವು ವಿಶ್ವದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಸೃಷ್ಟಿಸಿದ್ದು, ದೇಶವನ್ನು ಬರಗಾಲದ ಅಂಚಿಗೆ ತಂದಿತು.
ಆರ್‌ಎಸ್‌ಎಫ್ ಯೋಧರು ತಮ್ಮ ನಿಯಂತ್ರಣದಲ್ಲಿರುವ ಪ್ರದೇಶಗಳಲ್ಲಿ ವ್ಯವಸ್ಥಿತ ರೀತಿಯಲ್ಲಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಭಯಾನಕ ಕಥೆಗಳನ್ನು ಹಂಚಿಕೊಳ್ಳಲು ಹಲವಾರು ಮಹಿಳೆಯರು ಮುಂದೆ ಬಂದಿದ್ದಾರೆ. ಸೈನಿಕರೊಂದಿಗೆ ಮಲಗಿದ ನಂತರ ಖಾಲಿ ಮನೆಗಳಿಂದ ಆಹಾರ, ಅಡುಗೆ ಸಲಕರಣೆಗಳು ಮತ್ತು ಸುಗಂಧ ದ್ರವ್ಯಗಳನ್ನು ತೆಗೆದುಕೊಳ್ಳಲು ಅನುಮತಿ ನೀಡಲಾಯಿತು ಎಂದು ಮಹಿಳೆಯೊಬ್ಬರು ಹೇಳಿದ್ದಾರೆ. “ನಾನು ಏನು ಅನುಭವಿಸಿದೆ ಎಂಬುದನ್ನು ಪದಗಳಲ್ಲಿ ಹೇಳಲು ಅಸಾಧ್ಯ, ನಾನು ಅದನ್ನು ನನ್ನ ಶತ್ರುಗಳಿಗೂ ಬಯಸುವುದಿಲ್ಲ,. ನನ್ನ ಮಕ್ಕಳಿಗೆ ಆಹಾರವನ್ನು ನೀಡಲು ನಾನು ಅದನ್ನು ಮಾಡಿದ್ದೇನೆ” ಎಂದು ಅವರು ಹೇಳಿದರು.
ಯುದ್ಧ ಪೀಡಿತ ಸುಡಾನ್‌ ಭೂಲೋಕದ ನರಕವಾಗಿ ಸೃಷ್ಟಿಯಾಗಿದೆ.

ಭ್ರಷ್ಟರ ಬೇಟೆ

Recent Posts

ಯುವತಿ ಅತ್ಯಾಚಾರ, ಕೊಲೆ ಪ್ರಕರಣ: ಕರ್ತವ್ಯಲೋಪ ಆರೋಪದಲ್ಲಿ 4 ಪೊಲೀಸ್ ಪೇದೆಗಳು ಅಮಾನತು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ 21 ವರ್ಷದ ಯುವತಿ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ…

23 hours ago

KSRTC ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ: ಚಪ್ಪಲಿಯಿಂದ ಯುವಕನಿಗೆ ಧರ್ಮದೇಟು, ಕ್ಷಮೆಯಾಚನೆ

ಹಾಸನ: ಹಾಸನದಿಂದ ಬೆಂಗಳೂರಿನತ್ತ ತೆರಳುತ್ತಿದ್ದ KSRTC ಬಸ್‌ನಲ್ಲಿ ಯುವತಿಯೊಬ್ಬರಿಗೆ ಸಹ ಪ್ರಯಾಣಿಕನೊಬ್ಬ ಅನುಚಿತವಾಗಿ ವರ್ತಿಸಿದ ಆರೋಪ ಕೇಳಿಬಂದಿದ್ದು, ಇದರಿಂದ ಬಸ್‌ನಲ್ಲಿ…

23 hours ago

MBBS ಓದಲು ರಷ್ಯಾಗೆ ಹೋದ ಯುವಕನಿಗೆ ಪ್ರೊಫೆಸರ್ ಜೊತೆ ಪ್ರೀತಿ; ಮದುವೆ ಬಳಿಕ ಕ್ಲಿನಿಕ್ ಆರಂಭಿಸಿ ಲಕ್ಷಾಂತರ ಸಂಪಾದನೆ!

ಉನ್ನತ ವ್ಯಾಸಂಗದ ಕನಸು ಹೊತ್ತು ವಿದೇಶಕ್ಕೆ ತೆರಳಿದ್ದ ಉತ್ತರ ಪ್ರದೇಶದ ಯುವಕನ ಜೀವನ ಇದೀಗ ಸಂಪೂರ್ಣ ಬದಲಾಗಿದೆ. ಎಂಬಿಬಿಎಸ್ ಓದಲು…

23 hours ago

ಶಾಲಾ ಬಾಲಕಿಯರನ್ನು ಪ್ರೇಮದ ಬಲೆಗೆ ಬೀಳಿಸಿ ಹಣ ಸಂಪಾದನೆ ಆರೋಪ: ದೆಹಲಿಯಲ್ಲಿ 24 ವರ್ಷದ ಯುವಕ ಬಂಧನ

ದೆಹಲಿಯ ಉತ್ತಮ್ ನಗರದಲ್ಲಿ 24 ವರ್ಷದ ಯುವಕನೊಬ್ಬನನ್ನು ಸ್ಥಳೀಯ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ, ಆತನ ಮೊಬೈಲ್‌ನಲ್ಲಿ ಪತ್ತೆಯಾದ…

23 hours ago

ಕಿತ್ತೂರು ಪೊಲೀಸರ ಭರ್ಜರಿ ಕಾರ್ಯಾಚರಣೆ: ಆಭರಣ ಕಳ್ಳತನ ಪ್ರಕರಣ ಭೇದಿಸಿ 5 ಅಂತರರಾಜ್ಯ ಕಳ್ಳರ ಬಂಧನ

ಕಿತ್ತೂರು: ಚನ್ನಮ್ಮನ ಕಿತ್ತೂರಿನಲ್ಲಿ ನಡೆದ ಆಭರಣ ಅಂಗಡಿ ಕಳ್ಳತನ ಪ್ರಕರಣವನ್ನು ಕಿತ್ತೂರು ಪೊಲೀಸರು ಭೇದಿಸಿದ್ದು, ರಾಜಸ್ಥಾನ ಮೂಲದ ನಾಲ್ವರು ಹಾಗೂ…

23 hours ago

ಬೆಳಗಾವಿಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆ ಅನುಷ್ಠಾನದ ಮೌಲ್ಯಮಾಪನ: ಸಂತ್ರಸ್ತರೊಂದಿಗೆ ಗುಂಪು ಚರ್ಚೆ

ಬೆಳಗಾವಿ:ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯಿದೆ ಅನುಷ್ಠಾನದ ಕುರಿತು ನೈರುತ್ಯ ಆರ್ಟ ಮೀಡಿಯಾ ಸಂಸ್ಥೆ (ಬೆಂಗಳೂರು)…

23 hours ago