ಬೆಂಗಳೂರು ನಗರದಲ್ಲಿ ಪಿಜಿ ಮುಂದೆ ಮದ್ಯಪಾನ ಮಾಡುತ್ತಿದ್ದವರನ್ನು ಪ್ರಶ್ನಿಸಿದ್ದ ಕಾರಣಕ್ಕೆ ಪಿಜಿ ಮಾಲೀಕನೊಬ್ಬ ಹತ್ಯೆಯಾಗಿರುವ ದುರ್ಘಟನೆ ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಸ್ತೂರಿಬಾ ನಗರದಲ್ಲಿ ಪಿಜಿ ನಡೆಸುತ್ತಿದ್ದ ಮಾಧವ್ ಮೆಟ್ಲಿ (40) ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ.
ಮಾಹಿತಿಯ ಪ್ರಕಾರ, ಪಿಜಿ ಮುಂದೆ ಇಬ್ಬರು ವ್ಯಕ್ತಿಗಳು ಮದ್ಯಪಾನ ಮಾಡುತ್ತಾ ಜೋರಾಗಿ ಮಾತನಾಡುತ್ತಿದ್ದರು. ಇದನ್ನು ಗಮನಿಸಿದ ಮಾಧವ್, ಅಲ್ಲಿಂದ ತೆರಳುವಂತೆ ಹೇಳಿ ಪ್ರಶ್ನಿಸಿದ್ದರು ಎನ್ನಲಾಗಿದೆ.
ಈ ವಿಚಾರಕ್ಕೆ ಸಂಬಂಧಿಸಿ ಎರಡೂ ಪಕ್ಷಗಳ ನಡುವೆ ವಾಗ್ವಾದ ಉಂಟಾಗಿದೆ. ಈ ವೇಳೆ ಕೈಯಲ್ಲಿ ಬ್ಯಾಟ್ ಹಿಡಿದುಕೊಂಡು ಬಂದಿದ್ದ ಮಾಧವ್ ಹಾಗೂ ಆರೋಪಿಗಳ ನಡುವೆ ಗಲಾಟೆ ತೀವ್ರಗೊಂಡಿದೆ.
ಬಳಿಕ ಆರೋಪಿಗಳು ಬ್ಯಾಟ್ ಕಸಿದುಕೊಂಡು ಮಾಧವ್ ಮೇಲೆಯೇ ಹಲ್ಲೆ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡಿದ್ದ ಮಾಧವ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಘಟನೆ ಸಂಬಂಧ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…