ಸಕ್ಕರೆನಾಡು ಮಂಡ್ಯದಲ್ಲಿ ಪ್ರೇಮ ವಿವಾಹಕ್ಕೆ ಸಹಕಾರ ನೀಡದ ಕಾರಣ ಸ್ನೇಹಿತರನ್ನೇ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೆರಗೊಡು ಪೊಲೀಸರು ದೂರು ದಾಖಲಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಘಟನೆ ವಿವರ
ಮಂಡ್ಯದ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಅಂಕನಹಳ್ಳಿ ಗ್ರಾಮದಲ್ಲಿ, ಬಸವನ ಜಾತ್ರೆಯಲ್ಲಿ ಇದ್ದ ಸ್ನೇಹಿತರನ್ನು ಅಡ್ಡಗಟ್ಟಿ, ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಕಿರಣ್ ಎಂಬ ಯುವಕನ ಎರಡು ಬೆರಳುಗಳು ತುಂಡಾಗಿದ್ದು, ಮತ್ತೋರ್ವ ದರ್ಶನ್ (23) ಸ್ಥಿತಿ ಚಿಂತಾಜನಕವಾಗಿದೆ.
ಪ್ರೇಮ ವಿವಾಹದ ಹಿನ್ನೆಲೆ
ಮಂಡ್ಯದ ಬಸರಾಳು ಹೊಬಳಿ ದೊಡ್ಡಗರುಡನಹಳ್ಳಿ ಗ್ರಾಮದ ಅಪ್ಪುರಾಜ್ ಎಂಬಾತ ಬಿಳಿದೇಗಲು ಗ್ರಾಮದ ಯುವತಿಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ. ಈ ಸಂಬಂಧ, ಆತನ ಸ್ನೇಹಿತರು ಕಿರಣ್ ಮತ್ತು ದರ್ಶನ್ ಈ ವಿವಾಹಕ್ಕೆ ಸಹಕಾರ ನೀಡಿಲ್ಲ ಎಂಬ ಕಾರಣಕ್ಕಾಗಿ ಹಲ್ಲೆಗೆ ಗುರಿಯಾಗಿದ್ದಾರೆ.
ಆರೋಪಿಗಳು ಮತ್ತು ಕ್ರಮ
ಆರೋಪಿತರಾದ ಯಶವಂತ, ಧ್ರುವ, ದಿಲೀಪ್, ನಿರಂಜನ್, ಆಕಾಶ್, ಅಪ್ಪುರಾಜ್ ಮತ್ತು ದೀಕ್ಷಿತ್ ಸೇರಿ ಆರು ಜನರು, ಕಿರಣ್ ಹಾಗೂ ದರ್ಶನ್ ಅವರನ್ನು ಶುಕ್ರವಾರ ತಡರಾತ್ರಿ ಅಂಕನಹಳ್ಳಿಯಿಂದ ಕಿಡ್ನಾಪ್ ಮಾಡಿ ಹಲ್ಲೇಗೆರೆ ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಪೊಲೀಸರ ಕಾರ್ಯಾಚರಣೆ
ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯರ ಮಧ್ಯೆ ಆತಂಕ ಮೂಡಿಸಿದ್ದು, ಹಲ್ಲೆಗಾರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವ್ಯಕ್ತವಾಗಿದೆ.
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…
ಗೌರಿಬಿದನೂರು ನಗರದ ಶ್ರೀನಗರ ಬಡಾವಣೆಯ ನಿವಾಸಿ ಚಂದ್ರಲೀಲಾ ಎಂಬುವವರು ಹಾಲು ತರಲು ಹೋಗುತ್ತಿದ್ದ ಸಮಯದಲ್ಲಿ ಎದುರುಗಡೆಯಿಂದ ಹೆಲ್ಮೆಟ್ ಧರಿಸಿ ಪಲ್ಸರ್…