Crime

ಪ್ರೇಮ ವಿವಾಹಕ್ಕೆ ವಿರೋಧ: ಸ್ನೇಹಿತರಿಗೆ ಗ್ಯಾಂಗ್‌ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ.

ಸಕ್ಕರೆನಾಡು ಮಂಡ್ಯದಲ್ಲಿ ಪ್ರೇಮ ವಿವಾಹಕ್ಕೆ ಸಹಕಾರ ನೀಡದ ಕಾರಣ ಸ್ನೇಹಿತರನ್ನೇ ಕಿಡ್ನಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ಕೆರಗೊಡು ಪೊಲೀಸರು ದೂರು ದಾಖಲಿಸಿ ಆರೋಪಿಗಳ ಪತ್ತೆಗೆ ಕ್ರಮ ಕೈಗೊಳ್ಳುತ್ತಿದ್ದಾರೆ.
ಘಟನೆ ವಿವರ
ಮಂಡ್ಯದ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಅಂಕನಹಳ್ಳಿ ಗ್ರಾಮದಲ್ಲಿ, ಬಸವನ ಜಾತ್ರೆಯಲ್ಲಿ ಇದ್ದ ಸ್ನೇಹಿತರನ್ನು ಅಡ್ಡಗಟ್ಟಿ, ಕಿಡ್ನಾಪ್ ಮಾಡಿ ಹಲ್ಲೆ ನಡೆಸಲಾಗಿದೆ. ಹಲ್ಲೆಯಿಂದ ಕಿರಣ್ ಎಂಬ ಯುವಕನ ಎರಡು ಬೆರಳುಗಳು ತುಂಡಾಗಿದ್ದು, ಮತ್ತೋರ್ವ ದರ್ಶನ್‌ (23) ಸ್ಥಿತಿ ಚಿಂತಾಜನಕವಾಗಿದೆ.
ಪ್ರೇಮ ವಿವಾಹದ ಹಿನ್ನೆಲೆ
ಮಂಡ್ಯದ ಬಸರಾಳು ಹೊಬಳಿ ದೊಡ್ಡಗರುಡನಹಳ್ಳಿ ಗ್ರಾಮದ ಅಪ್ಪುರಾಜ್ ಎಂಬಾತ ಬಿಳಿದೇಗಲು ಗ್ರಾಮದ ಯುವತಿಯೊಂದಿಗೆ ಪ್ರೀತಿಸಿ ಮದುವೆಯಾಗಿದ್ದ. ಈ ಸಂಬಂಧ, ಆತನ ಸ್ನೇಹಿತರು ಕಿರಣ್ ಮತ್ತು ದರ್ಶನ್ ಈ ವಿವಾಹಕ್ಕೆ ಸಹಕಾರ ನೀಡಿಲ್ಲ ಎಂಬ ಕಾರಣಕ್ಕಾಗಿ ಹಲ್ಲೆಗೆ ಗುರಿಯಾಗಿದ್ದಾರೆ.
ಆರೋಪಿಗಳು ಮತ್ತು ಕ್ರಮ
ಆರೋಪಿತರಾದ ಯಶವಂತ, ಧ್ರುವ, ದಿಲೀಪ್, ನಿರಂಜನ್, ಆಕಾಶ್, ಅಪ್ಪುರಾಜ್ ಮತ್ತು ದೀಕ್ಷಿತ್ ಸೇರಿ ಆರು ಜನರು, ಕಿರಣ್ ಹಾಗೂ ದರ್ಶನ್ ಅವರನ್ನು ಶುಕ್ರವಾರ ತಡರಾತ್ರಿ ಅಂಕನಹಳ್ಳಿಯಿಂದ ಕಿಡ್ನಾಪ್ ಮಾಡಿ ಹಲ್ಲೇಗೆರೆ ಸಮೀಪ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಪೊಲೀಸರ ಕಾರ್ಯಾಚರಣೆ
ಪೊಲೀಸರು ಆರೋಪಿಗಳನ್ನು ಪತ್ತೆಹಚ್ಚಲು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಈ ಘಟನೆ ಸ್ಥಳೀಯರ ಮಧ್ಯೆ ಆತಂಕ ಮೂಡಿಸಿದ್ದು, ಹಲ್ಲೆಗಾರರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯ ವ್ಯಕ್ತವಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

15 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

15 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

16 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

16 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

16 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago