ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಗಳಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಕಿದಾರಗಳನ್ನು ಕಿತ್ತು ಹಾಕುವಂತೆ ಅಧಿಕಾರಿಗಳು ಸೂಚಿಸಿದ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆಯೆ. ಈ ಘಟನೆಯಿಂದ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಪರೀಕ್ಷಾ ಕೇಂದ್ರಗಳಿಗೆ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳಿಗೆ, ಗಾಯತ್ರಿ ದಾರ ಹಾಗೂ ಕೈಯಲ್ಲಿದ್ದ ಪವಿತ್ರ ಧಾರೆಯನ್ನು ತೆಗೆದು ಹಾಕುವಂತೆ ಕೇಳಲಾಗಿದೆ ಎಂಬುದಾಗಿ ಪೋಷಕರು ಆರೋಪಿಸಿದ್ದಾರೆ. ಈ ವೇಳೆ ಕೆಲವೊಂದು ಕೇಂದ್ರಗಳಲ್ಲಿ ಜನಿವಾರವನ್ನು ಬಲವಂತವಾಗಿ ತೆಗೆದು ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಘಟನೆಗೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬ್ರಾಹ್ಮಣ ಸಂಘಟನೆಗಳು, ಸ್ಥಳಕ್ಕೆ ದೌಡಾಯಿಸಿ ಅಧಿಕಾರಿಗಳ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದವು. “ಬೇರೆ ಸಮುದಾಯದವರ ಧಾರ್ಮಿಕ ಚಿಹ್ನೆಗಳ ಬಗ್ಗೆ ಇಂಥ ಕ್ರಮ ಕೈಗೊಂಡಿರುವುದಿಲ್ಲ, ಬ್ರಾಹ್ಮಣರ ಬಗ್ಗೆ ಮಾತ್ರ ಈ ತಾರತಮ್ಯ ಏಕೆ?” ಎಂದು ಸಂಘಟನೆಗಳ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಹಾಗೂ ಬೀದರ್ನಲ್ಲಿನ ಸಂಘಟನೆಗಳು ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ದೂರುಗಳ ಹಿನ್ನೆಲೆ ವರದಿ ಸಂಗ್ರಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇದೊಂದು ಧಾರ್ಮಿಕ ನಂಬಿಕೆಗಳನ್ನು ತುಳಿಯುವ ಅನಾವಶ್ಯಕ ಕ್ರಮವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಸಂವೇದನಾಶೀಲತೆ ಅಗತ್ಯವೆಂಬ ಚರ್ಚೆ ಇದೀಗ ಸಾಮಾಜಿಕ ವಲಯದಲ್ಲಿ ಜೋರಾಗಿದೆ.
ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…
ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…
ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…
ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…
ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…
ಗೌರಿಬಿದನೂರು: ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…