Latest

ಸಿಇಟಿ ಪರೀಕ್ಷೆ ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಕಿತ್ತು ಹಾಕಿದ ಘಟನೆ: ಶಿವಮೊಗ್ಗ, ಬೀದರ್ ನಲ್ಲಿ ಆಕ್ರೋಶ

ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಗಳಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಕಿದಾರಗಳನ್ನು ಕಿತ್ತು ಹಾಕುವಂತೆ ಅಧಿಕಾರಿಗಳು ಸೂಚಿಸಿದ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆಯೆ. ಈ ಘಟನೆಯಿಂದ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.

ಪರೀಕ್ಷಾ ಕೇಂದ್ರಗಳಿಗೆ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳಿಗೆ, ಗಾಯತ್ರಿ ದಾರ ಹಾಗೂ ಕೈಯಲ್ಲಿದ್ದ ಪವಿತ್ರ ಧಾರೆಯನ್ನು ತೆಗೆದು ಹಾಕುವಂತೆ ಕೇಳಲಾಗಿದೆ ಎಂಬುದಾಗಿ ಪೋಷಕರು ಆರೋಪಿಸಿದ್ದಾರೆ. ಈ ವೇಳೆ ಕೆಲವೊಂದು ಕೇಂದ್ರಗಳಲ್ಲಿ ಜನಿವಾರವನ್ನು ಬಲವಂತವಾಗಿ ತೆಗೆದು ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.

ಈ ಘಟನೆಗೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬ್ರಾಹ್ಮಣ ಸಂಘಟನೆಗಳು, ಸ್ಥಳಕ್ಕೆ ದೌಡಾಯಿಸಿ ಅಧಿಕಾರಿಗಳ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದವು. “ಬೇರೆ ಸಮುದಾಯದವರ ಧಾರ್ಮಿಕ ಚಿಹ್ನೆಗಳ ಬಗ್ಗೆ ಇಂಥ ಕ್ರಮ ಕೈಗೊಂಡಿರುವುದಿಲ್ಲ, ಬ್ರಾಹ್ಮಣರ ಬಗ್ಗೆ ಮಾತ್ರ ಈ ತಾರತಮ್ಯ ಏಕೆ?” ಎಂದು ಸಂಘಟನೆಗಳ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.

ಶಿವಮೊಗ್ಗ ಹಾಗೂ ಬೀದರ್‌ನಲ್ಲಿನ ಸಂಘಟನೆಗಳು ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ದೂರುಗಳ ಹಿನ್ನೆಲೆ ವರದಿ ಸಂಗ್ರಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಇದೊಂದು ಧಾರ್ಮಿಕ ನಂಬಿಕೆಗಳನ್ನು ತುಳಿಯುವ ಅನಾವಶ್ಯಕ ಕ್ರಮವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಸಂವೇದನಾಶೀಲತೆ ಅಗತ್ಯವೆಂಬ ಚರ್ಚೆ ಇದೀಗ ಸಾಮಾಜಿಕ ವಲಯದಲ್ಲಿ ಜೋರಾಗಿದೆ.

nazeer ahamad

Recent Posts

ಮೈಸೂರು ರಾಜೀವ್ ನಗರದಲ್ಲಿ ಕುಟುಂಬ ಕಲಹ ತೀವ್ರಗೆಡೆದು ಯುವಕನಿಗೆ ಚಾಕು ಇರಿತ: ಆರೋಪಿ ಅಫ್ರೀದಿ ಬಂಧನ

ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…

8 hours ago

ಖಾಲಿ ಮನೆ ಟಾರ್ಗೆಟ್: ಪೆಪ್ಸಿ ರಘು ಗ್ಯಾಂಗದಿಂದ 24 ಲಕ್ಷ ಕಳ್ಳತನ, ಮೂವರು ಅರೆಸ್ಟ್

ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…

8 hours ago

ಲಂಚ ಸ್ವೀಕರಿಸುತ್ತಿದ್ದ ಪಂ.ರಾಜ್ ಇಂಜಿನಿಯರಿಂಗ್ ಅಧಿಕಾರಿ ಬಂಧನ: ಲೋಕಾಯುಕ್ತದ ದಾಳಿ ಸೊರಬದಲ್ಲಿ

ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…

8 hours ago

ಚನ್ನಪೇಟೆಯಲ್ಲಿ ಹಾವು ಕಚ್ಚಿದ ವ್ಯಕ್ತಿ ಸಾವು: ಮೂತ್ರ ವಿಸರ್ಜನೆ ವೇಳೆ ದುರ್ಘಟನೆ

ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…

8 hours ago

ಹಾನಗಲ್ ಸಿಪಿಐ ಅಮಾನತುa: ಪ್ರಭಾವಿಯ ಲೋಕೇಷನ್ ಬಯಲು ಮಾಡಿದ್ದ ಆರೋಪ

ಹಾವೇರಿ: ಹಾನಗಲ್ ಸರ್ಕಲ್ ಇನ್‌ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್‌.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…

8 hours ago

ಮದ್ಯಪಾನ ಮಾಡಿ ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ಚಾಲಕರ ವಿರುದ್ಧ ಕ್ರಮ: ಬೆಂಗಳೂರು ಸಂಚಾರ ಪೊಲೀಸರ ದಾಳಿ

ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…

1 day ago