ಶಿವಮೊಗ್ಗ ಹಾಗೂ ಬೀದರ್ ಜಿಲ್ಲೆಗಳಲ್ಲಿ ನಡೆದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳೆ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ಮತ್ತು ಕಾಕಿದಾರಗಳನ್ನು ಕಿತ್ತು ಹಾಕುವಂತೆ ಅಧಿಕಾರಿಗಳು ಸೂಚಿಸಿದ ಘಟನೆ ಭಾರಿ ವಿವಾದಕ್ಕೆ ಕಾರಣವಾಗಿದೆಯೆ. ಈ ಘಟನೆಯಿಂದ ಬ್ರಾಹ್ಮಣ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಪರೀಕ್ಷಾ ಕೇಂದ್ರಗಳಿಗೆ ಜನಿವಾರ ಧರಿಸಿ ಬಂದ ವಿದ್ಯಾರ್ಥಿಗಳಿಗೆ, ಗಾಯತ್ರಿ ದಾರ ಹಾಗೂ ಕೈಯಲ್ಲಿದ್ದ ಪವಿತ್ರ ಧಾರೆಯನ್ನು ತೆಗೆದು ಹಾಕುವಂತೆ ಕೇಳಲಾಗಿದೆ ಎಂಬುದಾಗಿ ಪೋಷಕರು ಆರೋಪಿಸಿದ್ದಾರೆ. ಈ ವೇಳೆ ಕೆಲವೊಂದು ಕೇಂದ್ರಗಳಲ್ಲಿ ಜನಿವಾರವನ್ನು ಬಲವಂತವಾಗಿ ತೆಗೆದು ಹಾಕಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಈ ಘಟನೆಗೆ ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿರುವ ಬ್ರಾಹ್ಮಣ ಸಂಘಟನೆಗಳು, ಸ್ಥಳಕ್ಕೆ ದೌಡಾಯಿಸಿ ಅಧಿಕಾರಿಗಳ ವಿರುದ್ಧ ಗಂಭೀರ ಆಕ್ರೋಶ ವ್ಯಕ್ತಪಡಿಸಿದ್ದವು. “ಬೇರೆ ಸಮುದಾಯದವರ ಧಾರ್ಮಿಕ ಚಿಹ್ನೆಗಳ ಬಗ್ಗೆ ಇಂಥ ಕ್ರಮ ಕೈಗೊಂಡಿರುವುದಿಲ್ಲ, ಬ್ರಾಹ್ಮಣರ ಬಗ್ಗೆ ಮಾತ್ರ ಈ ತಾರತಮ್ಯ ಏಕೆ?” ಎಂದು ಸಂಘಟನೆಗಳ ಪ್ರತಿನಿಧಿಗಳು ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಹಾಗೂ ಬೀದರ್ನಲ್ಲಿನ ಸಂಘಟನೆಗಳು ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಗಳಲ್ಲಿ ದೂರು ದಾಖಲಿಸಿರುವುದಾಗಿ ತಿಳಿದುಬಂದಿದೆ. ಘಟನೆ ಸಂಬಂಧ ಕೆಇಎ (ಕರ್ನಾಟಕ ಪರೀಕ್ಷಾ ಪ್ರಾಧಿಕಾರ) ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು, ದೂರುಗಳ ಹಿನ್ನೆಲೆ ವರದಿ ಸಂಗ್ರಹಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಇದೊಂದು ಧಾರ್ಮಿಕ ನಂಬಿಕೆಗಳನ್ನು ತುಳಿಯುವ ಅನಾವಶ್ಯಕ ಕ್ರಮವಾಗಿದ್ದು, ಶಿಕ್ಷಣ ಸಂಸ್ಥೆಗಳಲ್ಲಿ ಸಂವೇದನಾಶೀಲತೆ ಅಗತ್ಯವೆಂಬ ಚರ್ಚೆ ಇದೀಗ ಸಾಮಾಜಿಕ ವಲಯದಲ್ಲಿ ಜೋರಾಗಿದೆ.
ಬೆಂಗಳೂರು: ಬಿಡದಿ ಟೌನ್ಶಿಪ್ ಯೋಜನೆಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವ್ಯಕ್ತಪಡಿಸುತ್ತಿರುವ ವಿರೋಧ ರಾಜಕೀಯ ಪ್ರೇರಿತವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಬಳ್ಳಾರಿ: ಆದಾಯಕ್ಕಿಂತ ಅಧಿಕ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ಆರ್ಡಿಪಿಆರ್) ಇಲಾಖೆಯ ಸಹಾಯಕ…
ಬೆಳಗಾವಿ: ಅಬಕಾರಿ ಇಲಾಖೆಯ ಹೆಚ್ಚುವರಿ ಆಯುಕ್ತ ವೈ. ಮಂಜುನಾಥ್ ಅವರ ನಿವಾಸ ಸೇರಿದಂತೆ ರಾಜ್ಯದ ವಿವಿಧ ಆರು ಸ್ಥಳಗಳಲ್ಲಿ ಜಾರಿ…
ಪುಣೆಯಲ್ಲಿ ನಡೆದ ಭೀಕರ ಘಟನೆ ಒಂದು ದೇಶವನ್ನೇ ಬೆಚ್ಚಿಬೀಳಿಸಿದೆ. ಮದುವೆಗೆ ಸಕಲ ಸಿದ್ಧತೆಗಳು ನಡೆಯುತ್ತಿದ್ದ ಸಂದರ್ಭದಲ್ಲಿ, ತನ್ನನ್ನು ಮದುವೆಯಾಗಬೇಕಿದ್ದ ಯುವಕನನ್ನೇ…
ಬೆಂಗಳೂರು ನಗರವನ್ನು ಬೆಚ್ಚಿಬೀಳಿಸುವಂತ ದಾರುಣ ಘಟನೆ ಪೂರ್ವ ಭಾಗದ ಕೆ.ಆರ್.ಪುರಂ ಪೊಲೀಸ್ ಠಾಣಾ ವ್ಯಾಪ್ತಿಯ ಸೀಗೇಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಲಿವ್-ಇನ್…
ಆನೇಕಲ್ನಲ್ಲಿ ಸಿನಿಮಾವನ್ನು ನೆನಪಿಸುವ ರೀತಿಯಲ್ಲಿ ನಡೆದ ಲಾರಿ ದರೋಡೆ ಪ್ರಕರಣವನ್ನು ಸೂರ್ಯನಗರ ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಮೂವರು…