Latest

ನಡು ರಸ್ತೆಯಲ್ಲಿ ಅಬ್ಬರ: ಕಾರು ಟಚ್ ಗೊಂಡ ಕಾರಣಕ್ಕೆ ಮಚ್ಚು ಹಿಡಿದು ಹಲ್ಲೆಗೆ ಯತ್ನ

ಬೆಂಗಳೂರು, ಜುಲೈ 07: ನಗರದಲ್ಲಿ ಟ್ರಾಫಿಕ್ ಗದ್ದುಗೆ ನಡುವೆ ಛಿಕ್ಕೊ ಚಿಕ್ಕ ದುರಂತವು ದೊಡ್ಡ ಘಟನೆಗೆ ರೂಪಾಂತರಗೊಂಡಿರುವ ಘಟನೆ ಶೇಷಾದ್ರಿಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕಾರು ಟಚ್ ಆದ ಕಾರಣಕ್ಕೆ ಓರ್ವ ಚಾಲಕ ನಡು ರಸ್ತೆಯಲ್ಲೇ ಮತ್ತೊಬ್ಬ ಚಾಲಕನ ಮೇಲೆ ಮಚ್ಚಿನಿಂದ ಹಲ್ಲೆ ಯತ್ನಿಸಿದ ಅಪಾಯಕಾರಿ ಘಟನೆಯು ನಗರದ ಸಂಚಲನ ಮೂಡಿಸಿದೆ.

ಮಧ್ಯಾಹ್ನ ಸುಮಾರು 1:40ರ ಸುಮಾರಿಗೆ ಶೇಷಾದ್ರಿಪುರಂನ ರೈಲ್ವೆ ಗೇಟ್ ಹಿಂಭಾಗದಲ್ಲಿ ಇಟಿಯೋಸ್ ಮತ್ತು ಇನ್ನೋವಾ ಕಾರುಗಳು ಪರಸ್ಪರ ತಾಗಿಕೊಂಡವು. ಈ ಸಣ್ಣ ಘಟನೆಗೆ ತೀವ್ರ ಕೋಪಗೊಂಡ ಇನ್ನೋವಾ ಚಾಲಕ, ಕಾರಿನಲ್ಲಿ ಇಟ್ಟಿದ್ದ ಮಚ್ಚು ತೆಗೆದು ಇಟಿಯೋಸ್ ಚಾಲಕನ ಮೇಲೆ ದಾಳಿ ಮಾಡಲು ಮುಂದಾದನು.

ಹಲ್ಲೆ ನಡೆಯುವ ಸಂದರ್ಭದಲ್ಲಿಯೇ ಇಟಿಯೋಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಪ್ಲಾಯಿಗಳಿಗೂ ಅವನು ಹಲ್ಲೆ ಮಾಡಲು ಯತ್ನಿಸಿದ ಎನ್ನಲಾಗಿದೆ. ಮಾತನಾಡಿದ ಮಾತುಗಳು ಗಲಾಟೆಗೆ ಬದಲಾಗಿ, ಮತ್ತಷ್ಟು ಉದ್ರಿಕ್ತಗೊಂಡ ಇನ್ನೋವಾ ಚಾಲಕ ಮಚ್ಚು ಹಿಡಿದು ಇಟಿಯೋಸ್ ಚಾಲಕನ ಗಂಟಲಿಗೆ ಇಡಲು ಮುಂದಾಗಿದ್ದಾನೆ ಎನ್ನಲಾಗಿದೆ.

ಸಮೀಪದ ಸಾರ್ವಜನಿಕರು ಕೂಡಲೇ ಮಧ್ಯ ಪ್ರವೇಶ ಮಾಡಿ ಆರೋಪಿಯನ್ನು ತಡೆದು, ಪೊಲೀಸರು ಸಂಪರ್ಕಿಸಲು ಯತ್ನಿಸಿದರು. ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಆರೋಪಿಯ ಕಾರಿನ ಮೇಲೆ ಕೆಲವರು ಕಲ್ಲು ಎಸೆದು ತಡೆಯುವ ಪ್ರಯತ್ನ ಮಾಡಿದರು. ಈ ಘಳಿಗೆಯಲ್ಲಿ ಆತ ತನ್ನ ಇನ್ನೋವಾ ಕಾರು ಬಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಘಟನೆ ಸಂಬಂಧವಾಗಿ ಹಲ್ಲೆಗೊಳಗಾದ ಇಟಿಯೋಸ್ ಕಾರು ಚಾಲಕ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾನೆ. ಪೊಲೀಸರು ಈಗಾಗಲೇ ಆರೋಪಿಯ ಗುರುತು ಪತ್ತೆ ಹಚ್ಚಿ, ಬಂಧನದ ಪ್ರಕ್ರಿಯೆ ಮುಂದುವರೆಸಿದ್ದಾರೆ.

 

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

4 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

3 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

1 month ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

2 months ago