ಬೆಂಗಳೂರು ಮೆಟ್ರೋದಲ್ಲಿ ನಡೆದಿರುವ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ಜಾಗದಲ್ಲಿ ಸ್ವಚ್ಛತೆಯ ಅಗತ್ಯತೆ ಬಗ್ಗೆ ಮತ್ತೆ ಒಂದು ಬಾರಿ ಚರ್ಚೆಗೆ ಕಾರಣವಾಗಿದೆ.
ಘಟನೆ ವಿವರಕ್ಕೆ ಬಂದರೆ, ಒಬ್ಬ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಗುಟ್ಕಾ ತಿನ್ನುತ್ತಿದ್ದನ್ನು ಗಮನಿಸಿದ ಇತರ ಪ್ರಯಾಣಿಕರು ತೀವ್ರವಾಗಿ ಪ್ರತಿಸ್ಪಂದಿಸಿದರು. “ನಿಮಗೆ ಕಾಮನ್ ಸೆನ್ಸ್ ಇಲ್ಲವೇ?” ಎಂಬ ತೀವ್ರ ಶಬ್ಧಗಳಲ್ಲಿ ಆ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. “ಗುಟ್ಕಾ ತಿಂದು ಹೊರೆಸುವುದನ್ನು ನಿಲ್ಲಿಸಿ. ಇದು ನಮ್ಮೆಲ್ಲರ ಆಸ್ತಿ. ಇನ್ನು ಮುಂದೆ ಇಂಥ ವರ್ತನೆ ತೋರಬೇಡಿ,” ಎಂದು ಒಬ್ಬ ಪ್ರಯಾಣಿಕನೋರ್ವ ಸ್ಪಷ್ಟವಾಗಿ ಕ್ಲಾಸ್ ತೆಗೆದುಕೊಂಡ ದೃಶ್ಯ ಕ್ಯಾಮೆರಾಗೆ ಸಿಕ್ಕಿದೆ.
ಆದರೆ ಗುಟ್ಕಾ ತಿಂದ ವ್ಯಕ್ತಿ ಬಿಟ್ಟುಕೊಡುವ ಬದಲು, “ನಂಗೂ ಈ ಮೆಟ್ರೋ ಆಸ್ತಿಯಲ್ಲಿದ್ದೇನೆ. ನಾನೇನು ತಪ್ಪು ಮಾಡ್ಲಿಲ್ಲ” ಎಂಬ ಅಹಂಕಾರಪೂರ್ಣ ಭಾವದಿಂದ ತಿರುಗೇಟು ಕೊಟ್ಟ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಇದೊಂದು ದಿಕ್ಕುತೋರಿಸುವ ಸಂಗತಿಯಾಗಿದೆ.
ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಹಲವರು ಸಾರ್ವಜನಿಕ ಸ್ವಚ್ಛತೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
ಈ ಘಟನೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, “ಮೆಟ್ರೋ ಎಲ್ಲರ ಆಸ್ತಿ. ಅದರ ಸ್ವಚ್ಛತೆ ನಮ್ಮ ಜವಾಬ್ದಾರಿ. ಗುಟ್ಕಾ ತಿನ್ನುವುದು, ಎಸೆಯುವುದು ಅಮಾನ್ಯ. ಬಿಎಂಆರ್ಸಿಎಲ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.
ಈ ಪ್ರಕರಣ ಸಾರ್ವಜನಿಕ ಜಾಗದಲ್ಲಿ ನಡವಳಿಕೆಯ ಕುರಿತು ಪಾಠ ಕಲಿಸುತ್ತಿದ್ದು, ಸಾರ್ವಜನಿಕ ಸಾರಿಗೆ ಬಳಕೆದಾರರು ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಒದಗಿಸುತ್ತದೆ.
ಮೈಸೂರು: ಕೌಟುಂಬಿಕ ಕಲಹದ ರೂಪಾಂತರವಾಗಿ ಜಗಳ ತೀವ್ರತೆ ಪಡೆದು ಕೊಲೆಯಾದ ಹೃದಯವಿದ್ರಾವಕ ಘಟನೆ ಮೈಸೂರಿನ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ…
ಬೆಂಗಳೂರು: ಮದುವೆಗಾಗಿ ಮನೆ ಖಾಲಿ ಇದ್ದನ್ನು ತಪ್ಪಾಗಿ ಬಳಸಿಕೊಂಡು ಬೃಹತ್ ಕಳ್ಳತನ ನಡೆಸಿದ ಮೂವರು ಆರೋಪಿಗಳನ್ನು ಸಿ.ಕೆ. ಅಚ್ಚುಕಟ್ಟು ಠಾಣೆ…
ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸೆಕ್ಷನ್ ಅಧಿಕಾರಿ…
ಹುಬ್ಬಳ್ಳಿ: ಮೂತ್ರ ವಿಸರ್ಜನೆಗೆಂದು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ದುರ್ಘಟನೆ ಹುಬ್ಬಳ್ಳಿಯ ಚನ್ನಪೇಟೆ…
ಹಾವೇರಿ: ಹಾನಗಲ್ ಸರ್ಕಲ್ ಇನ್ಸ್ಪೆಕ್ಟರ್ (ಸಿಪಿಐ) ಆಂಜನೇಯ ಎನ್.ಎಚ್. ಅವರನ್ನು ಸೇವೆಯಿಂದ ಅಮಾನತುಗೊಳಿಸುವ ಕ್ರಮ ಜರುಗಿದ್ದು, ಇದಕ್ಕೆ ಕಾರಣವಾಗಿರುವುದು ಸಮುದಾಯದ…
ಬೆಂಗಳೂರು ನಗರದಲ್ಲಿ ಮಕ್ಕಳ ಸುರಕ್ಷತೆಗಾಗಿ ಸಂಚಾರ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ಶಾಲಾ ಮಕ್ಕಳನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮದ್ಯಪಾನ ಮಾಡಿಕೊಂಡು…