Latest

ಮೆಟ್ರೋದಲ್ಲಿ ಗುಟ್ಕಾ ತಿಂದ ಪ್ರಯಾಣಿಕನ ವಿರುದ್ಧ ಆಕ್ರೋಶ: ವೈರಲ್ ವಿಡಿಯೋಗೆ ಸಂಸದನ ಪ್ರತಿಕ್ರಿಯೆ”

ಬೆಂಗಳೂರು ಮೆಟ್ರೋದಲ್ಲಿ ನಡೆದಿರುವ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ಜಾಗದಲ್ಲಿ ಸ್ವಚ್ಛತೆಯ ಅಗತ್ಯತೆ ಬಗ್ಗೆ ಮತ್ತೆ ಒಂದು ಬಾರಿ ಚರ್ಚೆಗೆ ಕಾರಣವಾಗಿದೆ.

ಘಟನೆ ವಿವರಕ್ಕೆ ಬಂದರೆ, ಒಬ್ಬ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಗುಟ್ಕಾ ತಿನ್ನುತ್ತಿದ್ದನ್ನು ಗಮನಿಸಿದ ಇತರ ಪ್ರಯಾಣಿಕರು ತೀವ್ರವಾಗಿ ಪ್ರತಿಸ್ಪಂದಿಸಿದರು. “ನಿಮಗೆ ಕಾಮನ್ ಸೆನ್ಸ್ ಇಲ್ಲವೇ?” ಎಂಬ ತೀವ್ರ ಶಬ್ಧಗಳಲ್ಲಿ ಆ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. “ಗುಟ್ಕಾ ತಿಂದು ಹೊರೆಸುವುದನ್ನು ನಿಲ್ಲಿಸಿ. ಇದು ನಮ್ಮೆಲ್ಲರ ಆಸ್ತಿ. ಇನ್ನು ಮುಂದೆ ಇಂಥ ವರ್ತನೆ ತೋರಬೇಡಿ,” ಎಂದು ಒಬ್ಬ ಪ್ರಯಾಣಿಕನೋರ್ವ ಸ್ಪಷ್ಟವಾಗಿ ಕ್ಲಾಸ್ ತೆಗೆದುಕೊಂಡ ದೃಶ್ಯ ಕ್ಯಾಮೆರಾಗೆ ಸಿಕ್ಕಿದೆ.

ಆದರೆ ಗುಟ್ಕಾ ತಿಂದ ವ್ಯಕ್ತಿ ಬಿಟ್ಟುಕೊಡುವ ಬದಲು, “ನಂಗೂ ಈ ಮೆಟ್ರೋ ಆಸ್ತಿಯಲ್ಲಿದ್ದೇನೆ. ನಾನೇನು ತಪ್ಪು ಮಾಡ್ಲಿಲ್ಲ” ಎಂಬ ಅಹಂಕಾರಪೂರ್ಣ ಭಾವದಿಂದ ತಿರುಗೇಟು ಕೊಟ್ಟ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಇದೊಂದು ದಿಕ್ಕುತೋರಿಸುವ ಸಂಗತಿಯಾಗಿದೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಹಲವರು ಸಾರ್ವಜನಿಕ ಸ್ವಚ್ಛತೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, “ಮೆಟ್ರೋ ಎಲ್ಲರ ಆಸ್ತಿ. ಅದರ ಸ್ವಚ್ಛತೆ ನಮ್ಮ ಜವಾಬ್ದಾರಿ. ಗುಟ್ಕಾ ತಿನ್ನುವುದು, ಎಸೆಯುವುದು ಅಮಾನ್ಯ. ಬಿಎಂಆರ್ಸಿಎಲ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.

ಈ ಪ್ರಕರಣ ಸಾರ್ವಜನಿಕ ಜಾಗದಲ್ಲಿ ನಡವಳಿಕೆಯ ಕುರಿತು ಪಾಠ ಕಲಿಸುತ್ತಿದ್ದು, ಸಾರ್ವಜನಿಕ ಸಾರಿಗೆ ಬಳಕೆದಾರರು ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಒದಗಿಸುತ್ತದೆ.

nazeer ahamad

Recent Posts

ಬಾಗಲಕೋಟೆ ನಗರದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬಾಗಲಕೋಟೆ: ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮದ ಚೀಫ್ ಇಂಜಿನಿಯರ್ ವಸಂತ ವಾಲಪ್ಪ ನಾಯಕ ಅವರ ಬೆಂಗಳೂರು ಸೇರಿದಂತೆ ಬಾಗಲಕೋಟೆಯಲ್ಲಿರುವ ಮನೆಯ…

2 days ago

ಗ್ರಾಮ ಲೆಕ್ಕಾಧಿಕಾರಿ ಲೋಕಾಯುಕ್ತ ಬಲೆಗೆ

ಮಂಚೇನಹಳ್ಳಿ : ತಾಲ್ಲೂಕಿನ ಕಚೇರಿಯಲ್ಲಿ ಗ್ರಾಮ ಲೆಕ್ಕಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಕಿರಣ್ ಕುಮಾರ್ ಗೂಗಲ್ ಪೇ ಮೂಲಕ ಹಣ ವರ್ಗಾವಣೆ…

2 weeks ago

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ…!

ಸರ್ಕಾರಿ ಖರಾಬು ಗೋಮಾಳದಲ್ಲಿ ಹೈಟೆಕ್ ಪೌಲ್ಟ್ರಿ ಫಾರಂ ನಿರ್ಮಿಸಿಕೊಂಡಿದ್ದರೂ ಅದನ್ನು ತೆರವುಗೊಳಿಸಿ ಸರ್ಕಾರದ ಆಸ್ತಿ ರಕ್ಷಣೆ ಮಾಡಿಕೊಳ್ಳಲು ತಾಲೂಕು ಆಡಳಿತ…

2 weeks ago

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲ: ಬಡ ರೋಗಿಗಳ ಸುಲಿಗೆಗೆ ಮುಂದಾದ ಖಾಸಗಿ ಆಸ್ಪತ್ರೆಗಳು…!

ನಂಜನಗೂಡು : ಸುಮಾರು 60 ಹಳ್ಳಿಗಳಿಗೂ ಹೆಚ್ಚು ಗ್ರಾಮೀಣ ಜನರ ಆರೋಗ್ಯಕ್ಕೆ ಆಧಾರವಾಗಿದ್ದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸ್ವಲ್ಪ ಜ್ವರ…

3 weeks ago

ಅನ್ನಭಾಗ್ಯದ 4 ಕ್ವಿಂಟಾಲ್ ಅಕ್ಕಿ ಮತ್ತು 80 ಕ್ವಿಂಟಲ್ ರಾಗಿ ಅಕ್ರಮ ದಾಸ್ತಾನು

ಗೌರಿಬಿದನೂರು ಅನ್ನಭಾಗ್ಯ ಯೋಜನೆಯ ಅಕ್ಕಿ ಮತ್ತು ರಾಗಿಯನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿದ್ದ ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋದಾಮು ಮೇಲೆ…

4 weeks ago

ಪ್ರೀತಿಸಿದವಳನ್ನೇ ಕೊಂದ ಪಾಪಿ ಪತಿರಾಯ

ಗೌರಿಬಿದನೂರು:  ಪ್ರೀತಿ-ಪ್ರೇಮ ಅಂತ ಓಡಾಡ್ತಿದ್ದವನು ಮದುವೆ ಬಳಿಕ ಚೆನ್ನಾಗಿ ನೋಡಿಕೊಳ್ಳುವ ಭರವಸೆ ಕೊಟ್ಟಿದ್ದ. ಆತನ ಮಾತು ನಂಬಿ ತಾಳಿ ಕಟ್ಟಿಸಿಕೊಂಡು…

1 month ago