Latest

ಮೆಟ್ರೋದಲ್ಲಿ ಗುಟ್ಕಾ ತಿಂದ ಪ್ರಯಾಣಿಕನ ವಿರುದ್ಧ ಆಕ್ರೋಶ: ವೈರಲ್ ವಿಡಿಯೋಗೆ ಸಂಸದನ ಪ್ರತಿಕ್ರಿಯೆ”

ಬೆಂಗಳೂರು ಮೆಟ್ರೋದಲ್ಲಿ ನಡೆದಿರುವ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ಜಾಗದಲ್ಲಿ ಸ್ವಚ್ಛತೆಯ ಅಗತ್ಯತೆ ಬಗ್ಗೆ ಮತ್ತೆ ಒಂದು ಬಾರಿ ಚರ್ಚೆಗೆ ಕಾರಣವಾಗಿದೆ.

ಘಟನೆ ವಿವರಕ್ಕೆ ಬಂದರೆ, ಒಬ್ಬ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಗುಟ್ಕಾ ತಿನ್ನುತ್ತಿದ್ದನ್ನು ಗಮನಿಸಿದ ಇತರ ಪ್ರಯಾಣಿಕರು ತೀವ್ರವಾಗಿ ಪ್ರತಿಸ್ಪಂದಿಸಿದರು. “ನಿಮಗೆ ಕಾಮನ್ ಸೆನ್ಸ್ ಇಲ್ಲವೇ?” ಎಂಬ ತೀವ್ರ ಶಬ್ಧಗಳಲ್ಲಿ ಆ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. “ಗುಟ್ಕಾ ತಿಂದು ಹೊರೆಸುವುದನ್ನು ನಿಲ್ಲಿಸಿ. ಇದು ನಮ್ಮೆಲ್ಲರ ಆಸ್ತಿ. ಇನ್ನು ಮುಂದೆ ಇಂಥ ವರ್ತನೆ ತೋರಬೇಡಿ,” ಎಂದು ಒಬ್ಬ ಪ್ರಯಾಣಿಕನೋರ್ವ ಸ್ಪಷ್ಟವಾಗಿ ಕ್ಲಾಸ್ ತೆಗೆದುಕೊಂಡ ದೃಶ್ಯ ಕ್ಯಾಮೆರಾಗೆ ಸಿಕ್ಕಿದೆ.

ಆದರೆ ಗುಟ್ಕಾ ತಿಂದ ವ್ಯಕ್ತಿ ಬಿಟ್ಟುಕೊಡುವ ಬದಲು, “ನಂಗೂ ಈ ಮೆಟ್ರೋ ಆಸ್ತಿಯಲ್ಲಿದ್ದೇನೆ. ನಾನೇನು ತಪ್ಪು ಮಾಡ್ಲಿಲ್ಲ” ಎಂಬ ಅಹಂಕಾರಪೂರ್ಣ ಭಾವದಿಂದ ತಿರುಗೇಟು ಕೊಟ್ಟ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಇದೊಂದು ದಿಕ್ಕುತೋರಿಸುವ ಸಂಗತಿಯಾಗಿದೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಹಲವರು ಸಾರ್ವಜನಿಕ ಸ್ವಚ್ಛತೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, “ಮೆಟ್ರೋ ಎಲ್ಲರ ಆಸ್ತಿ. ಅದರ ಸ್ವಚ್ಛತೆ ನಮ್ಮ ಜವಾಬ್ದಾರಿ. ಗುಟ್ಕಾ ತಿನ್ನುವುದು, ಎಸೆಯುವುದು ಅಮಾನ್ಯ. ಬಿಎಂಆರ್ಸಿಎಲ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.

ಈ ಪ್ರಕರಣ ಸಾರ್ವಜನಿಕ ಜಾಗದಲ್ಲಿ ನಡವಳಿಕೆಯ ಕುರಿತು ಪಾಠ ಕಲಿಸುತ್ತಿದ್ದು, ಸಾರ್ವಜನಿಕ ಸಾರಿಗೆ ಬಳಕೆದಾರರು ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಒದಗಿಸುತ್ತದೆ.

nazeer ahamad

Recent Posts

ಮುಖ್ಯಮಂತ್ರಿಗಳ ಸೂಚನೆ ಕಟ್ಟುನಿಟ್ಟಾಗಿ ಪಾಲಿಸಿ: ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಕಾರವಾರ: ಜಿಲ್ಲೆಯಲ್ಲಿ ಪಾರದರ್ಶಕ, ಜನಪರ ಹಾಗೂ ಪರಿಣಾಮಕಾರಿ ಆಡಳಿತ ನೀಡಲು ಎಲ್ಲಾ ಸರ್ಕಾರಿ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಮುಖ್ಯಮಂತ್ರಿಗಳು…

9 hours ago

ಬಸ್‌ನಲ್ಲಿ ಅಸಭ್ಯವಾಗಿ ಯುತಿಯ ಮೈ ಮುಟ್ಟಿ ಕಿರುಕುಳ; ಧೈರ್ಯವಾಗಿ ವಿಡಿಯೋ ಮಾಡಿದ ಯುವತಿ, ಆರೋಪಿಯನ್ನು ಕೆಳಗಿಳಿಸಿದ ಕಂಡಕ್ಟರ್!

ಮಾರುಕಟ್ಟೆಯಿಂದ ಮನೆಗೆ ತೆರಳಲು ಖಾಸಗಿ ಬಸ್ ಹತ್ತಿದ್ದ ಯುವತಿಗೆ ಮಾರ್ಗಮಧ್ಯೆ ಕಿರುಕುಳ ನೀಡಿದ ಘಟನೆ ನಡೆದಿದೆ. ಬಸ್ ಚಲಿಸಲು ಆರಂಭಿಸಿದ…

9 hours ago

₹65 ಸಾವಿರ ಸಂಬಳದ ಮುಖ್ಯೋಪಾಧ್ಯಾಯರಿಗೆ ಶಾಲೆಗೆ ಬರಲು ಸಮಯವಿಲ್ಲ; ₹4,500ಕ್ಕೆ ಯುವತಿಯನ್ನು ನೇಮಿಸಿ ಪಾಠ ಮಾಡಿಸಿದ ‘ಸರ್ಕಾರಿ ಶಾಲೆ’ ವಂಚನೆ!

ಮಧ್ಯಪ್ರದೇಶ: ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಣ ವ್ಯವಸ್ಥೆಯನ್ನೇ ಅಣಕಿಸುವಂತಹ ಆಘಾತಕಾರಿ ಪ್ರಕರಣವೊಂದು ಮಧ್ಯಪ್ರದೇಶದ ಮುರೈನಾ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ತಿಂಗಳಿಗೆ ₹65…

9 hours ago

ಇನ್‌ಸ್ಟಾಗ್ರಾಮ್ ಕ್ಯೂಟ್ ಕಪಲ್ ಕಥೆಗೆ ಬಿಗ್ ಟ್ವಿಸ್ಟ್: ಕೋಟ್ಯಾಧಿಪತಿ ಪತ್ನಿ ಕಂಡಕ್ಟರ್ ಜೊತೆ ಪರಾರಿ ಆರೋಪ!

ಸೋಷಿಯಲ್ ಮೀಡಿಯಾದಲ್ಲಿ ಸದಾ ನಗುನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಕೇರಳದ ಜನಪ್ರಿಯ ಜೋಡಿ ಅಖಿಲ್ (Akhil NRD) ಮತ್ತು ಮೇಘಾ ಅವರ ದಾಂಪತ್ಯ…

9 hours ago

ಟೊರೊಂಟೊದಲ್ಲಿ ಭಾರತೀಯ ಮೂಲದ ಯುವತಿ ಹತ್ಯೆ: 7 ತಿಂಗಳ ಬಳಿಕ ಆಪ್ತ ವ್ಯಕ್ತಿ ಅರೆಸ್ಟ್‌!

ಟೊರೊಂಟೊ: ಕೆನಡಾದ ಟೊರೊಂಟೊದಲ್ಲಿ ಭಾರತೀಯ ಮೂಲದ 30 ವರ್ಷದ ಯುವತಿ ಹಿಮಾಂಶಿ ಖುರಾನಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು…

1 day ago

ಇನ್‌ಸ್ಟಾಗ್ರಾಂ ಪ್ರೇಮಿಗಾಗಿ 6 ತಿಂಗಳ ಕಂದಮ್ಮನನ್ನೇ ಕೊಲ್ಲಿಸಿದ ತಾಯಿ! ಮೀರಾಟ್‌ನಲ್ಲಿ ಬೆಚ್ಚಿಬೀಳಿಸಿದ ಘಟನೆ

ಮೀರಾಟ್: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಪ್ರೇಮಿಗಾಗಿ ತಾಯಿಯೊಬ್ಬಳು ತನ್ನ ಆರು ತಿಂಗಳ ಹಸುಗೂಸಿನ ಸಾವಿಗೆ ಕಾರಣಳಾದ ಆರೋಪ ಕೇಳಿಬಂದಿದ್ದು, ಉತ್ತರ…

1 day ago