Latest

ಮೆಟ್ರೋದಲ್ಲಿ ಗುಟ್ಕಾ ತಿಂದ ಪ್ರಯಾಣಿಕನ ವಿರುದ್ಧ ಆಕ್ರೋಶ: ವೈರಲ್ ವಿಡಿಯೋಗೆ ಸಂಸದನ ಪ್ರತಿಕ್ರಿಯೆ”

ಬೆಂಗಳೂರು ಮೆಟ್ರೋದಲ್ಲಿ ನಡೆದಿರುವ ಒಂದು ಘಟನೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿದ್ದು, ಸಾರ್ವಜನಿಕ ಜಾಗದಲ್ಲಿ ಸ್ವಚ್ಛತೆಯ ಅಗತ್ಯತೆ ಬಗ್ಗೆ ಮತ್ತೆ ಒಂದು ಬಾರಿ ಚರ್ಚೆಗೆ ಕಾರಣವಾಗಿದೆ.

ಘಟನೆ ವಿವರಕ್ಕೆ ಬಂದರೆ, ಒಬ್ಬ ವ್ಯಕ್ತಿ ಮೆಟ್ರೋ ರೈಲಿನಲ್ಲಿ ಗುಟ್ಕಾ ತಿನ್ನುತ್ತಿದ್ದನ್ನು ಗಮನಿಸಿದ ಇತರ ಪ್ರಯಾಣಿಕರು ತೀವ್ರವಾಗಿ ಪ್ರತಿಸ್ಪಂದಿಸಿದರು. “ನಿಮಗೆ ಕಾಮನ್ ಸೆನ್ಸ್ ಇಲ್ಲವೇ?” ಎಂಬ ತೀವ್ರ ಶಬ್ಧಗಳಲ್ಲಿ ಆ ವ್ಯಕ್ತಿಗೆ ತರಾಟೆ ತೆಗೆದುಕೊಂಡರು. “ಗುಟ್ಕಾ ತಿಂದು ಹೊರೆಸುವುದನ್ನು ನಿಲ್ಲಿಸಿ. ಇದು ನಮ್ಮೆಲ್ಲರ ಆಸ್ತಿ. ಇನ್ನು ಮುಂದೆ ಇಂಥ ವರ್ತನೆ ತೋರಬೇಡಿ,” ಎಂದು ಒಬ್ಬ ಪ್ರಯಾಣಿಕನೋರ್ವ ಸ್ಪಷ್ಟವಾಗಿ ಕ್ಲಾಸ್ ತೆಗೆದುಕೊಂಡ ದೃಶ್ಯ ಕ್ಯಾಮೆರಾಗೆ ಸಿಕ್ಕಿದೆ.

ಆದರೆ ಗುಟ್ಕಾ ತಿಂದ ವ್ಯಕ್ತಿ ಬಿಟ್ಟುಕೊಡುವ ಬದಲು, “ನಂಗೂ ಈ ಮೆಟ್ರೋ ಆಸ್ತಿಯಲ್ಲಿದ್ದೇನೆ. ನಾನೇನು ತಪ್ಪು ಮಾಡ್ಲಿಲ್ಲ” ಎಂಬ ಅಹಂಕಾರಪೂರ್ಣ ಭಾವದಿಂದ ತಿರುಗೇಟು ಕೊಟ್ಟ ಘಟನೆ ವಿಡಿಯೋದಲ್ಲಿ ದಾಖಲಾಗಿದ್ದು, ಇದೊಂದು ದಿಕ್ಕುತೋರಿಸುವ ಸಂಗತಿಯಾಗಿದೆ.

ಈ ವಿಡಿಯೋ ಭಾರೀ ವೈರಲ್ ಆಗಿದ್ದು, ಹಲವರು ಸಾರ್ವಜನಿಕ ಸ್ವಚ್ಛತೆ ಕುರಿತಾಗಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಈ ಘಟನೆಗೆ ಪ್ರತಿಕ್ರಿಯಿಸಿದ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿ.ಸಿ. ಮೋಹನ್, “ಮೆಟ್ರೋ ಎಲ್ಲರ ಆಸ್ತಿ. ಅದರ ಸ್ವಚ್ಛತೆ ನಮ್ಮ ಜವಾಬ್ದಾರಿ. ಗುಟ್ಕಾ ತಿನ್ನುವುದು, ಎಸೆಯುವುದು ಅಮಾನ್ಯ. ಬಿಎಂಆರ್ಸಿಎಲ್ ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು,” ಎಂದು ಹೇಳಿದ್ದಾರೆ.

ಈ ಪ್ರಕರಣ ಸಾರ್ವಜನಿಕ ಜಾಗದಲ್ಲಿ ನಡವಳಿಕೆಯ ಕುರಿತು ಪಾಠ ಕಲಿಸುತ್ತಿದ್ದು, ಸಾರ್ವಜನಿಕ ಸಾರಿಗೆ ಬಳಕೆದಾರರು ಹೆಚ್ಚಿನ ಜವಾಬ್ದಾರಿಯಿಂದ ವರ್ತಿಸಬೇಕಾದ ಅಗತ್ಯವಿದೆ ಎಂಬ ಸಂದೇಶವನ್ನು ಒದಗಿಸುತ್ತದೆ.

nazeer ahamad

Recent Posts

ಲಿವ್-ಇನ್ ಸಂಬಂಧದ ದುರಂತ ಅಂತ್ಯ: ಲವ್ ಜಿಹಾದ್ ಗೆ ಮತ್ತೊಂದು ಬಲಿ, ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣ ಚರ್ಚೆಗೆ ಗ್ರಾಸ

ಗುಜರಾತಿನ ರಾಜ್‌ಕೋಟ್‌ನಲ್ಲಿ ಯುವತಿ ನಂದಿನಿ ಬೋಸ್ಮಿಯಾ ಸಾವಿನ ಪ್ರಕರಣವು ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಆಮ್ ಆದ್ಮಿ ಪಕ್ಷದೊಂದಿಗೆ ಗುರುತಿಸಿಕೊಂಡಿದ್ದ ನಂದಿನಿ,…

5 hours ago

ಸದಾ ಶೀಲ ಶಂಕಿಸುತ್ತಿದ್ದವನು ಪ್ರೀತಿಸಿ ಮದುವೆಯಾದ ಪತ್ನಿಯನ್ನೇ ಕೊಂದ..!

ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹುಲ್ಲೇನಹಳ್ಳಿ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ಪತ್ನಿಯ ಶೀಲವನ್ನು ಅನುಮಾನಿಸುತ್ತಿದ್ದ ಪತಿಯೊಬ್ಬ ಕೊನೆಗೆ ಆಕೆಯನ್ನು…

5 hours ago

ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದ ನಿವೃತ್ತ ಸೈನಿಕ; ₹4 ಕೋಟಿ ಆಸ್ತಿಯನ್ನು ತಿರುಪತಿ ದೇವರಿಗೆ ದಾನ ಮಾಡಿದ ಹೃದಯವಿದ್ರಾವಕ ನಿರ್ಧಾರ

ದೇಶದ ಗಡಿಯಲ್ಲಿ ವರ್ಷಗಳ ಕಾಲ ಸೇವೆ ಸಲ್ಲಿಸಿ ನಿವೃತ್ತರಾದ ಸೈನಿಕರೊಬ್ಬರು, ಸ್ವಂತ ಮಕ್ಕಳ ನಿರ್ಲಕ್ಷ್ಯದಿಂದ ಮನನೊಂದು ತಮ್ಮ ಸುಮಾರು ₹4…

6 hours ago

ಬೇರೊಬ್ಬನೊಂದಿಗೆ ಓಡಿ ಹೋದ ತಾಯಿ: ಹಸಿದ ಕಂದಮ್ಮನನ್ನು ಮಡಿಲಲ್ಲಿ ಹಿಡಿದು ಮೆಡಿಕಲ್ಗೆ ಬಂದು ಕಣ್ಣೀರಿಟ್ಟ ತಂದೆ.

ಹಸಿದ ಕಂದಮ್ಮನ ಅಳುವನ್ನು ಸಮಾಧಾನಪಡಿಸಲಾಗದೆ ಅಸಹಾಯಕನಾಗಿ ನಿಂತ ತಂದೆಯೊಬ್ಬನ ಕಥೆ ಸಾಮಾಜಿಕ ಜಾಲತಾಣಗಳಲ್ಲಿ ಅನೇಕರ ಮನಕಲಕಿದೆ. ಪತ್ನಿ ಮನೆಯನ್ನು ತೊರೆದು…

6 hours ago

ಕುಟುಂಬದ ಮೂವರ ಹತ್ಯೆ ಪ್ರಕರಣ: ಹೆತ್ತವರನ್ನು ಕೊಂದ ಬಳಿಕ ಪ್ರಿಯಕರನೊಂದಿಗೆ ಹೋಗಿ ಸಿಗರೇಟ್ ಸೇದಿದ್ದ ಸೈಕೋ ಮಗಳು..!

ತಂದೆ, ತಾಯಿ ಮತ್ತು ತಂಗಿಯನ್ನು ಹತ್ಯೆ ಮಾಡಿದ ಆರೋಪದಲ್ಲಿ ಬಂಧಿತಳಾಗಿರುವ ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಪ್ರಕರಣದಲ್ಲಿ ದಿನದಿಂದ…

6 hours ago

ನಾಲ್ಕು ತಿಂಗಳ ಗರ್ಭಿಣಿ ಮಗುವಿನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ: ಕಲಬುರಗಿಯಲ್ಲಿ ಮನಕಲುಕುವ ಘಟನೆ

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಚಿಂಚನಸೂರ್ ಗ್ರಾಮದಲ್ಲಿ ಮನಕಲುಕುವ ಘಟನೆ ನಡೆದಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದ ಮಹಿಳೆಯೊಬ್ಬರು ತಮ್ಮ ಒಂದೂವರೆ…

6 hours ago