ತೆಲಂಗಾಣ, ಆಗಸ್ಟ್ 1: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ತೆಲಂಗಾಣದ ರೈತ ದಂಪತಿಯೊಬ್ಬರು ವಿಶೇಷ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಜಗ್ಗಾಯಪೇಟೆ ಸಮೀಪದ ಭೂಪಾಲಪಲ್ಲಿ ಜಿಲ್ಲೆಯ ವೇಶಲ್ಲಪಳ್ಳಿ ಗ್ರಾಮದ ರೈತ ದಂಪತಿ ಗಂಡಕುಲು ಮತ್ತು ಲಲಿತಾ ಅವರು ತಮ್ಮ ಎಮ್ಮೆಗಳನ್ನು ಸ್ಥಳೀಯ ಕಾಂಗ್ರೆಸ್ ಶಾಸಕ ಗಂದ್ರ ಸತ್ಯನಾರಾಯಣ ಅವರ ಕಚೇರಿ ಆವರಣದಲ್ಲಿ ಕಟ್ಟಿದ್ದಾರೆ.
ಈ ಪ್ರತಿಭಟನೆಯ ಹಿಂದಿನ ಕಾರಣವೇನೆಂದರೆ, ಇವರ ಎಮ್ಮೆಗಳ ಶೆಡ್ ಅನ್ನು ಅಧಿಕಾರಿಗಳು ಮುನ್ನೆಚ್ಚರಿಕೆ ಇಲ್ಲದೆ ತೆರವುಗೊಳಿಸಿದ್ದಾರಂತೆ. “ನಮ್ಮ ಗೊತ್ತಿಲ್ಲದೆ ಶೆಡ್ ಕೆಡವಲಾಯಿತು. ಇದಕ್ಕೆ ಕಾರಣ ಶಾಸಕರಾದ ಗಂದ್ರ ಸತ್ಯನಾರಾಯಣ. ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ,” ಎಂದು ರೈತ ದಂಪತಿ ಆಕ್ರೋಶ ವ್ಯಕ್ತಪಡಿಸಿದರು.
“ಎಮ್ಮೆಗಳಿಗೆ ಈಗ ಆಶ್ರಯವಿಲ್ಲ. ಹೆಣ್ಮಕ್ಕಳಂತೆ ನಾವು ಈ ಎಮ್ಮೆಗಳನ್ನು ನೋಡಿಕೊಳ್ಳುತ್ತೇವೆ. ಅವುಗಳನ್ನು ಬಿಡಲು ಆಗುತ್ತಿಲ್ಲ. ಆದ್ದರಿಂದ ತಾತ್ಕಾಲಿಕವಾಗಿ ಶಾಸಕರ ಕಚೇರಿ ಆವರಣವನ್ನೇ ಆಶ್ರಯವನ್ನಾಗಿಸಿಕೊಂಡಿದ್ದೇವೆ,” ಎಂದು ಲಲಿತಾ ಹೇಳಿದರು.
ತಾವು ಹೊಸ ಶೆಡ್ ನಿರ್ಮಿಸಲು ಸಮಯ ಬೇಕು ಎಂದು ದಂಪತಿ ತಿಳಿಸಿದ್ದಾರೆ. ಆವರೆಗೆ ಎಮ್ಮೆಗಳನ್ನು ಇದೇ ಸ್ಥಳದಲ್ಲಿ ಇಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಘಟನೆ ಸ್ಥಳೀಯರ ಮಧ್ಯೆ ಚರ್ಚೆಗೆ ಕಾರಣವಾಗಿದ್ದು, ಶಾಸಕರ ಕಚೇರಿಯ ಆವರಣದಲ್ಲಿ ಎಮ್ಮೆಗಳನ್ನು ಕಟ್ಟಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಅಧಿಕಾರಿಗಳ ಕ್ರಮದ ವೈಧತೆಯ ಬಗ್ಗೆ ಈಗ ಪ್ರಶ್ನೆಗಳು ಮೂಡಿದ್ದು, ಸಂಬಂಧಿತ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಮೈಸೂರು ನಗರದ ದಟ್ಟಗಳ್ಳಿ ಪ್ರದೇಶದಲ್ಲಿರುವ ಸಚಿವ ಸತೀಶ್ ಜಾರಕಿಹೊಳಿ ಅವರ ಸಂಬಂಧಿ ವೈ. ಮಂಜುನಾಥ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ…
ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಎಐ (AI) ತಂತ್ರಜ್ಞಾನವನ್ನು ದುರ್ಬಳಕೆ ಮಾಡಿಕೊಂಡು ಗೃಹಿಣಿಯೊಬ್ಬರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್…
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬ್ಯಾಡರಹಳ್ಳಿ ಮೂಲದ ರವಿ ಕುಟುಂಬಕ್ಕೆ ಮುತ್ತತ್ತಿ ಪ್ರವಾಸವೇ ಅಂತಿಮ ಯಾತ್ರೆಯಾಯಿತು. ದೇವರ ದರ್ಶನಕ್ಕಾಗಿ…
ತುಮಕೂರು ಜಿಲ್ಲೆಯ ಶಿರಾ ಸಮೀಪ ನಡೆದ ಭೀಕರ ಕೊಲೆ ಪ್ರಕರಣವೊಂದು ಜನರನ್ನು ಬೆಚ್ಚಿಬೀಳಿಸಿದೆ. ಹಣದಾಸೆಗೆ ಮನುಷ್ಯ ಎಷ್ಟರ ಮಟ್ಟಿಗೆ ಕ್ರೂರನಾಗಬಹುದು…
ಸಿದ್ದಾಪುರ: ತಾಲೂಕಿನ ಕಾನಸೂರ ಗ್ರಾಮದ ಇಂದಿರಾಗಾಂಧಿ ವಸತಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಗೋಕುಲ ಕೃಷ್ಣ ಗೌಡ ಸಾ. ವಿನ…
ಮುಂಡಗೋಡ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮೀಟರ್ ಬಡ್ಡಿ ದಂಧೆ ಹಾಗೂ ಸಮಾಜಘಾತಕ ಚಟುವಟಿಕೆಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉತ್ತರ ಕನ್ನಡ ಜಿಲ್ಲಾ…