ತೆಲಂಗಾಣ, ಆಗಸ್ಟ್ 1: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ತೆಲಂಗಾಣದ ರೈತ ದಂಪತಿಯೊಬ್ಬರು ವಿಶೇಷ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಜಗ್ಗಾಯಪೇಟೆ ಸಮೀಪದ ಭೂಪಾಲಪಲ್ಲಿ ಜಿಲ್ಲೆಯ ವೇಶಲ್ಲಪಳ್ಳಿ ಗ್ರಾಮದ ರೈತ ದಂಪತಿ ಗಂಡಕುಲು ಮತ್ತು ಲಲಿತಾ ಅವರು ತಮ್ಮ ಎಮ್ಮೆಗಳನ್ನು ಸ್ಥಳೀಯ ಕಾಂಗ್ರೆಸ್ ಶಾಸಕ ಗಂದ್ರ ಸತ್ಯನಾರಾಯಣ ಅವರ ಕಚೇರಿ ಆವರಣದಲ್ಲಿ ಕಟ್ಟಿದ್ದಾರೆ.
ಈ ಪ್ರತಿಭಟನೆಯ ಹಿಂದಿನ ಕಾರಣವೇನೆಂದರೆ, ಇವರ ಎಮ್ಮೆಗಳ ಶೆಡ್ ಅನ್ನು ಅಧಿಕಾರಿಗಳು ಮುನ್ನೆಚ್ಚರಿಕೆ ಇಲ್ಲದೆ ತೆರವುಗೊಳಿಸಿದ್ದಾರಂತೆ. “ನಮ್ಮ ಗೊತ್ತಿಲ್ಲದೆ ಶೆಡ್ ಕೆಡವಲಾಯಿತು. ಇದಕ್ಕೆ ಕಾರಣ ಶಾಸಕರಾದ ಗಂದ್ರ ಸತ್ಯನಾರಾಯಣ. ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ,” ಎಂದು ರೈತ ದಂಪತಿ ಆಕ್ರೋಶ ವ್ಯಕ್ತಪಡಿಸಿದರು.
“ಎಮ್ಮೆಗಳಿಗೆ ಈಗ ಆಶ್ರಯವಿಲ್ಲ. ಹೆಣ್ಮಕ್ಕಳಂತೆ ನಾವು ಈ ಎಮ್ಮೆಗಳನ್ನು ನೋಡಿಕೊಳ್ಳುತ್ತೇವೆ. ಅವುಗಳನ್ನು ಬಿಡಲು ಆಗುತ್ತಿಲ್ಲ. ಆದ್ದರಿಂದ ತಾತ್ಕಾಲಿಕವಾಗಿ ಶಾಸಕರ ಕಚೇರಿ ಆವರಣವನ್ನೇ ಆಶ್ರಯವನ್ನಾಗಿಸಿಕೊಂಡಿದ್ದೇವೆ,” ಎಂದು ಲಲಿತಾ ಹೇಳಿದರು.
ತಾವು ಹೊಸ ಶೆಡ್ ನಿರ್ಮಿಸಲು ಸಮಯ ಬೇಕು ಎಂದು ದಂಪತಿ ತಿಳಿಸಿದ್ದಾರೆ. ಆವರೆಗೆ ಎಮ್ಮೆಗಳನ್ನು ಇದೇ ಸ್ಥಳದಲ್ಲಿ ಇಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಘಟನೆ ಸ್ಥಳೀಯರ ಮಧ್ಯೆ ಚರ್ಚೆಗೆ ಕಾರಣವಾಗಿದ್ದು, ಶಾಸಕರ ಕಚೇರಿಯ ಆವರಣದಲ್ಲಿ ಎಮ್ಮೆಗಳನ್ನು ಕಟ್ಟಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಅಧಿಕಾರಿಗಳ ಕ್ರಮದ ವೈಧತೆಯ ಬಗ್ಗೆ ಈಗ ಪ್ರಶ್ನೆಗಳು ಮೂಡಿದ್ದು, ಸಂಬಂಧಿತ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಬೆಂಗಳೂರು: ಕುಂಬಳಗೋಡು ಠಾಣೆ ವ್ಯಾಪ್ತಿಯ ಗೇರುಪಾಳ್ಯದಲ್ಲಿ ಜುಲೈ 25ರಂದು ನಡೆದ ರೀಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಆರೋಪಿ ಧೀರಜ್…
ಉಡುಪಿ: ಮಾಡೆಲಿಂಗ್ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದ 27 ವರ್ಷದ ಯುವತಿ ಕೃತಿ ಬಂಗೇರಾ ಅವರು ಮೃತಪಟ್ಟಿರುವ ಘಟನೆ ಉಡುಪಿ ತಾಲೂಕಿನ ಕಲ್ಮಾಡಿಯಲ್ಲಿ…
ತೆಲುಗು ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಹಾಗೂ ನಟಿಯರ ಸುರಕ್ಷತೆ ಕುರಿತ ಚರ್ಚೆ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಖ್ಯಾತ ನಟಿ ಚಾಂದಿನಿ…
ನವವಿವಾಹಿತೆಯೊಬ್ಬಳ ದಾಂಪತ್ಯ ಜೀವನ ಆರಂಭವಾದ ಕೆಲವೇ ದಿನಗಳಲ್ಲಿ ನಡೆದ ಘಟನೆಯೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಮದುವೆಗೂ…
ದೆಹಲಿಯ ಮುನಿರ್ಕಾ ಪ್ರದೇಶದಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದ ಪತಿಯೊಬ್ಬ ಆಕೆಯ ಶವವನ್ನು ವಿಲೇವಾರಿ ಮಾಡಲು ಸ್ನೇಹಿತನ…
ಸೆಪ್ಟೆಂಬರ್ 1ರೊಳಗೆ ಸಮಗ್ರ ವರದಿ ಸಲ್ಲಿಸುವಂತೆ ಸೂಚನೆ | ಹಂಪಿಯ ಕೋರ್, ಬಫರ್ ಹಾಗೂ ಬಾಹ್ಯ ವಲಯಗಳಲ್ಲಿ ನಿಯಮ ಉಲ್ಲಂಘನೆ…