Latest

ಶೆಡ್ ಕೆಡವಿದ ಆಕ್ರೋಶ: ಕಾಂಗ್ರೆಸ್ ಶಾಸಕರ ಕಚೇರಿಯ ಆವರಣದಲ್ಲಿ ಎಮ್ಮೆಗಳನ್ನು ಕಟ್ಟಿದ ರೈತ ದಂಪತಿ!

ತೆಲಂಗಾಣ, ಆಗಸ್ಟ್ 1: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ತೆಲಂಗಾಣದ ರೈತ ದಂಪತಿಯೊಬ್ಬರು ವಿಶೇಷ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಜಗ್ಗಾಯಪೇಟೆ ಸಮೀಪದ ಭೂಪಾಲಪಲ್ಲಿ ಜಿಲ್ಲೆಯ ವೇಶಲ್ಲಪಳ್ಳಿ ಗ್ರಾಮದ ರೈತ ದಂಪತಿ ಗಂಡಕುಲು ಮತ್ತು ಲಲಿತಾ ಅವರು ತಮ್ಮ ಎಮ್ಮೆಗಳನ್ನು ಸ್ಥಳೀಯ ಕಾಂಗ್ರೆಸ್ ಶಾಸಕ ಗಂದ್ರ ಸತ್ಯನಾರಾಯಣ ಅವರ ಕಚೇರಿ ಆವರಣದಲ್ಲಿ ಕಟ್ಟಿದ್ದಾರೆ.

ಈ ಪ್ರತಿಭಟನೆಯ ಹಿಂದಿನ ಕಾರಣವೇನೆಂದರೆ, ಇವರ ಎಮ್ಮೆಗಳ ಶೆಡ್‌ ಅನ್ನು ಅಧಿಕಾರಿಗಳು ಮುನ್ನೆಚ್ಚರಿಕೆ ಇಲ್ಲದೆ ತೆರವುಗೊಳಿಸಿದ್ದಾರಂತೆ. “ನಮ್ಮ ಗೊತ್ತಿಲ್ಲದೆ ಶೆಡ್ ಕೆಡವಲಾಯಿತು. ಇದಕ್ಕೆ ಕಾರಣ ಶಾಸಕರಾದ ಗಂದ್ರ ಸತ್ಯನಾರಾಯಣ. ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ,” ಎಂದು ರೈತ ದಂಪತಿ ಆಕ್ರೋಶ ವ್ಯಕ್ತಪಡಿಸಿದರು.

“ಎಮ್ಮೆಗಳಿಗೆ ಈಗ ಆಶ್ರಯವಿಲ್ಲ. ಹೆಣ್ಮಕ್ಕಳಂತೆ ನಾವು ಈ ಎಮ್ಮೆಗಳನ್ನು ನೋಡಿಕೊಳ್ಳುತ್ತೇವೆ. ಅವುಗಳನ್ನು ಬಿಡಲು ಆಗುತ್ತಿಲ್ಲ. ಆದ್ದರಿಂದ ತಾತ್ಕಾಲಿಕವಾಗಿ ಶಾಸಕರ ಕಚೇರಿ ಆವರಣವನ್ನೇ ಆಶ್ರಯವನ್ನಾಗಿಸಿಕೊಂಡಿದ್ದೇವೆ,” ಎಂದು ಲಲಿತಾ ಹೇಳಿದರು.

ತಾವು ಹೊಸ ಶೆಡ್ ನಿರ್ಮಿಸಲು ಸಮಯ ಬೇಕು ಎಂದು ದಂಪತಿ ತಿಳಿಸಿದ್ದಾರೆ. ಆವರೆಗೆ ಎಮ್ಮೆಗಳನ್ನು ಇದೇ ಸ್ಥಳದಲ್ಲಿ ಇಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.

ಈ ಘಟನೆ ಸ್ಥಳೀಯರ ಮಧ್ಯೆ ಚರ್ಚೆಗೆ ಕಾರಣವಾಗಿದ್ದು, ಶಾಸಕರ ಕಚೇರಿಯ ಆವರಣದಲ್ಲಿ ಎಮ್ಮೆಗಳನ್ನು ಕಟ್ಟಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಅಧಿಕಾರಿಗಳ ಕ್ರಮದ ವೈಧತೆಯ ಬಗ್ಗೆ ಈಗ ಪ್ರಶ್ನೆಗಳು ಮೂಡಿದ್ದು, ಸಂಬಂಧಿತ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.

***

ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392

nazeer ahamad

Recent Posts

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ತಕ್ಷಣ ಶಾಸಕ ಸ್ಥಾನ ರದ್ದು, ಮುಂದೇನು?

ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…

8 hours ago

ಪೆಟ್ರೋಲ್ ಬಂಕ್ ನಕಾಶೆ ಅಪ್ಲೋಡ್‌ಗೆ ಹಣ ಬೇಡಿಕೆ – ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…

8 hours ago

ಖಾತೆಗಾಗಿ ಲಂಚ ಬೇಡಿಕೆ: ನೆಲಮಂಗಲದ ಕಳಲುಘಟ್ಟ ಪಿಡಿಓ ಲೋಕಾಯುಕ್ತ ಬಲೆಗೆ

ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…

11 hours ago

ವಿಷು ಪೋಸ್ಟರ್ ವಿವಾದ: ಶ್ರೀಕೃಷ್ಣನ ಪಕ್ಕದಲ್ಲಿ ಚಿಕನ್ ಚಿತ್ರ – ರೆಸ್ಟೋರೆಂಟ್ ಮಾಲೀಕ ಆರೆಸ್ಟ್.!!!

ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್‌ನಲ್ಲಿ ಶ್ರೀಕೃಷ್ಣನ…

13 hours ago

ಹಾರ್ಮುಝ್ ಜಲಸಂಧಿ ಮತ್ತೆ ತೆರೆಯಿತು: ಯುದ್ಧ ವಿರಾಮದ ಬಳಿಕ ಜಾಗತಿಕ ತೈಲ ಮಾರುಕಟ್ಟೆಗೆ ನೆಮ್ಮದಿ

ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…

13 hours ago

ಇನ್‌ಸ್ಟಾಗ್ರಾಮ್ ಹನಿಟ್ರ್ಯಾಪ್: 14 ವರ್ಷದ ಬಾಲಕ ಅಪಹರಣ – 1 ಕೋಟಿ ಸುಲಿಗೆ ಯತ್ನ, ಸಂಬಂಧಿಯೇ ಮಾಸ್ಟರ್ ಮೈಂಡ್!

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…

13 hours ago