ತೆಲಂಗಾಣ, ಆಗಸ್ಟ್ 1: ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲು ತೆಲಂಗಾಣದ ರೈತ ದಂಪತಿಯೊಬ್ಬರು ವಿಶೇಷ ರೀತಿಯ ಪ್ರತಿಭಟನೆ ನಡೆಸಿದ್ದಾರೆ. ಜಗ್ಗಾಯಪೇಟೆ ಸಮೀಪದ ಭೂಪಾಲಪಲ್ಲಿ ಜಿಲ್ಲೆಯ ವೇಶಲ್ಲಪಳ್ಳಿ ಗ್ರಾಮದ ರೈತ ದಂಪತಿ ಗಂಡಕುಲು ಮತ್ತು ಲಲಿತಾ ಅವರು ತಮ್ಮ ಎಮ್ಮೆಗಳನ್ನು ಸ್ಥಳೀಯ ಕಾಂಗ್ರೆಸ್ ಶಾಸಕ ಗಂದ್ರ ಸತ್ಯನಾರಾಯಣ ಅವರ ಕಚೇರಿ ಆವರಣದಲ್ಲಿ ಕಟ್ಟಿದ್ದಾರೆ.
ಈ ಪ್ರತಿಭಟನೆಯ ಹಿಂದಿನ ಕಾರಣವೇನೆಂದರೆ, ಇವರ ಎಮ್ಮೆಗಳ ಶೆಡ್ ಅನ್ನು ಅಧಿಕಾರಿಗಳು ಮುನ್ನೆಚ್ಚರಿಕೆ ಇಲ್ಲದೆ ತೆರವುಗೊಳಿಸಿದ್ದಾರಂತೆ. “ನಮ್ಮ ಗೊತ್ತಿಲ್ಲದೆ ಶೆಡ್ ಕೆಡವಲಾಯಿತು. ಇದಕ್ಕೆ ಕಾರಣ ಶಾಸಕರಾದ ಗಂದ್ರ ಸತ್ಯನಾರಾಯಣ. ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ,” ಎಂದು ರೈತ ದಂಪತಿ ಆಕ್ರೋಶ ವ್ಯಕ್ತಪಡಿಸಿದರು.
“ಎಮ್ಮೆಗಳಿಗೆ ಈಗ ಆಶ್ರಯವಿಲ್ಲ. ಹೆಣ್ಮಕ್ಕಳಂತೆ ನಾವು ಈ ಎಮ್ಮೆಗಳನ್ನು ನೋಡಿಕೊಳ್ಳುತ್ತೇವೆ. ಅವುಗಳನ್ನು ಬಿಡಲು ಆಗುತ್ತಿಲ್ಲ. ಆದ್ದರಿಂದ ತಾತ್ಕಾಲಿಕವಾಗಿ ಶಾಸಕರ ಕಚೇರಿ ಆವರಣವನ್ನೇ ಆಶ್ರಯವನ್ನಾಗಿಸಿಕೊಂಡಿದ್ದೇವೆ,” ಎಂದು ಲಲಿತಾ ಹೇಳಿದರು.
ತಾವು ಹೊಸ ಶೆಡ್ ನಿರ್ಮಿಸಲು ಸಮಯ ಬೇಕು ಎಂದು ದಂಪತಿ ತಿಳಿಸಿದ್ದಾರೆ. ಆವರೆಗೆ ಎಮ್ಮೆಗಳನ್ನು ಇದೇ ಸ್ಥಳದಲ್ಲಿ ಇಡಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಘಟನೆ ಸ್ಥಳೀಯರ ಮಧ್ಯೆ ಚರ್ಚೆಗೆ ಕಾರಣವಾಗಿದ್ದು, ಶಾಸಕರ ಕಚೇರಿಯ ಆವರಣದಲ್ಲಿ ಎಮ್ಮೆಗಳನ್ನು ಕಟ್ಟಿರುವುದು ಸಾರ್ವಜನಿಕರ ಗಮನ ಸೆಳೆಯುತ್ತಿದೆ. ಅಧಿಕಾರಿಗಳ ಕ್ರಮದ ವೈಧತೆಯ ಬಗ್ಗೆ ಈಗ ಪ್ರಶ್ನೆಗಳು ಮೂಡಿದ್ದು, ಸಂಬಂಧಿತ ಅಧಿಕಾರಿಗಳು ಸ್ಪಷ್ಟನೆ ನೀಡಬೇಕಿದೆ.
***
ಭ್ರಷ್ಟರ ಬೇಟೆ ಪತ್ರಿಕೆಗೆ ರಾಜ್ಯದ್ಯಂತ ವರದಿಗಾರರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ 8088070392
ಧಾರವಾಡ ಜಿಪಂ ಮಾಜಿ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಮಹತ್ವದ ತೀರ್ಪು ಹೊರಬಿದ್ದಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್…
ವಿಜಯಪುರ ಜಿಲ್ಲೆಯಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಸಿಲುಕಿರುವ ಘಟನೆ ನಡೆದಿದೆ. ಪೆಟ್ರೋಲ್ ಬಂಕ್ ಜಾಗದ…
ನಿವೇಶನದ ಖಾತೆ ಮಾಡಿಕೊಡಲು ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ನೆಲಮಂಗಲ ತಾಲೂಕಿನ ಕಳಲುಘಟ್ಟ ಗ್ರಾಮ ಪಂಚಾಯಿತಿ ಪಿಡಿಓ ಲೋಕಾಯುಕ್ತ…
ಕೇರಳದ ಅಲೆಪ್ಪಿ ಜಿಲ್ಲೆಯ ಚೆರ್ತಲಾದಲ್ಲಿ ವಿಷು ಹಬ್ಬದ ಶುಭಾಶಯ ಪೋಸ್ಟರ್ ಒಂದು ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಈ ಪೋಸ್ಟರ್ನಲ್ಲಿ ಶ್ರೀಕೃಷ್ಣನ…
ಇರಾನ್ ಮತ್ತು ಲೆಬನಾನ್ ನಡುವಿನ ಉದ್ವಿಗ್ನ ಪರಿಸ್ಥಿತಿ ಶಮನವಾಗುತ್ತಿರುವ ಹಿನ್ನೆಲೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹಾರ್ಮುಝ್ ಜಲಸಂಧಿಯನ್ನು ಮತ್ತೆ ಎಲ್ಲಾ…
ಛತ್ತೀಸ್ಗಢದ ದುರ್ಗ್ ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕನನ್ನು ಗುರಿಯಾಗಿಸಿಕೊಂಡು ಹನಿಟ್ರ್ಯಾಪ್ ಮೂಲಕ ನಡೆದ ಅಪಹರಣ ಪ್ರಕರಣ ಭಾರೀ ಸಂಚಲನ ಮೂಡಿಸಿದೆ. 14…